AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Police: ಪೊಲೀಸ್ ಠಾಣೆ, ಪೊಲೀಸರ ಬಗ್ಗೆ ಫೀಡ್​ಬ್ಯಾಕ್ ಕೊಡಲು ಕ್ಯುಆರ್​​ ಕೋಡ್; ಬೆಂಗಳೂರು ಪೊಲೀಸರಿಂದ ‘ಲೋಕಸ್ಪಂದನ’

ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ಯುಆರ್​​ ಕೋಡ್ ಅನ್ನು ಪ್ರದರ್ಶಿಸಲಾಗುತ್ತಿದ್ದು, ಅದರ ಮೂಲಕ ಜನರು ತಮ್ಮ ಪ್ರತಿಕ್ರಿಯೆಯನ್ನು ನೀಡಬಹುದಾಗಿದೆ.

Bengaluru Police: ಪೊಲೀಸ್ ಠಾಣೆ, ಪೊಲೀಸರ ಬಗ್ಗೆ ಫೀಡ್​ಬ್ಯಾಕ್ ಕೊಡಲು ಕ್ಯುಆರ್​​ ಕೋಡ್; ಬೆಂಗಳೂರು ಪೊಲೀಸರಿಂದ ‘ಲೋಕಸ್ಪಂದನ’
ಬೆಂಗಳೂರು ಪೊಲೀಸ್ ಆಯುಕ್ತರು ಟ್ವೀಟ್ ಮಾಡಿರುವ ಚಿತ್ರImage Credit source: Twitter
Ganapathi Sharma
|

Updated on: Jul 12, 2023 | 10:29 PM

Share

ಬೆಂಗಳೂರು: ಪೊಲೀಸ್ ಠಾಣೆ ಮತ್ತು ಪೊಲೀಸರ ಬಗ್ಗೆ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳಲು ನಾಗರಿಕರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು ಪೊಲೀಸರು (Bengaluru Police) ‘ಲೋಕಸ್ಪಂದನ’ ಎಂಬ ಕ್ಯುಆರ್​​ ಕೋಡ್ (QR Code)  ಸೇವೆಯನ್ನು ಆರಂಭಿಸಿದ್ದಾರೆ. ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ಯುಆರ್​​ ಕೋಡ್ ಅನ್ನು ಪ್ರದರ್ಶಿಸಲಾಗುತ್ತಿದ್ದು, ಅದರ ಮೂಲಕ ಜನರು ತಮ್ಮ ಪ್ರತಿಕ್ರಿಯೆಯನ್ನು ನೀಡಬಹುದಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಈ ವಿಚಾರವಾಗಿ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು. ಜನರಿಗೆ ಉತ್ತಮ ಸೇವೆ ಒದಗಿಸಲು ಇದು ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

ಹೊಸ ಉಪಕ್ರಮದ ಕುರಿತು ‘ನ್ಯೂಸ್ 9’ನೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತರು, ಇದು ವಿವಿಧ ಪೊಲೀಸ್ ಠಾಣೆಗಳ ಕಾರ್ಯಕ್ಷಮತೆಯನ್ನು ಪತ್ತೆಹಚ್ಚಲು ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

ಡಿಸಿಪಿಗಳ ನೇತೃತ್ವದಲ್ಲಿ ಎಲ್ಲಾ ವಿಭಾಗಗಳಲ್ಲಿ ಮತ್ತು ಕಮಿಷನರೇಟ್‌ನಲ್ಲಿರುವ ಕಮಾಂಡ್ ಸೆಂಟರ್‌ನಲ್ಲಿ ಪ್ರತಿಕ್ರಿಯೆಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಯಾವುದೇ ಉದ್ದೇಶಕ್ಕಾಗಿ ಪೊಲೀಸ್ ಠಾಣೆಗಳಿಗೆ ಹೋಗುವ ಜನರಿಗೆ ಏನಾಗುತ್ತದೆ ಎಂಬುದನ್ನು ನಾವು ಈ ಮೂಲಕ ಅರ್ಥಮಾಡಿಕೊಳ್ಳಬಹುದು. ಸೇವೆಯಲ್ಲಿ ಯಾವುದೇ ವಿಳಂಬವಾಗಿದೆಯೇ ಮತ್ತು ಅವರು ಸಂಬಂಧಪಟ್ಟ ಅಧಿಕಾರಿಗಳ ಕೆಲಸದಿಂದ ತೃಪ್ತರಾಗಿದ್ದಾರೆಯೇ ಎಂಬುದನ್ನು ನಾವು ಟ್ರ್ಯಾಕ್ ಮಾಡಬಹುದು. ಇದರಿಂದ ಠಾಣೆ ಮಟ್ಟದಲ್ಲಿನ ಕಾರ್ಯವೈಖರಿಯನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ದಯಾನಂದ ಅವರು ತಿಳಿಸಿದ್ದಾರೆ.

ಪ್ರತಿಕ್ರಿಯೆಯ ಆಧಾರದಲ್ಲಿ ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಕೌನ್ಸೆಲಿಂಗ್ ಅಥವಾ ಶಿಸ್ತು ಕ್ರಮದ ರೂಪದಲ್ಲಿ ಪರಿಹರಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳ್ಳುಳ್ಳಿ ರೀತಿ ಕಾಣಿಸುವ ಈ ವಸ್ತು ಮಾದಕ ಲೋಕದ ರಾಣಿ; ಸಿಲಿಕಾನ್ ಸಿಟಿಯಲ್ಲಿ ಹೊಸ ಮಾದರಿ ಡ್ರಗ್ಸ್ ಹವಾ, ಬೇಟೆಗಿಳಿದ ಪೊಲೀಸರು

ಜನರ ಪ್ರತಿಕ್ರಿಯೆಯ ಆಧಾರದ ಮೇಲೆ, ಯಾವ ಪೊಲೀಸ್ ಠಾಣೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಯಾವುದು ಕೆಟ್ಟದಾಗಿದೆ ಎಂದು ನಮಗೆ ತಿಳಿಯುತ್ತದೆ. ಯಾವುದೇ ವರ್ತನೆಯ ಸಮಸ್ಯೆಗಳು ಅಥವಾ ಇತರ ಕೆಲವು ಸಮಸ್ಯೆಗಳನ್ನು ಪರಿಸ್ಥಿತಿಗೆ ಅನುಗುಣವಾಗಿ ಸರಿಪಡಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಆಯುಕ್ತರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ