AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸ್​​: ಮನೆ ಮಾಲೀಕರ ವಿರುದ್ಧ ಕೇಸ್

ಬೆಂಗಳೂರು ಪೊಲೀಸರು ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆ ಮಾಡುತ್ತಿದ್ದಾರೆ. ಆ ಮೂಲಕ ಸರಿಯಾದ ದಾಖಲಾತಿ ಪಡೆಯದೆ ವಿದೇಶಿ ಪ್ರಜೆಗಳಿಗೆ ಮನೆ ನೀಡಿದ ಮಾಲೀಕರಿಗೂ ಶಾಕ್​​ ಎದುರಾಗಿದೆ. ಈಗಾಗಲೇ ಯಲಹಂಕ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 23 ಪ್ರಕರಣಗಳು ದಾಖಲಾಗಿವೆ.

ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸ್​​: ಮನೆ ಮಾಲೀಕರ ವಿರುದ್ಧ ಕೇಸ್
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 05, 2025 | 8:55 AM

Share

ಬೆಂಗಳೂರು, ಸೆಪ್ಟೆಂಬರ್​ 05: ಬೆಂಗಳೂರಿಗೆ (bangaluru) ಸಾಕಷ್ಟು ಜನರು ಬಂದು ನೆಲೆಸುತ್ತಾರೆ. ಅದೇ ರೀತಿಯಾಗಿ ವಿದೇಶಿ ಪ್ರಜೆಗಳು (Foreign nationals) ಕೂಡ ಆಗಮಿಸುತ್ತಾರೆ. ಆದರೆ ಇವರು ತಮ್ಮ ವೀಸಾ ಅವಧಿ ಮುಗಿದರೂ ಇಲ್ಲೇ ಉಳಿದುಕೊಳ್ಳುತ್ತಾರೆ. ಈ ರೀತಿ ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಇದೀಗ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಹಣದಾಸೆಗೆ ಸರಿಯಾದ ದಾಖಲಾತಿ ಪಡೆಯದೆ ಮನೆ ನೀಡಿದ ಮಾಲೀಕರಿಗೂ ಶಾಕ್​​ ಎದುರಾಗಿದ್ದು, ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳು ತಮ್ಮ ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರು ಸಹ ಅಕ್ರಮವಾಗಿ ನಗರದಲ್ಲಿ ವಾಸವಿರುತ್ತಾರೆ. ಈ ವಾಸವಿದ್ದವರೂ ಹಣ ಸಂಪಾದನೆಗೆ ಅನ್ಯ ಮಾರ್ಗಗಳನ್ನು ಹಿಡಿದು ಬಳಿಕ ಪೊಲೀಸರ ಅತಿಥಿಗಳಾದ ಸಾಕಷ್ಟು ಉದಾಹರಣೆಗಳಿವೆ. ಪೊಲೀಸ್ ಠಾಣೆಗೆ ಸಿ ಫಾರಂ ಸಲ್ಲಿಸದೆ, ವಿದೇಶಿ ಪ್ರಜೆಗಳ ದಾಖಲಾತಿ ಪಡೆಯದೆ ಮನೆ ನೀಡಿದ್ದ ಮಾಲೀಕರ ವಿರುದ್ಧ ರಿಜಿಸ್ಟ್ರೇಷನ್ ಆಫ್ ಫಾರಿನರ್ಸ್ ಆ್ಯಕ್ಟ್ ಅಡಿ ಕೇಸ್​ ದಾಖಲಾಗಿವೆ.

ಎಲ್ಲೆಲ್ಲಿ ಪ್ರಕರಣಗಳು ದಾಖಲು

ಅಮೃತಹಳ್ಳಿ, ಬಾಗಲೂರು, ಸಂಪಿಗೆಹಳ್ಳಿ, ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ತಲಾ 1 ಪ್ರಕರಣ ದಾಖಲಾಗಿವೆ. ಕೊಡಿಗೆಹಳ್ಳಿ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ತಲಾ 2, ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ 3, ಕೊತ್ತನೂರು ಪೊಲೀಸ್ ಠಾಣೆಯಲ್ಲಿ 5, ಯಲಹಂಕ ಪೊಲೀಸ್ ಠಾಣೆಯಲ್ಲಿ 7 ಸೇರಿದಂತೆ ಪೂರ್ವ ವಿಭಾಗದಲ್ಲಿ ಒಟ್ಟು 23 ಪ್ರಕರಣ ದಾಖಲಾಗಿವೆ.

ವಿದೇಶಿ ಪ್ರಜೆಗಳಿಗೆ ಬಾಡಿಗೆ ಕೊಡುವ ಮನೆ ಮಾಲೀಕರಿಗೆ ಗೈಡ್​ಲೈನ್ಸ್

ಇನ್ನು ಇತ್ತೀಚೆಗೆ ವಿದೇಶಿ ಪ್ರಜೆಗಳಿಗೆ ಬಾಡಿಗೆ ಕೊಡುವ ಮನೆ ಮಾಲೀಕರಿಗೆ ವೈಟ್​ಫೀಲ್ಡ್ ವಿಭಾಗದ ಡಿಸಿಪಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿತ್ತು. ಮನೆ ಮಾಲೀಕರು ಸಿ ಫಾರಂ ಅನ್ನು ಎಫ್​​ಆರ್​ಆರ್​​ಓಗೆ ಸಲ್ಲಿಸಬೇಕು. ಬಾಡಿಗೆದಾರರ ಪಾಸ್​ಪೋರ್ಟ್, ವೀಸಾ ಪ್ರತಿ ಸಂಗ್ರಹಿಸಬೇಕು. ಬಾಡಿಗೆ ನೀಡುವ ಮೊದಲು ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕು.

ಇದನ್ನೂ ಓದಿ: ಸಿಸಿಬಿ ಭರ್ಜರಿ ಕಾರ್ಯಚರಣೆ: ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ 9 ವಿದೇಶಿಗರ ಬಂಧನ

ಮಾನ್ಯ ವೀಸಾ ಅಥವಾ ಅನುಮತಿ ಇಲ್ಲದೆ ವಾಸಿಸಲು ಅವಕಾಶ ನೀಡಬಾರದು. ನೊಂದಾಯಿತ ಬಾಡಿಗೆ ಒಪ್ಪಂದ ಮಾಡಬೇಕು. ವಿದೇಶಿ ಬಾಡಿಗೆದಾರರ ಬಗ್ಗೆ ಮಾಹಿತಿ ನೀಡದಿದ್ದರೆ ಕಾನೂನು ಕ್ರಮಕೈಗೊಳ್ಳಲಾಗುವುದು. ಅನುಮಾನಾಸ್ಪದ ಚಟುವಟಿಕೆ ಕಂಡು ಬಂದರೆ ಪೊಲೀಸರಿಗೆ ತಿಳಿಸಬೇಕು ಎಂದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ