AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಷ್ಪಾ ಸಿನಿಮಾ‌ ಸ್ಟೈಲ್​ನಲ್ಲಿ ಶ್ರೀಗಂಧ ಕಳ್ಳಸಾಗಣೆ ಮಾಡ್ತಿದ್ದವರು ಬೆಂಗಳೂರಿನಲ್ಲಿ ಲಾಕ್: ಚೀನಾಗೆ ಸಾಗಿಸಲಿದ್ದ 750 ಕೆಜಿ ಶ್ರೀಗಂಧ ವಶ

ತೆಲುಗು ಸಿನಿಮಾ ಪುಷ್ಪ-2ನಲ್ಲಿ ರಕ್ತಚಂದನ ಸ್ಮಗ್ಲಿಂಗ್ ಭಗ್ಗೆ ನೋಡಿಡುತ್ತೀರಿ. ಅದನ್ನೇ ಪ್ರೇರಣೆಯಾಗಿಸಿಕೊಂಡು, ಅದೇ ರೀತಿ ಶ್ರೀಗಂಧ ಕಳ್ಳಸಾಗಣೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗೊಂದು ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ಆಂಧ್ರ ಪ್ರದೇಶದ ಕರ್ನೂಲ್​ನಿಂದ ಶ್ರೀಗಂಧ ಕಳ್ಳಸಾಗಣೆ ಮಾಡಿ ಬೆಂಗಳೂರಿಗೆ ತಂದು ಚೀನಾಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂಬುದು ತಿಳಿದುಬಂದಿದೆ.

ಪುಷ್ಪಾ ಸಿನಿಮಾ‌ ಸ್ಟೈಲ್​ನಲ್ಲಿ ಶ್ರೀಗಂಧ ಕಳ್ಳಸಾಗಣೆ ಮಾಡ್ತಿದ್ದವರು ಬೆಂಗಳೂರಿನಲ್ಲಿ ಲಾಕ್: ಚೀನಾಗೆ ಸಾಗಿಸಲಿದ್ದ 750 ಕೆಜಿ ಶ್ರೀಗಂಧ ವಶ
ಸಿದ್ದಾಪುರ ಪೊಲೀಸ್ ಠಾಣೆ ಹಾಗೂ ಶ್ರೀಗಂಧ ಸಾಗಿಸುತ್ತಿದ್ದ ವಾಹನ
ಗಣಪತಿ ಶರ್ಮಾ
|

Updated on:Oct 27, 2025 | 10:23 AM

Share

ಬೆಂಗಳೂರು, ಅಕ್ಟೋಬರ್ 27: ಬೆಂಗಳೂರಿನ (Bengaluru) ಸಿದ್ದಾಪುರ ಪೊಲೀಸರು‌ ನಾಕಬಂದಿ ಹಾಕಿ ಪರಿಶೀಲನೆ ಮಾಡುತ್ತಾ ಇದ್ದರು. ಅಷ್ಟರಲ್ಲಿ ಒಂದು ಪಿಕ್ ಅಪ್ ವಾಹನ ವೇಗವಾಗಿ ಬಂದು ಪೊಲೀಸರ ಮುಂದೆ ನಿಂತಿತ್ತು. ಚಾಲಕನ ಮುಖದಲ್ಲಿ ಅತಿಯಾದ ಆತ್ಮವಿಶ್ವಾಸ ಕಾಣಿಸಿತ್ತು. ಯಾಕೆಂದರೆ ಪಿಕ್ ಅಪ್ ವಾಹನದಲ್ಲಿ ಇದ್ದದ್ದು ಈರುಳ್ಳಿ ಮೂಟೆಗಳು. ಆದರೂ ಅನುಮಾನ ಬಂದ ಕಾರಣ ಪೊಲೀಸರು ಪಿಕ್ ಅಪ್ ವಾಹನ ಪರಿಶೀಲನೆ ಮಾಡಿದ್ದಾರೆ. ಈರುಳ್ಳಿ ಮೂಟೆಗಳನ್ನು ಸರಿಸಿ ಕೆಳಭಾಗದಲ್ಲಿ ಏನಿದೆ ಎಂದು ನೋಡಿದ್ದಾರೆ. ಅಲ್ಲಿ ಕಾಣಿಸಿದ ವಸ್ತು ಪೊಲೀಸರು ಒಂದು ಕ್ಷಣ ದಂಗಾಗಿಹೋಗುವಂತೆ ಮಾಡಿತ್ತು. ಯಾಕೆಂದರೆ, ಈರುಳ್ಳಿ ಮೂಟೆ ಅಡಿಯಲ್ಲಿ ಶ್ರೀಗಂಧದ ಮೂಟೆಯೇ ಇತ್ತು.

ಪುಷ್ಪಾ ಸಿನಿಮಾ‌ ಸ್ಟೈಲ್​ನಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಚೀಲದ ಅಡಿಯಲ್ಲಿ ಹಾಕಿ ಮೇಲೆ ಈರುಳ್ಳಿ ತುಂಬಿ ಸಾಗಿಸಲಾಗುತ್ತಿತ್ತು. ಆಂಧ್ರ ಪ್ರದೇಶದ ಕರ್ನೂಲ್​ನಿಂದ ಬೆಂಗಳೂರಿಗೆ ಶ್ರೀಗಂಧವನ್ನು ತಂದು ಇನ್ನೇನು ಗಮ್ಯ ತಲುಪುವಷ್ಟರಲ್ಲಿ ನಾಲ್ವರ ಗ್ಯಾಂಗ್ ಮಾಲು ಸಮೇತ ಪೊಲೀಸ್ ಬಲೆಗೆ ಬಿದ್ದಿದೆ.

ಆಂಧ್ರ ಪ್ರದೇಶದಿಂದ ಚೀನಾಗೆ ಶ್ರೀಗಂಧ ಕಳ್ಳಸಾಗಣೆ

ಸಿರಾಜ್ ಎಂಬಾತ ತನ್ನ ಗ್ಯಾಂಗ್​ನೊಂದಿಗೆ ಆಂಧ್ರ ಪ್ರದೇಶದ ಕರ್ನೂಲ್ ಕಾಡುಗಳಲ್ಲಿ ಶ್ರೀಗಂಧ ಕಡಿದು ಈರುಳ್ಳಿ ಮಾರಾಟಗಾರಾರ ವೇಷದಲ್ಲಿ ಬೆಂಗಳೂರಿಗೆ ತಂದು ಇಲ್ಲಿಂದ ಚೀನಾಗೆ ಪೂರೈಕೆ ಮಾಡುತ್ತಿದ್ದ. ಸಿದ್ಧಾಪುರ ಪೊಲೀಸರು ನಾಕಾಬಂದಿ ಹಾಕಿ ಪರಿಶೀಲನೆ ನಡೆಸಿದಾಗ ಈರುಳ್ಳಿ ಮೂಟೆಗಳಲ್ಲಿ 18 ಶ್ರೀಗಂಧದ ಮರದ ತುಂಡುಗಳ ಬ್ಯಾಗ್ ಸಿಕ್ಕಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ. ಆಂಧ್ರದ ಸಿರಾಜ್ ಎಂಬಾತ ಗ್ಯಾಂಗ್ ಸದಸ್ಯರೊಂದಿಗೆ ಸೇರಿ ಶ್ರೀಗಂಧ ಕಡಿದು, ಅಕ್ರಮವಾಗಿ ಖರಿದಿ ಮಾಡಿ ಬೆಂಗಳೂರಿನ ಡೀಲರ್​​ಗೆ ತಲುಪಿಸಿ ಬಳಿಕ ಆತನ ಮೂಲಕ ಚೀನಾಗೆ ಕಳುಹಿಸುತ್ತಿದ್ದ. ಸದ್ಯ ಶೇಖ್ ಶಾರೂಕ್, ಶೇಖ್ ಅಬ್ದುಲ್, ಪರಮೇಶ್, ರಾಮ್ ಭೂಪಾಲ್ ಎಂಬ ನಾಲ್ವರು ಶ್ರೀಗಂಧ ಸ್ಮಗ್ಲರ್​ಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಸಿಸಿಬಿ ಮೆಗಾ ಬೇಟೆ: 5.5 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ; ಇಬ್ಬರು ಅರೆಸ್ಟ್​

ಶ್ರೀಗಂಧ ಅಕ್ರಮ ಸಾಗಾಟದ ಜಾಲದ ತನಿಖೆ ಶುರುಮಾಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಬೆಂಗಳೂರಿನ ಡೀಲರ್​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:16 am, Mon, 27 October 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!