AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪರಾಧ ಕೃತ್ಯ ತಡೆಗೆ ಮಾಸ್ಟರ್ ಪ್ಲಾನ್; ಪಾತಕಿಗಳ ಪತ್ತೆಗೆ ಮೊಬೈಲ್ ಅಪ್ಲಿಕೇಷನ್‌ ಬಳಕೆ

ಬೆಂಗಳೂರು ಮಹಾನಗರದಲ್ಲಿ ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ.

ಬೆಂಗಳೂರು: ಅಪರಾಧ ಕೃತ್ಯ ತಡೆಗೆ ಮಾಸ್ಟರ್ ಪ್ಲಾನ್; ಪಾತಕಿಗಳ ಪತ್ತೆಗೆ ಮೊಬೈಲ್ ಅಪ್ಲಿಕೇಷನ್‌ ಬಳಕೆ
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Sep 13, 2022 | 9:00 PM

Share

ಬೆಂಗಳೂರು: ಮಹಾನಗರದಲ್ಲಿ ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ. ಕೇಂದ್ರ ಸರ್ಕಾರ ಪರಿಚಯಿಸಿದ್ದ ಸಿಸಿಟಿಎನ್ಎಸ್ ಮೊಬೈಲ್ ಅಪ್ಲಿಕೇಷನ್‌ ಮೂಲಕ ಕಳೆದ 2 ತಿಂಗಳಿಂದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ನಗರದಲ್ಲಿ ಪೊಲೀಸರು ರಾತ್ರಿ 11 ಗಂಟೆ ನಂತರ ಸಿಸಿಟಿಎನ್ಎಸ್ ಅಪ್ಲಿಕೇಷನ್‌ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ರಾತ್ರಿ ವೇಳೆ ಅನುಮಾನಸ್ಪದ ವ್ಯಕ್ತಿಗಳು, ವಾಹನಗಳನ್ನು ತಪಾಸಣೆ ನಡೆಸಿ ಅಪ್ಲಿಕೇಷನ್‌ ಮೂಲಕ ಪಾತಾಕಿಗಳನ್ನು ಪತ್ತೆ ಹಚ್ಚಲಾಗುತ್ತಿಸದೆ. ಈ ವೇಳೆ ಎಂಸಿಸಿಟಿಎನ್ಎಸ್ ಅಪ್ಲಿಕೇಷನ್‌ ನಲ್ಲಿ ಬೆರಳಚ್ಚುಗಳ ಪರಿಶೀಲನೆ ನಡೆಸಲಾಗುತ್ತದೆ.

ಈಗಾಗಲೇ ಪೊಲೀಸರ ಬಳಿಯಿರುವ ಅಪರಾಧಿಗಳ ಪಿಂಗರ್ ಪ್ರಿಂಟ್ ಜೊತೆ ಮ್ಯಾಚ್ ಮಾಡಲಾಗುತ್ತದೆ. ಬೆರಳಚ್ಚು ಪರಿಶೀಲನೆ ವೇಳೆ ಆತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಕಂಡು ಬಂದರೆ ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ.

ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಮಹಾನಗರದಲ್ಲಿ ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನ ಮಾಡಿದ್ದ ಆರೋಪಿಗಳನ್ನು ಹಾಸನದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆನಂದ್​ ಅರಸೀಕೆರೆ ರೈಲ್ವೆ ಸ್ಟೇಷನ್ ಬಳಿ ರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು.

ಈ ವೇಳೆ ನೈಟ್ ಬೀಟ್ ಇದ್ದ ಅರಸೀಕೆರೆ ಪೊಲೀಸ್ ಠಾಣಾ ಪೊಲೀಸರು ಅನುಮಾನಗೊಂಡು MCCTNS ಮೊಬೈಲ್ ಅಪ್ಲೀಕೇಷನ್ ಮೂಲಕ ಫಿಂಗರ್ ಪ್ರಿಂಟ್ ಸಂಗ್ರಹಿಸಿದ್ದರು. ಆಗ ಆರೋಪಿ ಆನಂದ್​ ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನದಲ್ಲಿ ಭಾಗಿಯಾಗಿದ್ದಾನೆ ಎಂದು ಗೊತ್ತಾಗಿದೆ.

ಕೂಡಲೇ ಆನಂದನನ್ನು ಪೊಲೀಸರು ಬಂಧಿಸಿದ್ದಾರೆ. ಆನಂದ್ ಬಂಧನದ ಬಳಿಕ ಅರಸೀಕೆರೆ ಟೌನ್ ಪೊಲೀಸರು ಸಹಚರ ಚಂದ್ರುನನ್ನು ಬಂಧಿಸಿದ್ದಾರೆ. ಬಂಧಿತ ಆನಂದ್ ಮತ್ತು ಚಂದ್ರು ಬೆಂಗಳೂರಿನಲ್ಲಿ ಮನೆಗಳ್ಳತನದಲ್ಲಿ 30 ಗ್ರಾಂ ಚಿನ್ನಾಭರಣ ಕದ್ದಿದ್ದಾಗಿ ಬಾಯ್ಬಿಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ 30 ಗ್ರಾಂ. ಚಿನ್ನಾಭರಣ ಮತ್ತು 90 ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Tue, 13 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!