AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 26.6 ಕೋಟಿ ಡ್ರಗ್ಸ್, ನಕಲಿ ನೋಟು ಪ್ರಿಂಟಿಂಗ್ ಜಾಲ ಭೇದಿಸಿದ ಪೊಲೀಸರು

ಬೆಂಗಳೂರು ಪೊಲೀಸರು ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಸಮರ ಸಾರಿದ್ದಾರೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು ₹26.6 ಕೋಟಿ ಮೌಲ್ಯದ MDMA ಮತ್ತು ಕೊಕೇನ್ ಜಪ್ತಿ ಮಾಡಿದೆ. ಕೋರಮಂಗಲದಲ್ಲಿ ₹34 ಲಕ್ಷ ಮೌಲ್ಯದ ಹೆರಾಯಿನ್ ಸಹ ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ, ಕುಂಬಳಗೋಡಿನಲ್ಲಿ ನಕಲಿ ನೋಟು ತಯಾರಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿ, 1.69 ಲಕ್ಷ ರೂ. ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ 26.6 ಕೋಟಿ ಡ್ರಗ್ಸ್, ನಕಲಿ ನೋಟು ಪ್ರಿಂಟಿಂಗ್ ಜಾಲ ಭೇದಿಸಿದ ಪೊಲೀಸರು
ಮಾದಕ ವಸ್ತು ಜಪ್ತಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 21, 2026 | 2:48 PM

Share

ಬೆಂಗಳೂರು, ಜು.21: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಮಾದಕ ವಸ್ತು ಜಾಲದ ವಿರುದ್ಧ ಪೊಲೀಸರು ಸಮರ ಸಾರಿದ್ದು, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ, ಕೋರಮಂಗಲ ಹಾಗೂ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಹಾಗೂ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಚೂಡಿದಾರ್‌ಗಳ ಒಳಗೆ ಹಾಕಿಕೊಂಡು ಅತ್ಯಂತ ಚಾಣಾಕ್ಷತನದಿಂದ ಎಂಡಿಎಂಎ ಮಾದಕ ವಸ್ತುವನ್ನು ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಭೇದಿಸಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹೀಲ್ ಕುಮಾರ್, ಸತ್ಯಂ, ಕಲೀಮ್ ಹಾಗೂ ಕನ್ನಯ್ಯ ಎಂಬ ವ್ಯಕ್ತಿಗಳನ್ನು ಬಂಧನ ಮಾಡಲಾಗಿದೆ.

ದೆಹಲಿಯಲ್ಲಿದ್ದ ನೈಜೀರಿಯಾ ಮೂಲದ ವ್ಯಕ್ತಿಯಿಂದ ಮಾದಕ ವಸ್ತು ಪಡೆದು ಬೆಂಗಳೂರಿನಲ್ಲಿದ್ದ ಮುಖ್ಯ ಆರೋಪಿ ಸಾಹೀಲ್ ಕುಮಾರ್‌ಗೆ ತಲುಪಿಸಲು ಸತ್ಯಂ, ಕಲೀಮ್ ಮತ್ತು ಕನ್ನಯ್ಯ ಯತ್ನಿಸುತ್ತಿದ್ದರು. ಈ ಹಿಂದೆ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ವಿಕ್ಟರ್ ಹಾಗೂ ಮೋಸಸ್ ನೀಡಿದ ಮಹತ್ವದ ಸುಳಿವು ಆಧರಿಸಿ ಸಿಸಿಬಿ ಪೊಲೀಸರು ಈ ಯಶಸ್ವಿ ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಬರೋಬ್ಬರಿ 26.6 ಕೋಟಿ ರೂಪಾಯಿ ಮೌಲ್ಯದ 12 ಕೆಜಿ 925 ಗ್ರಾಂ ಎಂಡಿಎಂಎ ಹಾಗೂ 60 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ.

ಕೋರಮಂಗಲದಲ್ಲಿ ಅಸ್ಸಾಂ ಮೂಲದ ಪೆಡ್ಲರ್ ಅರೆಸ್ಟ್: 34 ಲಕ್ಷದ ಹೆರಾಯಿನ್ ಜಪ್ತಿ

ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಡ್ರಗ್ಸ್ ಕಾರ್ಯಾಚರಣೆ ನಡೆದಿದ್ದು, ಅಸ್ಸಾಂನಿಂದ ಬೆಂಗಳೂರಿಗೆ ಮಾದಕ ವಸ್ತು ತಂದು ಮಾರಾಟ ಮಾಡುತ್ತಿದ್ದ ಪೆಡ್ಲರ್‌ನನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀದ್ ಹುಸ್ಸೇನ್ (ಅಸ್ಸಾಂ ಮೂಲದವನು) ಎಂಬುವವರನ್ನು ಬಂಧಿಸಿದ್ದಾರೆ.

ಅಸ್ಸಾಂನಿಂದ ನಗರಕ್ಕೆ ಹೆರಾಯಿನ್ ಸಾಗಿಸಿ ಅಕ್ರಮವಾಗಿ ಪೆಡ್ಲಿಂಗ್ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ. ಆರೋಪಿಯಿಂದ 34 ಲಕ್ಷ ರೂಪಾಯಿ ಮೌಲ್ಯದ 157 ಗ್ರಾಂ ಹೆರಾಯಿನ್ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ: ಬೃಹತ್​​ ಪ್ರತಿಭಟನೆ

ಕುಂಬಳಗೋಡಿನಲ್ಲಿ ನಕಲಿ ನೋಟು ಪ್ರಿಂಟ್ ಮಾಡ್ತಿದ್ದ ಜಾಲ ಅಂದರ್:

ಕುಂಬಳಗೋಡು ಠಾಣಾ ವ್ಯಾಪ್ತಿಯ ಕಣಮಿಣಿಕೆಯಲ್ಲಿ ಮನೆ ಬಾಡಿಗೆಗೆ ಪಡೆದು ನಕಲಿ ನೋಟು (ಖೋಟಾನೋಟು) ಪ್ರಿಂಟ್ ಮಾಡುತ್ತಿದ್ದ ಅಂತರರಾಜ್ಯ ಗ್ಯಾಂಗ್ ಮೇಲೆ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಮೈಸೂರು ಮೂಲದ ಅರವಿಂದ್ ಹಾಗೂ ಚೆನ್ನೈ ಮೂಲದ ವೆಂಕಟ ಸುಬ್ರಹ್ಮಣಿ ಎಂಬುವವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಕಣಮಿಣಿಕೆ ವ್ಯಾಪ್ತಿಯಲ್ಲಿದ್ದ ಬಾಡಿಗೆ ಮನೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

1,69,000 ರೂ. ಮೌಲ್ಯದ ನಕಲಿ ಖೋಟಾನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ನೋಟು ಪ್ರಿಂಟ್ ಮಾಡಲು ಬಳಸುತ್ತಿದ್ದ ಲ್ಯಾಪ್‌ಟಾಪ್​​ಗಳನ್ನು ಕೂಡ ವಶ ಪಡೆಯಲಾಗಿದೆ. ಇನ್ನು ಸಾಗಾಟಕ್ಕೆ ಬಳಸುತ್ತಿದ್ದ 1.60 ಲಕ್ಷ ರೂ. ಮೌಲ್ಯದ ಒಂದು ಕಾರು ವಶಕ್ಕೆ ಪಡೆಯಲಾಗಿದೆ. ನಗರದಲ್ಲಿ ಡ್ರಗ್ಸ್ ಸಾಗಾಟ ಅಥವಾ ಖೋಟಾನೋಟು ಅಕ್ರಮಗಳ ಕುರಿತು ಯಾವುದೇ ಅನುಮಾನಾಸ್ಪದ ಮಾಹಿತಿ ಸಿಕ್ಕಲ್ಲಿ ಸಾರ್ವಜನಿಕರು ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ‘112’ ತುರ್ತು ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು