ಸಿಬಿಡಿ ಪ್ರದೇಶದ ಪಬ್​ಗಳ ಮೇಲೆ​ ಬೆಂಗಳೂರು ಪೊಲೀಸ್​​ ದಾಳಿ: ಓರ್ವ ವಿದೇಶಿ ಮಹಿಳೆ ರಕ್ಷಣೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 26, 2023 | 4:03 PM

ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ಶುಕ್ರವಾರ ಸಂಜೆ ಸೆಂಟ್ರಲ್ ಬಿಸಿನೆಸ್ ಡಿಸ್ಟ್ರಿಕ್ಟ್ ಪ್ರದೇಶದ ಪಬ್​ಗಳ ಮೇಲೆ ದಾಳಿ ಮಾಡಿದ್ದು, ವಿವಿಧ ನಿಯಮಗಳು ಉಲ್ಲಂಘನೆಗಳಿಗಾಗಿ 20 ಪ್ರಕರಣಗಳನ್ನು ದಾಖಲಿಸಿದ್ದಾರೆ. ಕಾರ್ಯಚರಣೆ ವೇಳೆ ಓರ್ವ ವಿದೇಶಿ ಮಹಿಳೆ ರಕ್ಷಣೆ ಮಾಡಲಾಗಿದೆ.

ಸಿಬಿಡಿ ಪ್ರದೇಶದ ಪಬ್​ಗಳ ಮೇಲೆ​ ಬೆಂಗಳೂರು ಪೊಲೀಸ್​​ ದಾಳಿ: ಓರ್ವ ವಿದೇಶಿ ಮಹಿಳೆ ರಕ್ಷಣೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, ಆಗಸ್ಟ್​ 26: ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು (Bengaluru police) ಶುಕ್ರವಾರ ಸಂಜೆ ಸೆಂಟ್ರಲ್ ಬಿಸಿನೆಸ್ ಡಿಸ್ಟ್ರಿಕ್ಟ್ (CBD) ಪ್ರದೇಶದ ಪಬ್​ಗಳ ಮೇಲೆ ದಾಳಿ ಮಾಡಿದ್ದು, ವಿವಿಧ ನಿಯಮಗಳು ಉಲ್ಲಂಘನೆಗಳಿಗಾಗಿ 20 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಕುರಿತಾಗಿ ಬೆಂಗಳೂರು ಕೇಂದ್ರ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಆರ್.ಶ್ರೀನಿವಾಸ್ ಗೌಡ ಪ್ರತಿಕ್ರಿಯೆ ನೀಡಿದ್ದು, ವಿವಿಧ ಉಲ್ಲಂಘನೆಗಳಿಗಾಗಿ ನಾವು 20 ಪ್ರಕರಣಗಳನ್ನು ದಾಖಲಿಸಿದ್ದೇವೆ. ಮಧ್ಯರಾತ್ರಿ 1 ಗಂಟೆಯ ನಂತರ ವಾಣಿಜ್ಯ ಸಂಸ್ಥೆಗಳನ್ನು ತೆರೆದಿರುವವರ ವಿರುದ್ಧ ನಾವು ಕೆಪಿ ಕಾಯ್ದೆಯಡಿ 13 ಪ್ರಕರಣಗಳನ್ನು ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.

2 ಅಕ್ರಮ ಕಳ್ಳಸಾಗಾಣಿಕೆ ಕಾಯ್ದೆಯಲ್ಲಿ ಹೋಟೆಲ್ ಮ್ಯಾನೇಜರ್ ವಿರುದ್ಧ ಕೇಸ್​​ ದಾಖಲು ಮಾಡಲಾಗಿದ್ದು, ಕಾರ್ಯಚರಣೆಯಲ್ಲಿ ಓರ್ವ ವಿದೇಶಿ ಮಹಿಳೆಯ ರಕ್ಷಣೆ ಮಾಡಲಾಗಿದೆ. ಅದೇ ರೀತಿಯಾಗಿ ಪಾದಚಾರಿಗಳ ವಿರುದ್ಧ 291 ಐಪಿಸಿ ಅಡಿಯಲ್ಲಿ, ಸಾರ್ವಜನಿಕ ಉಪದ್ರವದ ವಿರುದ್ಧ 5 ಪ್ರಕರಣಗಳು ಸೇರಿದಂತೆ ಸಾರ್ವಜನಿಕ ತೊಂದರೆಗಾಗಿ ತೃತೀಯ ಲಿಂಗಿಗಳ ವಿರುದ್ಧ ಒಂದು ಕೇಸ್​ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಗ್ಯಾಸ್​ ಸಿಲಿಂಡರ್​​ ಕಳ್ಳತನ: ಇಬ್ಬರ ಬಂಧನ

ಇನ್ನು ಇತ್ತೀಚೆಗೆ ಅನೈತಿಕ ಚಟುವಟಿಕೆ ನಡೆಸಿದ ಆರೋಪ ಕೇಳಿ ಬಂದ ಹಿನ್ನೆಲೆ, ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್​ ಗೌಡ ನೇತೃತ್ವದಲ್ಲಿ ಎಂಜಿ ರಸ್ತೆ, ಬ್ರಿಗೇಡ್​ ರಸ್ತೆ, ಚರ್ಚ್​ ಸ್ಟ್ರೀಟ್​​ನಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ್ದು, 25 ವಿದೇಶಿಗರನ್ನ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಕೈ ಕೊಟ್ಟ ಮುಂಗಾರು ಮಳೆ, ಕೆಆರ್​ಎಸ್​ನಲ್ಲೂ ನೀರಿಲ್ಲ; ಬೆಂಗಳೂರಿಗೆ ಕಾದಿದೆ ನೀರಿನ ಸಮಸ್ಯೆ

ವಶಕ್ಕೆ ಪಡೆದ ಆಫ್ರಿಕನ್​ ಪ್ರಜೆಗಳಿಗೆ ಬೌರಿಂಗ್​ ಆಸ್ಪತ್ರೆಯಲ್ಲಿ ನಾರ್ಕೋಟಿಕ್​ ಟೆಸ್ಟ್​ ಮಾಡಿಸಲಾಗಿತ್ತು. ಈ ವೇಳೆ 6 ಮಂದಿ ಡ್ರಗ್​ ಸೇವನೆ ಮಾಡಿರೋದು ದೃಢಪಟ್ಟಿತ್ತು. ಇನ್ನು ಇಬ್ಬರು ಆರೋಪಿಗಳ ವೀಸಾ ಅವಧಿ ಮುಗಿದಿರೋದು ಕಂಡು ಬಂದಿತ್ತು. ಇಷ್ಟೇ ಅಲ್ಲ ಪೊಲೀಸರ ದಾಳಿ ವೇಳೆ ಓರ್ವ ಆರೋಪಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ರಿಂದ ಆತನ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆ ಮೂಲಕ ಬೆಂಗಳೂರಿನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದವರಿಗೆ ಶಾಕ್ ನೀಡಿದ್ದರು. ಪಬ್​, ಬಾರ್​, ರೆಸ್ಟೋರೆಂಟ್​ ಮಾಲೀಕರಿಗೂ ಈ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ಕೊಟ್ಟಿದ್ದರು.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:49 pm, Sat, 26 August 23