AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸ್​​: ಮನೆ ಮಾಲೀಕರ ವಿರುದ್ಧ ಕೇಸ್

ಬೆಂಗಳೂರು ಪೊಲೀಸರು ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆ ಮಾಡುತ್ತಿದ್ದಾರೆ. ಆ ಮೂಲಕ ಸರಿಯಾದ ದಾಖಲಾತಿ ಪಡೆಯದೆ ವಿದೇಶಿ ಪ್ರಜೆಗಳಿಗೆ ಮನೆ ನೀಡಿದ ಮಾಲೀಕರಿಗೂ ಶಾಕ್​​ ಎದುರಾಗಿದೆ. ಈಗಾಗಲೇ ಯಲಹಂಕ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 23 ಪ್ರಕರಣಗಳು ದಾಖಲಾಗಿವೆ.

ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸ್​​: ಮನೆ ಮಾಲೀಕರ ವಿರುದ್ಧ ಕೇಸ್
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 05, 2025 | 8:55 AM

Share

ಬೆಂಗಳೂರು, ಸೆಪ್ಟೆಂಬರ್​ 05: ಬೆಂಗಳೂರಿಗೆ (bangaluru) ಸಾಕಷ್ಟು ಜನರು ಬಂದು ನೆಲೆಸುತ್ತಾರೆ. ಅದೇ ರೀತಿಯಾಗಿ ವಿದೇಶಿ ಪ್ರಜೆಗಳು (Foreign nationals) ಕೂಡ ಆಗಮಿಸುತ್ತಾರೆ. ಆದರೆ ಇವರು ತಮ್ಮ ವೀಸಾ ಅವಧಿ ಮುಗಿದರೂ ಇಲ್ಲೇ ಉಳಿದುಕೊಳ್ಳುತ್ತಾರೆ. ಈ ರೀತಿ ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಇದೀಗ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಹಣದಾಸೆಗೆ ಸರಿಯಾದ ದಾಖಲಾತಿ ಪಡೆಯದೆ ಮನೆ ನೀಡಿದ ಮಾಲೀಕರಿಗೂ ಶಾಕ್​​ ಎದುರಾಗಿದ್ದು, ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳು ತಮ್ಮ ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರು ಸಹ ಅಕ್ರಮವಾಗಿ ನಗರದಲ್ಲಿ ವಾಸವಿರುತ್ತಾರೆ. ಈ ವಾಸವಿದ್ದವರೂ ಹಣ ಸಂಪಾದನೆಗೆ ಅನ್ಯ ಮಾರ್ಗಗಳನ್ನು ಹಿಡಿದು ಬಳಿಕ ಪೊಲೀಸರ ಅತಿಥಿಗಳಾದ ಸಾಕಷ್ಟು ಉದಾಹರಣೆಗಳಿವೆ. ಪೊಲೀಸ್ ಠಾಣೆಗೆ ಸಿ ಫಾರಂ ಸಲ್ಲಿಸದೆ, ವಿದೇಶಿ ಪ್ರಜೆಗಳ ದಾಖಲಾತಿ ಪಡೆಯದೆ ಮನೆ ನೀಡಿದ್ದ ಮಾಲೀಕರ ವಿರುದ್ಧ ರಿಜಿಸ್ಟ್ರೇಷನ್ ಆಫ್ ಫಾರಿನರ್ಸ್ ಆ್ಯಕ್ಟ್ ಅಡಿ ಕೇಸ್​ ದಾಖಲಾಗಿವೆ.

ಎಲ್ಲೆಲ್ಲಿ ಪ್ರಕರಣಗಳು ದಾಖಲು

ಅಮೃತಹಳ್ಳಿ, ಬಾಗಲೂರು, ಸಂಪಿಗೆಹಳ್ಳಿ, ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ತಲಾ 1 ಪ್ರಕರಣ ದಾಖಲಾಗಿವೆ. ಕೊಡಿಗೆಹಳ್ಳಿ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ತಲಾ 2, ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ 3, ಕೊತ್ತನೂರು ಪೊಲೀಸ್ ಠಾಣೆಯಲ್ಲಿ 5, ಯಲಹಂಕ ಪೊಲೀಸ್ ಠಾಣೆಯಲ್ಲಿ 7 ಸೇರಿದಂತೆ ಪೂರ್ವ ವಿಭಾಗದಲ್ಲಿ ಒಟ್ಟು 23 ಪ್ರಕರಣ ದಾಖಲಾಗಿವೆ.

ವಿದೇಶಿ ಪ್ರಜೆಗಳಿಗೆ ಬಾಡಿಗೆ ಕೊಡುವ ಮನೆ ಮಾಲೀಕರಿಗೆ ಗೈಡ್​ಲೈನ್ಸ್

ಇನ್ನು ಇತ್ತೀಚೆಗೆ ವಿದೇಶಿ ಪ್ರಜೆಗಳಿಗೆ ಬಾಡಿಗೆ ಕೊಡುವ ಮನೆ ಮಾಲೀಕರಿಗೆ ವೈಟ್​ಫೀಲ್ಡ್ ವಿಭಾಗದ ಡಿಸಿಪಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿತ್ತು. ಮನೆ ಮಾಲೀಕರು ಸಿ ಫಾರಂ ಅನ್ನು ಎಫ್​​ಆರ್​ಆರ್​​ಓಗೆ ಸಲ್ಲಿಸಬೇಕು. ಬಾಡಿಗೆದಾರರ ಪಾಸ್​ಪೋರ್ಟ್, ವೀಸಾ ಪ್ರತಿ ಸಂಗ್ರಹಿಸಬೇಕು. ಬಾಡಿಗೆ ನೀಡುವ ಮೊದಲು ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕು.

ಇದನ್ನೂ ಓದಿ: ಸಿಸಿಬಿ ಭರ್ಜರಿ ಕಾರ್ಯಚರಣೆ: ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ 9 ವಿದೇಶಿಗರ ಬಂಧನ

ಮಾನ್ಯ ವೀಸಾ ಅಥವಾ ಅನುಮತಿ ಇಲ್ಲದೆ ವಾಸಿಸಲು ಅವಕಾಶ ನೀಡಬಾರದು. ನೊಂದಾಯಿತ ಬಾಡಿಗೆ ಒಪ್ಪಂದ ಮಾಡಬೇಕು. ವಿದೇಶಿ ಬಾಡಿಗೆದಾರರ ಬಗ್ಗೆ ಮಾಹಿತಿ ನೀಡದಿದ್ದರೆ ಕಾನೂನು ಕ್ರಮಕೈಗೊಳ್ಳಲಾಗುವುದು. ಅನುಮಾನಾಸ್ಪದ ಚಟುವಟಿಕೆ ಕಂಡು ಬಂದರೆ ಪೊಲೀಸರಿಗೆ ತಿಳಿಸಬೇಕು ಎಂದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ