AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಷ್ಪಾ ಸಿನಿಮಾ‌ ಸ್ಟೈಲ್​ನಲ್ಲಿ ಶ್ರೀಗಂಧ ಕಳ್ಳಸಾಗಣೆ ಮಾಡ್ತಿದ್ದವರು ಬೆಂಗಳೂರಿನಲ್ಲಿ ಲಾಕ್: ಚೀನಾಗೆ ಸಾಗಿಸಲಿದ್ದ 750 ಕೆಜಿ ಶ್ರೀಗಂಧ ವಶ

ತೆಲುಗು ಸಿನಿಮಾ ಪುಷ್ಪ-2ನಲ್ಲಿ ರಕ್ತಚಂದನ ಸ್ಮಗ್ಲಿಂಗ್ ಭಗ್ಗೆ ನೋಡಿಡುತ್ತೀರಿ. ಅದನ್ನೇ ಪ್ರೇರಣೆಯಾಗಿಸಿಕೊಂಡು, ಅದೇ ರೀತಿ ಶ್ರೀಗಂಧ ಕಳ್ಳಸಾಗಣೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗೊಂದು ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ಆಂಧ್ರ ಪ್ರದೇಶದ ಕರ್ನೂಲ್​ನಿಂದ ಶ್ರೀಗಂಧ ಕಳ್ಳಸಾಗಣೆ ಮಾಡಿ ಬೆಂಗಳೂರಿಗೆ ತಂದು ಚೀನಾಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂಬುದು ತಿಳಿದುಬಂದಿದೆ.

ಪುಷ್ಪಾ ಸಿನಿಮಾ‌ ಸ್ಟೈಲ್​ನಲ್ಲಿ ಶ್ರೀಗಂಧ ಕಳ್ಳಸಾಗಣೆ ಮಾಡ್ತಿದ್ದವರು ಬೆಂಗಳೂರಿನಲ್ಲಿ ಲಾಕ್: ಚೀನಾಗೆ ಸಾಗಿಸಲಿದ್ದ 750 ಕೆಜಿ ಶ್ರೀಗಂಧ ವಶ
ಸಿದ್ದಾಪುರ ಪೊಲೀಸ್ ಠಾಣೆ ಹಾಗೂ ಶ್ರೀಗಂಧ ಸಾಗಿಸುತ್ತಿದ್ದ ವಾಹನ
Ganapathi Sharma
|

Updated on:Oct 27, 2025 | 10:23 AM

Share

ಬೆಂಗಳೂರು, ಅಕ್ಟೋಬರ್ 27: ಬೆಂಗಳೂರಿನ (Bengaluru) ಸಿದ್ದಾಪುರ ಪೊಲೀಸರು‌ ನಾಕಬಂದಿ ಹಾಕಿ ಪರಿಶೀಲನೆ ಮಾಡುತ್ತಾ ಇದ್ದರು. ಅಷ್ಟರಲ್ಲಿ ಒಂದು ಪಿಕ್ ಅಪ್ ವಾಹನ ವೇಗವಾಗಿ ಬಂದು ಪೊಲೀಸರ ಮುಂದೆ ನಿಂತಿತ್ತು. ಚಾಲಕನ ಮುಖದಲ್ಲಿ ಅತಿಯಾದ ಆತ್ಮವಿಶ್ವಾಸ ಕಾಣಿಸಿತ್ತು. ಯಾಕೆಂದರೆ ಪಿಕ್ ಅಪ್ ವಾಹನದಲ್ಲಿ ಇದ್ದದ್ದು ಈರುಳ್ಳಿ ಮೂಟೆಗಳು. ಆದರೂ ಅನುಮಾನ ಬಂದ ಕಾರಣ ಪೊಲೀಸರು ಪಿಕ್ ಅಪ್ ವಾಹನ ಪರಿಶೀಲನೆ ಮಾಡಿದ್ದಾರೆ. ಈರುಳ್ಳಿ ಮೂಟೆಗಳನ್ನು ಸರಿಸಿ ಕೆಳಭಾಗದಲ್ಲಿ ಏನಿದೆ ಎಂದು ನೋಡಿದ್ದಾರೆ. ಅಲ್ಲಿ ಕಾಣಿಸಿದ ವಸ್ತು ಪೊಲೀಸರು ಒಂದು ಕ್ಷಣ ದಂಗಾಗಿಹೋಗುವಂತೆ ಮಾಡಿತ್ತು. ಯಾಕೆಂದರೆ, ಈರುಳ್ಳಿ ಮೂಟೆ ಅಡಿಯಲ್ಲಿ ಶ್ರೀಗಂಧದ ಮೂಟೆಯೇ ಇತ್ತು.

ಪುಷ್ಪಾ ಸಿನಿಮಾ‌ ಸ್ಟೈಲ್​ನಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಚೀಲದ ಅಡಿಯಲ್ಲಿ ಹಾಕಿ ಮೇಲೆ ಈರುಳ್ಳಿ ತುಂಬಿ ಸಾಗಿಸಲಾಗುತ್ತಿತ್ತು. ಆಂಧ್ರ ಪ್ರದೇಶದ ಕರ್ನೂಲ್​ನಿಂದ ಬೆಂಗಳೂರಿಗೆ ಶ್ರೀಗಂಧವನ್ನು ತಂದು ಇನ್ನೇನು ಗಮ್ಯ ತಲುಪುವಷ್ಟರಲ್ಲಿ ನಾಲ್ವರ ಗ್ಯಾಂಗ್ ಮಾಲು ಸಮೇತ ಪೊಲೀಸ್ ಬಲೆಗೆ ಬಿದ್ದಿದೆ.

ಆಂಧ್ರ ಪ್ರದೇಶದಿಂದ ಚೀನಾಗೆ ಶ್ರೀಗಂಧ ಕಳ್ಳಸಾಗಣೆ

ಸಿರಾಜ್ ಎಂಬಾತ ತನ್ನ ಗ್ಯಾಂಗ್​ನೊಂದಿಗೆ ಆಂಧ್ರ ಪ್ರದೇಶದ ಕರ್ನೂಲ್ ಕಾಡುಗಳಲ್ಲಿ ಶ್ರೀಗಂಧ ಕಡಿದು ಈರುಳ್ಳಿ ಮಾರಾಟಗಾರಾರ ವೇಷದಲ್ಲಿ ಬೆಂಗಳೂರಿಗೆ ತಂದು ಇಲ್ಲಿಂದ ಚೀನಾಗೆ ಪೂರೈಕೆ ಮಾಡುತ್ತಿದ್ದ. ಸಿದ್ಧಾಪುರ ಪೊಲೀಸರು ನಾಕಾಬಂದಿ ಹಾಕಿ ಪರಿಶೀಲನೆ ನಡೆಸಿದಾಗ ಈರುಳ್ಳಿ ಮೂಟೆಗಳಲ್ಲಿ 18 ಶ್ರೀಗಂಧದ ಮರದ ತುಂಡುಗಳ ಬ್ಯಾಗ್ ಸಿಕ್ಕಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ. ಆಂಧ್ರದ ಸಿರಾಜ್ ಎಂಬಾತ ಗ್ಯಾಂಗ್ ಸದಸ್ಯರೊಂದಿಗೆ ಸೇರಿ ಶ್ರೀಗಂಧ ಕಡಿದು, ಅಕ್ರಮವಾಗಿ ಖರಿದಿ ಮಾಡಿ ಬೆಂಗಳೂರಿನ ಡೀಲರ್​​ಗೆ ತಲುಪಿಸಿ ಬಳಿಕ ಆತನ ಮೂಲಕ ಚೀನಾಗೆ ಕಳುಹಿಸುತ್ತಿದ್ದ. ಸದ್ಯ ಶೇಖ್ ಶಾರೂಕ್, ಶೇಖ್ ಅಬ್ದುಲ್, ಪರಮೇಶ್, ರಾಮ್ ಭೂಪಾಲ್ ಎಂಬ ನಾಲ್ವರು ಶ್ರೀಗಂಧ ಸ್ಮಗ್ಲರ್​ಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಸಿಸಿಬಿ ಮೆಗಾ ಬೇಟೆ: 5.5 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ; ಇಬ್ಬರು ಅರೆಸ್ಟ್​

ಶ್ರೀಗಂಧ ಅಕ್ರಮ ಸಾಗಾಟದ ಜಾಲದ ತನಿಖೆ ಶುರುಮಾಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಬೆಂಗಳೂರಿನ ಡೀಲರ್​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:16 am, Mon, 27 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ