AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಡಿ ಪ್ರದೇಶದ ಪಬ್​ಗಳ ಮೇಲೆ​ ಬೆಂಗಳೂರು ಪೊಲೀಸ್​​ ದಾಳಿ: ಓರ್ವ ವಿದೇಶಿ ಮಹಿಳೆ ರಕ್ಷಣೆ

ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ಶುಕ್ರವಾರ ಸಂಜೆ ಸೆಂಟ್ರಲ್ ಬಿಸಿನೆಸ್ ಡಿಸ್ಟ್ರಿಕ್ಟ್ ಪ್ರದೇಶದ ಪಬ್​ಗಳ ಮೇಲೆ ದಾಳಿ ಮಾಡಿದ್ದು, ವಿವಿಧ ನಿಯಮಗಳು ಉಲ್ಲಂಘನೆಗಳಿಗಾಗಿ 20 ಪ್ರಕರಣಗಳನ್ನು ದಾಖಲಿಸಿದ್ದಾರೆ. ಕಾರ್ಯಚರಣೆ ವೇಳೆ ಓರ್ವ ವಿದೇಶಿ ಮಹಿಳೆ ರಕ್ಷಣೆ ಮಾಡಲಾಗಿದೆ.

ಸಿಬಿಡಿ ಪ್ರದೇಶದ ಪಬ್​ಗಳ ಮೇಲೆ​ ಬೆಂಗಳೂರು ಪೊಲೀಸ್​​ ದಾಳಿ: ಓರ್ವ ವಿದೇಶಿ ಮಹಿಳೆ ರಕ್ಷಣೆ
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on:Aug 26, 2023 | 4:03 PM

Share

ಬೆಂಗಳೂರು, ಆಗಸ್ಟ್​ 26: ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು (Bengaluru police) ಶುಕ್ರವಾರ ಸಂಜೆ ಸೆಂಟ್ರಲ್ ಬಿಸಿನೆಸ್ ಡಿಸ್ಟ್ರಿಕ್ಟ್ (CBD) ಪ್ರದೇಶದ ಪಬ್​ಗಳ ಮೇಲೆ ದಾಳಿ ಮಾಡಿದ್ದು, ವಿವಿಧ ನಿಯಮಗಳು ಉಲ್ಲಂಘನೆಗಳಿಗಾಗಿ 20 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಕುರಿತಾಗಿ ಬೆಂಗಳೂರು ಕೇಂದ್ರ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಆರ್.ಶ್ರೀನಿವಾಸ್ ಗೌಡ ಪ್ರತಿಕ್ರಿಯೆ ನೀಡಿದ್ದು, ವಿವಿಧ ಉಲ್ಲಂಘನೆಗಳಿಗಾಗಿ ನಾವು 20 ಪ್ರಕರಣಗಳನ್ನು ದಾಖಲಿಸಿದ್ದೇವೆ. ಮಧ್ಯರಾತ್ರಿ 1 ಗಂಟೆಯ ನಂತರ ವಾಣಿಜ್ಯ ಸಂಸ್ಥೆಗಳನ್ನು ತೆರೆದಿರುವವರ ವಿರುದ್ಧ ನಾವು ಕೆಪಿ ಕಾಯ್ದೆಯಡಿ 13 ಪ್ರಕರಣಗಳನ್ನು ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.

2 ಅಕ್ರಮ ಕಳ್ಳಸಾಗಾಣಿಕೆ ಕಾಯ್ದೆಯಲ್ಲಿ ಹೋಟೆಲ್ ಮ್ಯಾನೇಜರ್ ವಿರುದ್ಧ ಕೇಸ್​​ ದಾಖಲು ಮಾಡಲಾಗಿದ್ದು, ಕಾರ್ಯಚರಣೆಯಲ್ಲಿ ಓರ್ವ ವಿದೇಶಿ ಮಹಿಳೆಯ ರಕ್ಷಣೆ ಮಾಡಲಾಗಿದೆ. ಅದೇ ರೀತಿಯಾಗಿ ಪಾದಚಾರಿಗಳ ವಿರುದ್ಧ 291 ಐಪಿಸಿ ಅಡಿಯಲ್ಲಿ, ಸಾರ್ವಜನಿಕ ಉಪದ್ರವದ ವಿರುದ್ಧ 5 ಪ್ರಕರಣಗಳು ಸೇರಿದಂತೆ ಸಾರ್ವಜನಿಕ ತೊಂದರೆಗಾಗಿ ತೃತೀಯ ಲಿಂಗಿಗಳ ವಿರುದ್ಧ ಒಂದು ಕೇಸ್​ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಗ್ಯಾಸ್​ ಸಿಲಿಂಡರ್​​ ಕಳ್ಳತನ: ಇಬ್ಬರ ಬಂಧನ

ಇನ್ನು ಇತ್ತೀಚೆಗೆ ಅನೈತಿಕ ಚಟುವಟಿಕೆ ನಡೆಸಿದ ಆರೋಪ ಕೇಳಿ ಬಂದ ಹಿನ್ನೆಲೆ, ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್​ ಗೌಡ ನೇತೃತ್ವದಲ್ಲಿ ಎಂಜಿ ರಸ್ತೆ, ಬ್ರಿಗೇಡ್​ ರಸ್ತೆ, ಚರ್ಚ್​ ಸ್ಟ್ರೀಟ್​​ನಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ್ದು, 25 ವಿದೇಶಿಗರನ್ನ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಕೈ ಕೊಟ್ಟ ಮುಂಗಾರು ಮಳೆ, ಕೆಆರ್​ಎಸ್​ನಲ್ಲೂ ನೀರಿಲ್ಲ; ಬೆಂಗಳೂರಿಗೆ ಕಾದಿದೆ ನೀರಿನ ಸಮಸ್ಯೆ

ವಶಕ್ಕೆ ಪಡೆದ ಆಫ್ರಿಕನ್​ ಪ್ರಜೆಗಳಿಗೆ ಬೌರಿಂಗ್​ ಆಸ್ಪತ್ರೆಯಲ್ಲಿ ನಾರ್ಕೋಟಿಕ್​ ಟೆಸ್ಟ್​ ಮಾಡಿಸಲಾಗಿತ್ತು. ಈ ವೇಳೆ 6 ಮಂದಿ ಡ್ರಗ್​ ಸೇವನೆ ಮಾಡಿರೋದು ದೃಢಪಟ್ಟಿತ್ತು. ಇನ್ನು ಇಬ್ಬರು ಆರೋಪಿಗಳ ವೀಸಾ ಅವಧಿ ಮುಗಿದಿರೋದು ಕಂಡು ಬಂದಿತ್ತು. ಇಷ್ಟೇ ಅಲ್ಲ ಪೊಲೀಸರ ದಾಳಿ ವೇಳೆ ಓರ್ವ ಆರೋಪಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ರಿಂದ ಆತನ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆ ಮೂಲಕ ಬೆಂಗಳೂರಿನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದವರಿಗೆ ಶಾಕ್ ನೀಡಿದ್ದರು. ಪಬ್​, ಬಾರ್​, ರೆಸ್ಟೋರೆಂಟ್​ ಮಾಲೀಕರಿಗೂ ಈ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ಕೊಟ್ಟಿದ್ದರು.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:49 pm, Sat, 26 August 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ