AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪರಾಧ ಕೃತ್ಯ ತಡೆಗೆ ಮಾಸ್ಟರ್ ಪ್ಲಾನ್; ಪಾತಕಿಗಳ ಪತ್ತೆಗೆ ಮೊಬೈಲ್ ಅಪ್ಲಿಕೇಷನ್‌ ಬಳಕೆ

ಬೆಂಗಳೂರು ಮಹಾನಗರದಲ್ಲಿ ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ.

ಬೆಂಗಳೂರು: ಅಪರಾಧ ಕೃತ್ಯ ತಡೆಗೆ ಮಾಸ್ಟರ್ ಪ್ಲಾನ್; ಪಾತಕಿಗಳ ಪತ್ತೆಗೆ ಮೊಬೈಲ್ ಅಪ್ಲಿಕೇಷನ್‌ ಬಳಕೆ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Sep 13, 2022 | 9:00 PM

Share

ಬೆಂಗಳೂರು: ಮಹಾನಗರದಲ್ಲಿ ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ. ಕೇಂದ್ರ ಸರ್ಕಾರ ಪರಿಚಯಿಸಿದ್ದ ಸಿಸಿಟಿಎನ್ಎಸ್ ಮೊಬೈಲ್ ಅಪ್ಲಿಕೇಷನ್‌ ಮೂಲಕ ಕಳೆದ 2 ತಿಂಗಳಿಂದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ನಗರದಲ್ಲಿ ಪೊಲೀಸರು ರಾತ್ರಿ 11 ಗಂಟೆ ನಂತರ ಸಿಸಿಟಿಎನ್ಎಸ್ ಅಪ್ಲಿಕೇಷನ್‌ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ರಾತ್ರಿ ವೇಳೆ ಅನುಮಾನಸ್ಪದ ವ್ಯಕ್ತಿಗಳು, ವಾಹನಗಳನ್ನು ತಪಾಸಣೆ ನಡೆಸಿ ಅಪ್ಲಿಕೇಷನ್‌ ಮೂಲಕ ಪಾತಾಕಿಗಳನ್ನು ಪತ್ತೆ ಹಚ್ಚಲಾಗುತ್ತಿಸದೆ. ಈ ವೇಳೆ ಎಂಸಿಸಿಟಿಎನ್ಎಸ್ ಅಪ್ಲಿಕೇಷನ್‌ ನಲ್ಲಿ ಬೆರಳಚ್ಚುಗಳ ಪರಿಶೀಲನೆ ನಡೆಸಲಾಗುತ್ತದೆ.

ಈಗಾಗಲೇ ಪೊಲೀಸರ ಬಳಿಯಿರುವ ಅಪರಾಧಿಗಳ ಪಿಂಗರ್ ಪ್ರಿಂಟ್ ಜೊತೆ ಮ್ಯಾಚ್ ಮಾಡಲಾಗುತ್ತದೆ. ಬೆರಳಚ್ಚು ಪರಿಶೀಲನೆ ವೇಳೆ ಆತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಕಂಡು ಬಂದರೆ ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ.

ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಮಹಾನಗರದಲ್ಲಿ ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನ ಮಾಡಿದ್ದ ಆರೋಪಿಗಳನ್ನು ಹಾಸನದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆನಂದ್​ ಅರಸೀಕೆರೆ ರೈಲ್ವೆ ಸ್ಟೇಷನ್ ಬಳಿ ರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು.

ಈ ವೇಳೆ ನೈಟ್ ಬೀಟ್ ಇದ್ದ ಅರಸೀಕೆರೆ ಪೊಲೀಸ್ ಠಾಣಾ ಪೊಲೀಸರು ಅನುಮಾನಗೊಂಡು MCCTNS ಮೊಬೈಲ್ ಅಪ್ಲೀಕೇಷನ್ ಮೂಲಕ ಫಿಂಗರ್ ಪ್ರಿಂಟ್ ಸಂಗ್ರಹಿಸಿದ್ದರು. ಆಗ ಆರೋಪಿ ಆನಂದ್​ ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನದಲ್ಲಿ ಭಾಗಿಯಾಗಿದ್ದಾನೆ ಎಂದು ಗೊತ್ತಾಗಿದೆ.

ಕೂಡಲೇ ಆನಂದನನ್ನು ಪೊಲೀಸರು ಬಂಧಿಸಿದ್ದಾರೆ. ಆನಂದ್ ಬಂಧನದ ಬಳಿಕ ಅರಸೀಕೆರೆ ಟೌನ್ ಪೊಲೀಸರು ಸಹಚರ ಚಂದ್ರುನನ್ನು ಬಂಧಿಸಿದ್ದಾರೆ. ಬಂಧಿತ ಆನಂದ್ ಮತ್ತು ಚಂದ್ರು ಬೆಂಗಳೂರಿನಲ್ಲಿ ಮನೆಗಳ್ಳತನದಲ್ಲಿ 30 ಗ್ರಾಂ ಚಿನ್ನಾಭರಣ ಕದ್ದಿದ್ದಾಗಿ ಬಾಯ್ಬಿಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ 30 ಗ್ರಾಂ. ಚಿನ್ನಾಭರಣ ಮತ್ತು 90 ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Tue, 13 September 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!