AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಕಳ್ಳತನ ತಡೆಯಲು ಪೊಲೀಸರಿಂದ ಹೊಸ ಅಸ್ತ್ರ: ಖದೀಮರು ಫೋನ್ ಕದ್ದರೂ ನೋ ಯೂಸ್

ಬೆಂಗಳೂರು ನಗರದಲ್ಲಿ ಸಿಇಐಆರ್ ಆ್ಯಪ್ ಮೂಲಕ ಮೊಬೈಲ್ ಫೋನ್ ಕಳ್ಳತನ ತಡೆಯಲು ಯೋಜನೆ ರೂಪಿಸಲಾಗಿದೆ.

ಮೊಬೈಲ್ ಕಳ್ಳತನ ತಡೆಯಲು ಪೊಲೀಸರಿಂದ ಹೊಸ ಅಸ್ತ್ರ: ಖದೀಮರು ಫೋನ್ ಕದ್ದರೂ ನೋ ಯೂಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 18, 2022 | 9:11 AM

Share

ಬೆಂಗಳೂರು: ನಗರದಲ್ಲಿ ಫೋನ್ ಕಳ್ಳತನ(Mobile Theft) ಹೆಚ್ಚಾಗುತ್ತಿದೆ, ಹೀಗಾಗಿ ಮೊಬೈಲ್ ಫೋನ್ ಕಳ್ಳತನ ತಡೆಗೆ ಪೊಲೀಸರು (Bengaluru Police) ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಆ್ಯಪ್ ಮೂಲಕ ಮೊಬೈಲ್ ಫೋನ್ ಕಳ್ಳರಿಗೆ ಖಾಕಿ ಶಾಕ್ ಕೊಡಲು ಮುಂದಾಗಿದ್ದಾರೆ. ಖಾಕಿ ಪ್ಲ್ಯಾನ್​ ಹೇಗಿದೆ ಅಂದ್ರೆ ಮೊಬೈಲ್ ಕದ್ರು ಇನ್ಮುಂದೆ ಅದು ನೋ ಯೂಸ್ ಆಗಲಿದೆ.

ಮೊಬೈಲ್ ಫೋನ್ ಕಳ್ಳತನ ತಡೆಯಲು ಪೊಲೀಸರು ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಬೆಂಗಳೂರು ನಗರದಲ್ಲಿ ಸಿಇಐಆರ್ ಆ್ಯಪ್ ಮೂಲಕ ಮೊಬೈಲ್ ಫೋನ್ ಕಳ್ಳತನ ತಡೆಯಲು ಯೋಜನೆ ರೂಪಿಸಲಾಗಿದೆ. ಇದೇ ಮೊದಲ ಬಾರಿಗೆ ನಗರದಲ್ಲಿ ಕೇಂದ್ರ ಸರ್ಕಾರ ನಿರ್ಮಿತ ಸಿಇಐಆರ್(ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ ಆ್ಯಪ್) ಆ್ಯಪ್ ಬಳಕೆಗೆ ಇಲಾಖೆ ಮುಂದಾಗಿದೆ.

ಈ ಆ್ಯಪ್ ಹೇಗೆ ಕೆಲಸ ಮಾಡುತ್ತದೆ

ಮೊಬೈಲ್ ಕಳ್ಳತನವಾದ ಬಳಿಕ ಬೆಂಗಳೂರು ಪೊಲೀಸರ ಇ-ಲಾಸ್ಟ್ ನಲ್ಲಿ ದೂರು ದಾಖಲಿಸಬೇಕು. ಇ-ಲಾಸ್ಟ್ ನಲ್ಲಿ ದೂರು ದಾಖಲಾಗುತ್ತಿದ್ದಂತೆ, ನೇರವಾಗಿ ಸಿಇಐಆರ್ ಆ್ಯಪ್ ಗೆ ಮಾಹಿತಿ ರವಾನೆಯಾಗುತ್ತದೆ. ಕೂಡಲೇ ಸಿಇಐಆರ್ ಆ್ಯಪ್ ಮೂಲಕ ಮೊಬೈಲ್ ಆಕ್ಟಿವೇಷನ್ ಸಂಪೂರ್ಣ ಬ್ಲಾಕ್ ಆಗುತ್ತದೆ. ಅಂದ್ರೆ ಇ ಲಾಸ್ಟ್ ನಲ್ಲಿ ನಿಮ್ಮ ಮೊಬೈಲ್ ಐಎಂಇಐ ಸಂಖ್ಯೆ ನಮೂದಿಸಬೇಕು. ನೊಂದಾಯಿತ ಐಎಂಇಐ ಸಂಖ್ಯೆಯ ಮೊಬೈಲನ್ನ ಸಿಇಐಆರ್ ಆ್ಯಪ್ ಸಂಪೂರ್ಣ ಬ್ಲಾಕ್ ಮಾಡುತ್ತೆ. ಯಾವುದೇ ರೀತಿಯಲ್ಲಿ ಕಾರ್ಯ ನಿರ್ವಹಿಸದಂತೆ ಮೊಬೈಲ್ ಬ್ಲಾಕ್ ಆಗುತ್ತೆ. ಮೊಬೈಲ್ ಕದ್ದರು ಬಳಕೆಗೆ ಆಗದಂತೆ ಆಗುತ್ತದೆ. ಆ ಮೂಲಕ ಮೊಬೈಲ್ ಕಳ್ಳತನಕ್ಕೆ ಬ್ರೇಕ್ ಹಾಕಲು ನಗರ ಪೊಲೀಸರು ಯೋಜನೆ ರೂಪಿಸಿದ್ದಾರೆ.

ಆದ್ರೆ ಕದ್ದ ಮೊಬೈಲ್ ಫೋನ್ ಬಿಡಿಭಾಗಗಳಾಗಿ ಮಾಡಿದರೆ ಬ್ಲಾಕ್ ಅಸಾಧ್ಯ. ಅಲ್ಲದೆ ಕಳ್ಳತನವಾದ ಮೊಬೈಲ್ ಫೋನ್ ಆನ್ ಆದ ಕೂಡಲೇ ಲೊಕೇಷನ್ ಪತ್ತೆಯಾಗುತ್ತೆ. ಸದ್ಯ ದೇಶದ ಎರಡು ಮಹಾನಗರಗಳಲ್ಲಿ ಮಾತ್ರ ಸಿಇಐಆರ್ ಆ್ಯಪ್ ಬಳಕೆಯಲ್ಲಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ವಾಣಿಜ್ಯ ನಗರಿ ಮುಂಬೈನಲ್ಲಿ. ಈ ಎರಡು ನಗರಗಳಲ್ಲಿ ಪೊಲೀಸರು ಸಿಇಐಆರ್ ಆ್ಯಪ್ ಬಳಸುತ್ತಿದ್ದಾರೆ. ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಮೊಬೈಲ್ ಕಳ್ಳತನ ಹೆಚ್ಚಾಗಿದೆ. ದಿನವೊಂದಕ್ಕೆ ಸರಾಸರಿ 20 ರಿಂದ 30 ಮೊಬೈಲ್ ಕಳ್ಳತನವಾಗುತ್ತಿದೆ. ಮೊಬೈಲ್ ಕಳವು ಪ್ರಕರಣಗಳು ಪೊಲೀಸರಿಗೆ ತಲೆನೋವಾಗಿದೆ. ಆದ್ರಿಂದ ಮೊಬೈಲ್ ಕಳ್ಳತನ ತಡೆಗೆ ಪೊಲೀಸರು ಸಿಇಐಆರ್ ಆ್ಯಪ್ ಮೊರೆ ಹೋಗಿದ್ದಾರೆ. ಈಗಾಗಲೇ ನಿನ್ನೆಯಿಂದ ಪ್ರಾಯೋಗಿಕವಾಗಿ ಆ್ಯಪ್ ಬಳಕೆ ಕಾರ್ಯಾರಂಭವಾಗಿದೆ. ಒಂದು ತಿಂಗಳ ಕಾಲ ಪ್ರಾಯೋಗಿಕ ಕಾರ್ಯಾಚರಣೆ ನಡೆಯಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:11 am, Sun, 18 September 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ