AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International day against drug abuse: ಬೆಂಗಳೂರಲ್ಲಿ ಕಳೆದ ಒಂದು ವರ್ಷದಲ್ಲಿ 57 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ

ಇಂದು ವಿಶ್ವ ಮಾದಕ ವಸ್ತು ವಿರೋಧಿ ದಿನ. ಇತ್ತೀಚಿನ ವರ್ಷಗಳಲ್ಲಿ ಯುವಕರು ಮಾದಕ ದ್ರವ್ಯ ವ್ಯಸನಿಗಳಾಗುತ್ತಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಅನೇಕ ಶಿಸ್ತು ಕ್ರಮಗಳನ್ನು ಕೈಗೊಂಡಿದ್ದಾರೆ.

International day against drug abuse: ಬೆಂಗಳೂರಲ್ಲಿ ಕಳೆದ ಒಂದು ವರ್ಷದಲ್ಲಿ 57 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ
ಸಾಂರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Jun 26, 2023 | 12:46 PM

Share

ಬೆಂಗಳೂರು: ಇಂದು (ಜೂ.26) ವಿಶ್ವ ಮಾದಕ ವಸ್ತು ವಿರೋಧಿ ದಿನ (International day against drug abuse) ಇತ್ತೀಚಿನ ವರ್ಷಗಳಲ್ಲಿ ಯುವಕರು ಮಾದಕ ದ್ರವ್ಯ (Drug) ವ್ಯಸನಿಗಳಾಗುತ್ತಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು (Bengaluru City Police) ಶಿಸ್ತು ಕ್ರಮಗಳನ್ನು ಕೈಗೊಂಡಿದ್ದಾರೆ. ಬೆಂಗಳೂರು ಪೊಲೀಸರು 2022 ಮತ್ತು 2023 ನೇ ಸಾಲಿನಲ್ಲಿ ಮಾದಕ ವಸ್ತು ಸೇವನೆ ಮತ್ತು ಮಾರಾಟ ವಿರುದ್ಧ ಒಟ್ಟು 6191 ಪ್ರಕರಣಗಳು ದಾಖಲಾಗಿದ್ದು, 117 ಕೋಟಿ ಮೌಲ್ಯದ 6261 ಕೆಜಿ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.

ಮಾದಕ ವಸ್ತುಗಳಲ್ಲಿ 6074 ಕೆಜಿ ಗಾಂಜಾ ಆಯಿಲ್, 5.5 ಕೆಜಿ ಬ್ರೌನ್ ಶುಗರ್, ಸಿಂಥೆಟಿಕ್, 2.554 ಕೆಜಿ ಅಫೀಮು ಮತ್ತು 15,689 ಕೆಜಿ ಎಂಡಿಎಂಎ ಸೇರಿ ವಿವಿಧ ವಿಧದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಕೂಡ ಇದೆ. ಆರೋಪಿಗಳು ಅಂತರಾಜ್ಯ ಮತ್ತು ವಿದೇಶಗಳಿಂದ  ಬೆಂಗಳೂರಿಗೆ ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದರು. ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಗೋವಾ, ಆಫ್ರಿಕಾ ಹಾಗೂ ಡಾರ್ಕ್ ವೆಬ್​ನಿಂದ ಬರುವ ಜನರು ನಗರದಲ್ಲಿ ಡ್ರಗ್ಸ್ ಮಾರುತ್ತಿದ್ದರು.

ಇವರು ಯುವತಿಯರು, ಟೆಕ್ಕಿಗಳು, ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. 77,323 ಭಾರತೀಯರು, 159 ವಿದೇಶಿ ಪ್ರಜೆಗಳನ್ನು ಬಂಧಸಿಲಾಗಿದೆ. 943 ಡ್ರಗ್ ಪೆಡ್ಲರಗಳ ಮೇಲೆ ಮತ್ತು 5248 ಡ್ರಗ್ ಸೇವನೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. 117 ಕೋಟಿ ಮೌಲ್ಯದ 6261 ಕೆಜಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.  ಇಂದು ಮಾದಕವಸ್ತು ಮಾರಾಟ ಮತ್ತು ಸೇವನೆ ವಿರೋಧಿ ದಿನ ಹಿನ್ನೆಲೆ ವಶಪಡಿಸಿಕೊಂಡ ಮಾದಕವಸ್ತುಗಳನ್ನು ಪೊಲೀಸರು ದಾಬಸ್​ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ನಾಶಪಡಿಸಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಬೆಂಗಳೂರು ಪೊಲೀಸರು ಮಾದಕ ವ್ಯಸನಿ ಹಾಗೂ ಮಾರಾಟಗಾರರ ವಿರುದ್ಧ ಸಮರ ಸಾರಿದ್ದು, ಅನೇಕರನ್ನು ಬಂಧಿಸಿದ್ದಾರೆ. ಇತ್ತೀಚಿಗೆ ನಗರದ ಬಾರ್​ ಹಾಗೂ ಪಬ್​​ಗಳ ಮೇಲೆ ದಾಳಿ ಮಾಡಿ ಮಾದಕ ವ್ಯಸನಿಗಳಾಗಿದ್ದ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದರು. ಅಲ್ಲದೇ ಮಾದಕವಸ್ತು ಮಾರಾಟ ಮತ್ತು ಸೇವನೆಯಲ್ಲಿ ತೊಡಗಿದ್ದ ಅನೇಕ ವಿದೇಶಿಯರನ್ನು ಗಡೀಪಾರು ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧನ

ಮೇ ಕೊನೆಯ ವಾರದಲ್ಲಿ ಅಧಿಕಾರ ವಹಿಸಿಕೊಂಡ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಅವರು ಮುಂದಿನ ವರ್ಷಗಳಲ್ಲಿ ಬೆಂಗಳೂರನ್ನು ಮಾದಕ ದ್ರವ್ಯ ಮುಕ್ತ ನಗರವನ್ನಾಗಿ ಮಾಡಲು ಇಲಾಖೆಗೆ ನಿರ್ದೇಶನ ನೀಡಿದರು.

ನಂತರ ಮಾತನಾಡಿದ ಅವರು, ಇಂದು ಎಲ್ಲ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ಮತ್ತು ಅದನ್ನು ನಿಭಾಯಿಸುವ ಬಗ್ಗೆ ಚರ್ಚಿಸಿದ್ದೇವೆ. ಬೆಂಗಳೂರು ಶೀಘ್ರದಲ್ಲೇ ಮಾದಕ ದ್ರವ್ಯ ಮುಕ್ತ ನಗರವಾಗಲಿದ್ದು, ಅದಕ್ಕಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಾವು ಯೋಜನೆಯನ್ನು ಹೊಂದಿದ್ದೇವೆ ಮತ್ತು ಮುಂಬರುವ ತಿಂಗಳುಗಳಲ್ಲಿ ನಾವು ಎಲ್ಲಾ ಪೆಡ್ಲರ್‌ಗಳನ್ನು ವಶಪಡಿಸಿಕೊಳ್ಳುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 am, Mon, 26 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ