AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಗಣೇಶೋತ್ಸವ ಬಂದೋಬಸ್ತ್​​ಗೆ ತಯಾರಿ; 3 ರೀತಿ ಪ್ರದೇಶ ಗುರುತಿಸಿರುವ ಪೊಲೀಸರು

ಬೆಂಗಳೂರು ಪೊಲೀಸರು ಸೂಕ್ಷ್ಮ, ಅತೀಸೂಕ್ಷ್ಮ ಮತ್ತು ಸಾಮಾನ್ಯ ಏರಿಯಾಗಳೆಂದು 3 ರೀತಿಯಲ್ಲಿ ಸ್ಥಳ ಗುರುತಿಸಿ ದಿನದ 24 ಗಂಟೆಯೂ ಬಂದೋಬಸ್ತ್ ಕೈಗೊಳ್ಳಲು ಸಜ್ಜಾಗಿದ್ದಾರೆ. ಮೂರು ಪಾಳಿಯಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆಗೆ ಸಿದ್ಧತೆ ನಡೆಯುತ್ತಿದೆ. ಸದಾ ಬೀಟ್ ಇರಬೇಕು ಎಂದು ಸೂಕ್ಷ್ಮ ಪ್ರದೇಶ ಏರಿಯಾಗಳ ಇನ್ಸ್‌ಪೆಕ್ಟರ್​​ಗಳಿಗೆ ಕಮಿಷನರ್ ಸೂಚನೆ ನೀಡಿದ್ದಾರೆ.

ಬೆಂಗಳೂರಲ್ಲಿ ಗಣೇಶೋತ್ಸವ ಬಂದೋಬಸ್ತ್​​ಗೆ ತಯಾರಿ; 3 ರೀತಿ ಪ್ರದೇಶ ಗುರುತಿಸಿರುವ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Sep 03, 2024 | 9:50 AM

Share

ಬೆಂಗಳೂರು, ಸೆ​.03: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣೇಶ ಚತುರ್ಥಿಗೆ (Ganesha Chaturthi) ಕೌಂಟ್ ಡೌನ್ ಆರಂಭವಾಗಿದೆ. ಅದ್ದೂರಿಯಾಗಿ ಗಣೇಶ ಹಬ್ಬವನ್ನ ಆಚರಿಸಲು ಸಿಟಿ ಮಂದಿ ಸಜ್ಜಾಗುತ್ತಿದ್ದಾರೆ. ಇದರ ಜೊತೆಗೆ ಬೆಂಗಳೂರಲ್ಲಿ (Bengaluru) ಗಣೇಶೋತ್ಸವ ಬಂದೋಬಸ್ತ್​​ಗೆ ಪೊಲೀಸರು ತಯಾರಿ ಶುರು ಮಾಡಿದ್ದಾರೆ. ಪೊಲೀಸರು ಗಣೇಶ ಪ್ರತಿಷ್ಠಾಪನೆಗೆ 3 ರೀತಿ ಪ್ರದೇಶ ಗುರುತಿಸಿದ್ದಾರೆ. ಸೂಕ್ಷ್ಮ, ಅತೀಸೂಕ್ಷ್ಮ ಮತ್ತು ಸಾಮಾನ್ಯ ಏರಿಯಾಗಳೆಂದು 3 ರೀತಿಯಲ್ಲಿ ಸ್ಥಳ ಗುರುತಿಸಿ ದಿನದ 24 ಗಂಟೆಯೂ ಬಂದೋಬಸ್ತ್ ಕೈಗೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ.

ಮೂರು ಪಾಳಿಯಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆಗೆ ಸಿದ್ಧತೆ ನಡೆಯುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವ ಪಟ್ಟಿ ತಯಾರಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಚಾಮರಾಜಪೇಟೆ, ಜೆ.ಜೆ ನಗರ, ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ, ಎಸ್.ಜಿ. ಪಾಳ್ಯ, ವಿವೇಕನಗರ, ತಿಲಕ್ ನಗರ, ಬನಶಂಕರಿ, ಆರ್.ಟಿ. ನಗರ, ಜೆ.ಸಿ. ನಗರಗಳಲ್ಲಿ ಗಣೇಶ ಹಬ್ಬದಂದು ಕಟ್ಟೆಚ್ಚರ ವಹಿಸುವಂತೆ ಇನ್ಸ್‌ಪೆಕ್ಟರ್​ಗಳಿಗೆ ಕಮಿಷನರ್ ಸೂಚನೆ ನೀಡಿದ್ದಾರೆ.

ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಗೆ ಪಿಐಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸೂಕ್ಷ್ಮ ಪ್ರದೇಶಗಳ ಸುತ್ತಮುತ್ತ ಸಿಸಿ ಕ್ಯಾಮರಾ ಕಣ್ಗಾವಲು, ಗಣೇಶೋತ್ಸವ ಆಯೋಜಕರಿಂದ ಮಾಹಿತಿ ಪಡೆಯುವಂತೆ ಸೂಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳ ಮೆರವಣಿಗೆಯ ಬ್ಲೂಪ್ರಿಂಟ್ ರೆಡಿ ಮಾಡಬೇಕು. ಮೆರವಣಿಗೆಯ ಪ್ರತಿ ರಸ್ತೆಯಲ್ಲೂ ಸಿಸಿಟಿವಿ ಅಳವಡಿಕೆಗೆ ಸೂಚಿಸಲಾಗಿದೆ. ಹಬ್ಬ, ಮೆರವಣಿಗೆಯ ಪ್ರತಿಯೊಂದು ಕ್ಷಣವೂ ಸೆರೆಹಿಡಿಯುವಂತೆ ಹಾಗೂ ಏರಿಯಾಗಳಲ್ಲಿ ಪೊಲೀಸ್ ಸಿಬ್ಬಂದಿ ಸದಾ ಬೀಟ್ ಇರಬೇಕು ಎಂದು ಸೂಕ್ಷ್ಮ ಪ್ರದೇಶ ಏರಿಯಾಗಳ ಇನ್ಸ್‌ಪೆಕ್ಟರ್​​ಗಳಿಗೆ ಕಮಿಷನರ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Ganesh Chaturthi 3 yogas: ಈ ಬಾರಿ ಗಣೇಶ ಚತುರ್ಥಿಗೆ ಯಾವ 3 ಮಂಗಳಕರ ಯೋಗಗಳು ರೂಪುಗೊಳ್ಳುತ್ತಿವೆ? ಇಲ್ಲಿದೆ ವಿವರ

ಹಬ್ಬಕ್ಕೆ ತರಕಾರಿ ಬೆಲೆ ಏರಿಕೆ ಶಾಕ್

ಇನ್ನು ಮತ್ತೊಂದೆಡೆ ಮಳೆ ಹೊಡೆತದ ನಡುವೆ ವಾರದಲ್ಲಿ ತರಕಾರಿ ಗಳ ಬೆಲೆ 10 ರಿಂದ‌ 20 ರೂಪಾಯಿ‌ ಹೆಚ್ಚಾಗಿದ್ದು, ಹಬ್ಬಕ್ಕೆ ದರದ ಹೊರೆ ಬೀಳ್ತಿದೆ. ಕಳೆದ ವಾರ ಕೆಜಿಗೆ 50 ರೂಪಾಯಿ ಇದ್ದ ನಾಟಿ ಬೀನ್ಸ್ ಈ ವಾರ 80ಕ್ಕೆ ಏಕೆಯಾಗಿದೆ. 15 ರೂಪಾಯಿ ಇದ್ದ ಟೊಮ್ಯಾಟೋ 25ಕ್ಕೆ ಏರಿದೆ. ಮೆಣಸಿನಕಾಯಿ 60 – 80ರೂಪಾಯಿಗೆ ಹೆಚ್ಚಾಗಿದೆ. ಶುಂಠಿ 150 ರಿಂದ 260ಕ್ಕೆ ಏರಿಕೆಯಾಗಿದೆ. 400 ರೂಪಾಯಿ ಇದ್ದ ಬೆಳ್ಳುಳ್ಳಿ 410ರೂಪಾಯಿಗೆ ಮಾರಾಟವಾಗ್ತಿದೆ. ನಾಟಿ ಬಟಾಣಿ 200 ರಿಂದ 250 ರೂಪಾಯಿಗೆ ಏರಿಕೆಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ