Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿ ಹಾವಳಿ ಹತ್ತಿಕ್ಕಲು ಬೆಂಗಳೂರಿನ ಗಲ್ಲಿಗಲ್ಲಿಯಲ್ಲೂ ಸಂಚರಿಸಲಿವೆ ಚೀತಾ, ಹೊಯ್ಸಳ; 999 ಹೆಡ್​ಕಾನ್​ಸ್ಟೆಬಲ್ಸ್​​ ವರ್ಗಾವಣೆ

ಕಮಾಂಡ್‌ ಸೆಂಟರ್ ಮೂಲಕ ಹೊಯ್ಸಳ ವಾಹನದ ಚಲನವಲನ ನಿಯಂತ್ರಣದಲ್ಲಿರಲಿದ್ದು, ಪ್ರತಿ ಐದು ಹತ್ತು ನಿಮಿಷಕ್ಕೊಮ್ಮೆ ಏರಿಯಾ ಬದಲು ಮಾಡಬೇಕು, ನಿಂತಲ್ಲಿ ನಿಲ್ಲದಂತೆ ಪ್ರತಿ ಏರಿಯಾದಲ್ಲಿ ಗಸ್ತು ಹೊಡೆಯಬೇಕು, ಪ್ರತಿ ಏರಿಯಾದ ಎಲ್ಲಾ ಆಗುಹೋಗುಗಳ ಬಗ್ಗೆ ನಿಗಾ ಇಡಬೇಕು ಎಂದು ಸೂಚಿಸಿದ್ದು, ಚೀತಾ ಸಿಬ್ಬಂದಿಗೂ ಇದೇ ರೀತಿ ಜವಾಬ್ದಾರಿ ವಹಿಸಲಾಗಿದೆ.

ರೌಡಿ ಹಾವಳಿ ಹತ್ತಿಕ್ಕಲು ಬೆಂಗಳೂರಿನ ಗಲ್ಲಿಗಲ್ಲಿಯಲ್ಲೂ ಸಂಚರಿಸಲಿವೆ ಚೀತಾ, ಹೊಯ್ಸಳ; 999 ಹೆಡ್​ಕಾನ್​ಸ್ಟೆಬಲ್ಸ್​​ ವರ್ಗಾವಣೆ
ಹೊಯ್ಸಳ ವಾಹನ (ಸಂಗ್ರಹ ಚಿತ್ರ)
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 24, 2021 | 8:30 AM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಡಾರಿಗಳ ಹಾವಳಿ ಹೆಚ್ಚಾಗುತ್ತಿರುವುದರಿಂದ ಎಚ್ಚೆತ್ತ ಪೊಲೀಸರು ಕಠಿಣ ಕ್ರಮಕ್ಕೆ ಸಿದ್ಧರಾಗಿದ್ದಾರೆ. ರೌಡಿಗಳನ್ನು (Rowdies) ನಿಯಂತ್ರಿಸುವ ಸಲುವಾಗಿ ಸ್ಥಳೀಯವಾಗಿ ಖಾಕಿ ಪಡೆಗೆ ಚುರುಕು ಮುಟ್ಟಿಸಲು ಮುಂದಾದ ಪೊಲೀಸ್ ಕಮಿಷನರ್ (Bengaluru Police Commissioner) , ತಳಮಟ್ಟದಲ್ಲಿ ಪೊಲೀಸಿಂಗ್ ವ್ಯವಸ್ಥೆಯನ್ನು ಬಿಗಿಗೊಳಿಸಲು ಮುಂದಾಗಿದ್ದಾರೆ. ಸರಗಳ್ಳತನ, ಸುಲಿಗೆ, ದರೋಡೆ, ಪುಂಡರ (Anti Social Elements) ಹಾವಳಿ ತಪ್ಪಿಸಲು ಹೊಸ ಕ್ರಮ ರೂಪಿಸುತ್ತಿರುವ ಪೊಲೀಸ್ ಕಮಿಷನರ್ ಹೊಯ್ಸಳ ಮತ್ತು ಚೀತಾ ವಾಹನಗಳಿಗೆ ಚುರುಕು ಮುಟ್ಟಿಸಿ ಪ್ರತಿ ಏರಿಯಾದಲ್ಲೂ ಕಣ್ಗಾವಲಿಡಲು ಸೂಚಿಸಿದ್ದಾರೆ. ಹೊಯ್ಸಳ ಮತ್ತು ಚೀತಾ ರೌಂಡ್ಸ್ ಮಾಡುವ ಏರಿಯಾದಲ್ಲಿ ಏನೇ ಆದರೂ ಅವರೇ ಹೊಣೆಗಾರರು ಎಂದು ಎಚ್ಚರಿಕೆ ನೀಡಿದ್ದು, ಪೊಲೀಸರು (Bengaluru Police) ಶಿಸ್ತುಬದ್ಧ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.

ಅನ್​ಲಾಕ್ ಬಳಿಕ ಬೆಂಗಳೂರಿನಲ್ಲಿ ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸ ಹೆಚ್ಚಾಗಿರುವುದರಿಂದ ಪೊಲೀಸರು ಕಠಿಣ ಕ್ರಮದ ಮೊರೆ ಹೋಗಿದ್ದು, ಹೊಯ್ಸಳ ಮತ್ತು ಚೀತಾ ವಾಹನಗಳನ್ನು ಕಮಾಂಡ್ ಸೆಂಟರ್ ಮೂಲಕ ಅಪರೇಟ್ ಮಾಡಲು ನಿರ್ಧರಿಸಿದ್ದಾರೆ. ಠಾಣೆ ಸುಪರ್ದಿಯಿಂದ ಕಮಾಂಡ್‌ ಸೆಂಟರ್ ವ್ಯಾಪ್ತಿಗೆ ಹೊಯ್ಸಳ ಮತ್ತು ಚೀತಾ ವಾಹನಗಳನನ್ನು ಪಡೆಯಲು ಮುಂದಾದ ಕಮಿಷನರ್ ಕಮಲ್ ಪಂತ್, ಪುಂಡ ಪೋಕರಿಗಳ ಪುಂಡಾಟಕ್ಕೆ ಸಂಪೂರ್ಣ ತಡೆ ಒಡ್ಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದಾರೆ.

ಕಮಾಂಡ್‌ ಸೆಂಟರ್ ಮೂಲಕ ಹೊಯ್ಸಳ ವಾಹನದ ಚಲನವಲನ ನಿಯಂತ್ರಣದಲ್ಲಿರಲಿದ್ದು, ಪ್ರತಿ ಐದು ಹತ್ತು ನಿಮಿಷಕ್ಕೊಮ್ಮೆ ಏರಿಯಾ ಬದಲು ಮಾಡಬೇಕು, ನಿಂತಲ್ಲಿ ನಿಲ್ಲದಂತೆ ಪ್ರತಿ ಏರಿಯಾದಲ್ಲಿ ಗಸ್ತು ಹೊಡೆಯಬೇಕು, ಪ್ರತಿ ಏರಿಯಾದ ಎಲ್ಲಾ ಆಗುಹೋಗುಗಳ ಬಗ್ಗೆ ನಿಗಾ ಇಡಬೇಕು ಎಂದು ಸೂಚಿಸಿದ್ದು, ಚೀತಾ ಸಿಬ್ಬಂದಿಗೂ ಇದೇ ರೀತಿ ಜವಾಬ್ದಾರಿ ವಹಿಸಲಾಗಿದೆ.

ಹೊಯ್ಸಳ, ಚೀತಾ ಸಿಬ್ಬಂದಿ ಸುಖಾಸುಮ್ಮನೆ ಗಾಡಿ ಒಂದೆಡೆ ನಿಲ್ಲಿಸಿ ಹರಟೆ ಹೊಡೆಯುವಂತಿಲ್ಲ. ಕಮಾಂಡ್‌ ಸೆಂಟರ್​ನಿಂದ ಪ್ರತಿ ವಾಹನದ ಮೇಲೆ ನಿಗಾ ಇರಲಿದ್ದು, ಅಪರಾಧ ಕೃತ್ಯ ನಡೆದ ಸ್ಥಳಕ್ಕೆ ಐದಾರು ನಿಮಿಷದಲ್ಲಿ ತಲುಪುವಂತೆ ತಯಾರಿ ನಡೆಸಿಕೊಳ್ಳಬೇಕು. ಹೊಯ್ಸಳ ಮತ್ತು ಚೀತಾ ಎಲ್ಲಿದೆ ಎಂದು ಪ್ರತಿ ಕ್ಷಣ ನಿಗಾ ವಹಿಸಲಾಗುವುದು ಎಂದು ತಿಳಿಸಿದ್ದಾರೆ. ಬೀಟ್ ಪೊಲೀಸ್ ವ್ಯವಸ್ಥೆ ಗಟ್ಟಿಯಾದಲ್ಲಿ ಅಪರಾಧ ಕೃತ್ಯಗಳನ್ನು ತಡೆಯಬಹುದು ಎಂದು ಈ ರೀತಿ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗುತ್ತಿದೆ.

999 ಪೊಲೀಸ್ ಹೆಡ್​ಕಾನ್​ಸ್ಟೆಬಲ್ ವರ್ಗಾವಣೆ: ಈ ಮಧ್ಯೆ, ಒಂದೇ ಠಾಣೆಯಲ್ಲಿ ಐದು ವರ್ಷಗಳಿಗೂ ಹೆಚ್ಚು ಕಾಲಾವಧಿ ಕರ್ತವ್ಯದಲ್ಲಿದ್ದ ಹೆಡ್​ಕಾನ್​ಸ್ಟೆಬಲ್​ಗಳ ವರ್ಗಾವಣೆಗೆ ಬೆಂಗಳೂರು ನಗರ ಆಡಳಿತ ವಿಭಾಗದ ಡಿಸಿಪಿ ನಿಶಾ‌ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಒಟ್ಟು 999 ಪೊಲೀಸ್ ಹೆಡ್​ಕಾನ್​ಸ್ಟೆಬಲ್ ವರ್ಗಾವಣೆಗೆ ಆದೇಶ ನೀಡಲಾಗಿದ್ದು, ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಳಿಸಲು ನಿರ್ದೇಶಿಸಲಾಗಿದೆ.

(Bengaluru Police to take strict action on Anti Social elements Hoysala and Cheetah vehicles on alert)

ಇದನ್ನೂ ಓದಿ: ದಾವಣಗೆರೆ: ಒಂಟಿ ವೃದ್ಧೆ ಕೊಲೆ ಪ್ರಕರಣ ಪತ್ತೆ ಹಚ್ಚಿದ ಪೊಲೀಸ್ ಡಾಗ್ ತುಂಗಾ; ಶ್ವಾನದ ಯಶೋಗಾಥೆ ಇಲ್ಲಿದೆ 

ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನಿಲ ಸೇರಿದಂತೆ 45 ರೌಡಿಶೀಟರ್ಸ್​ ಮನೆಗಳ ಮೇಲೆ ಸಿಸಿಬಿ ಪೊಲೀಸರ ರೇಡ್

Published On - 8:19 am, Sat, 24 July 21

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ