AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಶಾಲೆಗಳಿಗೆ ಹುಸಿ ಬಾಂಬ್ ಇ-ಮೇಲ್ ಪ್ರಕರಣ; VPN ಬಳಸಿ ಮೇಲ್ ಮಾಡಿರೋ ಶಂಕೆ

ಬೆದರಿಕೆ ಇ-ಮೇಲ್ಗಳ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಇ-ಮೇಲ್ ರಿಜಿಸ್ಟ್ರೇಷನ್ ಮಾಹಿತಿ, ಲಾಗಿನ್ IP ಮಾಹಿತಿ, ಇ-ಮೇಲ್ ಡ್ರಾಫ್ಟ್, ಇ-ಮೇಲ್ ಇನ್ ಬಾಕ್ಸ್ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

ಬೆಂಗಳೂರಿನ ಶಾಲೆಗಳಿಗೆ ಹುಸಿ ಬಾಂಬ್ ಇ-ಮೇಲ್ ಪ್ರಕರಣ; VPN ಬಳಸಿ ಮೇಲ್ ಮಾಡಿರೋ ಶಂಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 12, 2022 | 10:18 AM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಶಾಲೆಗಳಿಗೆ ಬಾಂಬ್ (Bomb) ಇಟ್ಟಿರುವುದಾಗಿ ಬೆದರಿಕೆ ಮೇಲ್ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಗೊಂದು ಅನುಮಾನ ಮೂಡಿದೆ. ವಿಪಿಎನ್ (VPN) ಬಳಸಿ ಮೇಲ್ ಮಾಡಿರುವ ಬಗ್ಗೆ ಪೊಲೀಸರಿಗೆ ಶಂಕೆ ವ್ಯಕ್ತವಾಗಿದ್ದು, ವಿಪಿಎನ್ ಪ್ರೊವೈಡರ್​ಗೆ ಪೊಲೀಸರು ಮಾಹಿತಿಯನ್ನು ಕೇಳಿದ್ದಾರೆ. ಸಂಜೆಯೊಳಗೆ ಮಾಹಿತಿ ಪೊಲೀಸರ ಕೈಸೇರುವ ಸಾಧ್ಯತೆಯಿದೆ. ಇನ್ನು ಬೇರೆ ಬೇರೆ ದೇಶಗಳ ಐಡಿ ಬಳಸಿರುವ ಬಗ್ಗೆಯೂ ಶಂಕೆ ಮೂಡಿದೆ. ಸದ್ಯ ಪೊಲೀಸರು ಗೂಗಲ್ನಿಂದ ಕೆಲ ಮಾಹಿತಿ ಪಡೆದಿದ್ದಾರೆ.

ಬೆದರಿಕೆ ಇ-ಮೇಲ್​ಗಳ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಇ-ಮೇಲ್ ರಿಜಿಸ್ಟ್ರೇಷನ್ ಮಾಹಿತಿ, ಲಾಗಿನ್ IP ಮಾಹಿತಿ, ಇ-ಮೇಲ್ ಡ್ರಾಫ್ಟ್, ಇ-ಮೇಲ್ ಇನ್ ಬಾಕ್ಸ್ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಸರ್ವರ್ ಪ್ರೊ ವೈಡರ್ ಬಳಿ ಪೊಲೀಸರು 11 ಪ್ರಶ್ನೆ ಕೇಳಿದ್ದು, ಗೂಗಲ್ ಪೊಲೀಸ್ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಮೇಲ್​ ಐಪಿ (IP) ಅಡ್ರೆಸ್ ಕೊಟ್ಟಿದೆ. ದಕ್ಷಿಣ ಕೊರಿಯಾ, ಮೊರಾಕೋ, ಜೋರ್ಡನ್ ಐಪಿ ಅಡ್ರೆಸ್ಗಳನ್ನು ನೀಡಿರುವ ಬಗ್ಗೆ ಮಾಹಿತಿ ಇದೆ. ಬೇರೆ ಬೇರೆ ದೇಶಗಳ ಐಪಿ ಮೂಲಕ ಮೇಲ್ ಬಂದಿರೋದು ಪತ್ತೆಯಾಗಿದ್ದು, ಸೈಬರ್ ಕ್ರೈಮ್ ಪೊಲೀಸರ ನೆರವಿನಿಂದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ. ಇ-ಮೇಲ್ ಆಧರಿಸಿ ಪೊಲೀಸರು ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅನಾಮಿಕ ಹೆಸರಿನಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.

ಇನ್ನು ಮೊದಲಿಗೆ ನಗರದ ಆರು ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಅಂತ ಮೇಲ್ ಬಂದಿತ್ತು. ನಂತರ ಶಾಲೆಗಳ ಸಂಖ್ಯೆ ಒಟ್ಟು 17ಕ್ಕೆ ಏರಿಕೆಯಾಗಿದೆ. ಏಪ್ರಿಲ್ 9ಕ್ಕೆ ಹೊಸ ಮೂರು ಶಾಲೆಗಳಿಗೆ ಇ-ಮೇಲ್ ಮಾಡಿರೋದು ಪತ್ತೆಯಾಗಿತ್ತು.

ಇದನ್ನೂ ಓದಿ

ಏಕರೂಪದ ನಾಗರಿಕ ಸಂಹಿತೆ ಕಾನೂನು ಬರುವವರೆಗೂ ನಾವು ಜನಸಂಖ್ಯೆ ನಿಯಂತ್ರಣ ಮಾಡಬಾರದು -RSS ಮುಖಂಡ ಹನುಮಂತ ಮಳಲಿ

Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ನಾಳೆ ಪವರ್ ಕಟ್; ನಿರ್ವಹಣಾ ಕಾಮಗಾರಿ ಆರಂಭಿಸಿದ ಬೆಸ್ಕಾಂ

Published On - 10:09 am, Tue, 12 April 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು