AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Police: ಪೊಲೀಸ್ ಠಾಣೆ, ಪೊಲೀಸರ ಬಗ್ಗೆ ಫೀಡ್​ಬ್ಯಾಕ್ ಕೊಡಲು ಕ್ಯುಆರ್​​ ಕೋಡ್; ಬೆಂಗಳೂರು ಪೊಲೀಸರಿಂದ ‘ಲೋಕಸ್ಪಂದನ’

ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ಯುಆರ್​​ ಕೋಡ್ ಅನ್ನು ಪ್ರದರ್ಶಿಸಲಾಗುತ್ತಿದ್ದು, ಅದರ ಮೂಲಕ ಜನರು ತಮ್ಮ ಪ್ರತಿಕ್ರಿಯೆಯನ್ನು ನೀಡಬಹುದಾಗಿದೆ.

Bengaluru Police: ಪೊಲೀಸ್ ಠಾಣೆ, ಪೊಲೀಸರ ಬಗ್ಗೆ ಫೀಡ್​ಬ್ಯಾಕ್ ಕೊಡಲು ಕ್ಯುಆರ್​​ ಕೋಡ್; ಬೆಂಗಳೂರು ಪೊಲೀಸರಿಂದ ‘ಲೋಕಸ್ಪಂದನ’
ಬೆಂಗಳೂರು ಪೊಲೀಸ್ ಆಯುಕ್ತರು ಟ್ವೀಟ್ ಮಾಡಿರುವ ಚಿತ್ರImage Credit source: Twitter
ಗಣಪತಿ ಶರ್ಮಾ
|

Updated on: Jul 12, 2023 | 10:29 PM

Share

ಬೆಂಗಳೂರು: ಪೊಲೀಸ್ ಠಾಣೆ ಮತ್ತು ಪೊಲೀಸರ ಬಗ್ಗೆ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳಲು ನಾಗರಿಕರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು ಪೊಲೀಸರು (Bengaluru Police) ‘ಲೋಕಸ್ಪಂದನ’ ಎಂಬ ಕ್ಯುಆರ್​​ ಕೋಡ್ (QR Code)  ಸೇವೆಯನ್ನು ಆರಂಭಿಸಿದ್ದಾರೆ. ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ಯುಆರ್​​ ಕೋಡ್ ಅನ್ನು ಪ್ರದರ್ಶಿಸಲಾಗುತ್ತಿದ್ದು, ಅದರ ಮೂಲಕ ಜನರು ತಮ್ಮ ಪ್ರತಿಕ್ರಿಯೆಯನ್ನು ನೀಡಬಹುದಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಈ ವಿಚಾರವಾಗಿ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು. ಜನರಿಗೆ ಉತ್ತಮ ಸೇವೆ ಒದಗಿಸಲು ಇದು ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

ಹೊಸ ಉಪಕ್ರಮದ ಕುರಿತು ‘ನ್ಯೂಸ್ 9’ನೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತರು, ಇದು ವಿವಿಧ ಪೊಲೀಸ್ ಠಾಣೆಗಳ ಕಾರ್ಯಕ್ಷಮತೆಯನ್ನು ಪತ್ತೆಹಚ್ಚಲು ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

ಡಿಸಿಪಿಗಳ ನೇತೃತ್ವದಲ್ಲಿ ಎಲ್ಲಾ ವಿಭಾಗಗಳಲ್ಲಿ ಮತ್ತು ಕಮಿಷನರೇಟ್‌ನಲ್ಲಿರುವ ಕಮಾಂಡ್ ಸೆಂಟರ್‌ನಲ್ಲಿ ಪ್ರತಿಕ್ರಿಯೆಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಯಾವುದೇ ಉದ್ದೇಶಕ್ಕಾಗಿ ಪೊಲೀಸ್ ಠಾಣೆಗಳಿಗೆ ಹೋಗುವ ಜನರಿಗೆ ಏನಾಗುತ್ತದೆ ಎಂಬುದನ್ನು ನಾವು ಈ ಮೂಲಕ ಅರ್ಥಮಾಡಿಕೊಳ್ಳಬಹುದು. ಸೇವೆಯಲ್ಲಿ ಯಾವುದೇ ವಿಳಂಬವಾಗಿದೆಯೇ ಮತ್ತು ಅವರು ಸಂಬಂಧಪಟ್ಟ ಅಧಿಕಾರಿಗಳ ಕೆಲಸದಿಂದ ತೃಪ್ತರಾಗಿದ್ದಾರೆಯೇ ಎಂಬುದನ್ನು ನಾವು ಟ್ರ್ಯಾಕ್ ಮಾಡಬಹುದು. ಇದರಿಂದ ಠಾಣೆ ಮಟ್ಟದಲ್ಲಿನ ಕಾರ್ಯವೈಖರಿಯನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ದಯಾನಂದ ಅವರು ತಿಳಿಸಿದ್ದಾರೆ.

ಪ್ರತಿಕ್ರಿಯೆಯ ಆಧಾರದಲ್ಲಿ ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಕೌನ್ಸೆಲಿಂಗ್ ಅಥವಾ ಶಿಸ್ತು ಕ್ರಮದ ರೂಪದಲ್ಲಿ ಪರಿಹರಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳ್ಳುಳ್ಳಿ ರೀತಿ ಕಾಣಿಸುವ ಈ ವಸ್ತು ಮಾದಕ ಲೋಕದ ರಾಣಿ; ಸಿಲಿಕಾನ್ ಸಿಟಿಯಲ್ಲಿ ಹೊಸ ಮಾದರಿ ಡ್ರಗ್ಸ್ ಹವಾ, ಬೇಟೆಗಿಳಿದ ಪೊಲೀಸರು

ಜನರ ಪ್ರತಿಕ್ರಿಯೆಯ ಆಧಾರದ ಮೇಲೆ, ಯಾವ ಪೊಲೀಸ್ ಠಾಣೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಯಾವುದು ಕೆಟ್ಟದಾಗಿದೆ ಎಂದು ನಮಗೆ ತಿಳಿಯುತ್ತದೆ. ಯಾವುದೇ ವರ್ತನೆಯ ಸಮಸ್ಯೆಗಳು ಅಥವಾ ಇತರ ಕೆಲವು ಸಮಸ್ಯೆಗಳನ್ನು ಪರಿಸ್ಥಿತಿಗೆ ಅನುಗುಣವಾಗಿ ಸರಿಪಡಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಆಯುಕ್ತರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!