AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ನೈತಿಕ ಪೊಲೀಸ್​​ಗಿರಿ, ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಪೋಸ್ಟ್; ಖಡಕ್ ಎಚ್ಚರಿಕೆ ನೀಡಿದ ಬೆಂಗಳೂರು ಪೊಲೀಸರು

ದ್ವೇಷವನ್ನು ಹರಡುವ ವಿಷಯಗಳನ್ನು ಪೋಸ್ಟ್ ಮಾಡುವ ಜನರನ್ನು ತಕ್ಷಣವೇ ಬಂಧಿಸಲಾಗುವುದು. ನಾವು ಸಾಮಾಜಿಕ ಮಾಧ್ಯಮ ಸೇವಾ ಪೂರೈಕೆದಾರರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ.

Bengaluru News: ನೈತಿಕ ಪೊಲೀಸ್​​ಗಿರಿ, ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಪೋಸ್ಟ್; ಖಡಕ್ ಎಚ್ಚರಿಕೆ ನೀಡಿದ ಬೆಂಗಳೂರು ಪೊಲೀಸರು
ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ
ಗಣಪತಿ ಶರ್ಮಾ
|

Updated on:Jun 07, 2023 | 7:35 PM

Share

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ (Hate Messege) ಸಂದೇಶಗಳನ್ನು ಪ್ರಕಟಿಸುವುದು ಮತ್ತು ನೈತಿಕ ಪೊಲೀಸ್‌ಗಿರಿ (Moral Policing), ಅಪರಾಧಗಳ ಚಟುವಟಿಕೆಗಳ ಬಗ್ಗೆ ಬೆಂಗಳೂರು ನಗರ ಪೊಲೀಸರು (Bangalore Police) ಬುಧವಾರ ಎಚ್ಚರಿಕೆ ನೀಡಿದ್ದಾರೆ. ದ್ವೇಷಪೂರಿತ ಪೋಸ್ಟ್‌ಗಳನ್ನು ತಡೆಯುವ ವಿಚಾರವಾಗಿ ಪೊಲೀಸರಿಗೆ ಸಹಾಯ ಮಾಡಲು ಸಾಮಾಜಿಕ ಮಾಧ್ಯಮ ಸೇವಾ ಪೂರೈಕೆದಾರರು ಕೂಡ ಒಪ್ಪಿಕೊಂಡಿದ್ದಾರೆ.

ದ್ವೇಷವನ್ನು ಹರಡುವ ವಿಷಯಗಳನ್ನು ಪೋಸ್ಟ್ ಮಾಡುವ ಜನರನ್ನು ತಕ್ಷಣವೇ ಬಂಧಿಸಲಾಗುವುದು. ನಾವು ಸಾಮಾಜಿಕ ಮಾಧ್ಯಮ ಸೇವಾ ಪೂರೈಕೆದಾರರೊಂದಿಗೆ ಸಂಪರ್ಕದಲ್ಲಿದ್ದೇವೆ. ದ್ವೇಷವನ್ನು ಹರಡುವ ಅಥವಾ ಜನರ ಪ್ರತಿಷ್ಠೆಗೆ ಧಕ್ಕೆ ತರುವ ಪೋಸ್ಟ್‌ಗಳನ್ನು ಸಹಿಸಲಾಗುವುದಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಕಮಿಷನರ್ ದಯಾನಂದ ಸೇರಿದಂತೆ ಬೆಂಗಳೂರು ಪೊಲೀಸ್ ಅಧಿಕಾರಿಗಳು ನಗರದ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಕೋಮು ಸೌಹಾರ್ದತೆ ಕಾಪಾಡುವ ಕುರಿತು ಜಾಗೃತಿ ಮೂಡಿಸಲಿದ್ದಾರೆ.

ನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪಿಸಲಾಗುವುದು ಎಂದು ಮಂಗಳವಾರ ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ ಮಂಗಳೂರಿನಲ್ಲಿ ಘೋಷಿಸಿದ್ದರು. ಕಳೆದ ವಾರ ಮಂಗಳೂರಿನ ಸೋಮೇಶ್ವರದಲ್ಲಿ ಯುವತಿಯರೊಂದಿಗೆ ವಾಯುವಿಹಾರಕ್ಕೆ ತೆರಳಿದ್ದವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ನೈತಿಕ ಪೋಲೀಸಿಂಗ್ ಮಾಡಲು ಜನರಿಗೆ ಏನು ಹಕ್ಕಿದೆ? ಅದಕ್ಕಾಗಿ ನಮ್ಮಲ್ಲಿ ಪೊಲೀಸ್ ಮತ್ತು ಕಾನೂನು ಇದೆ. ಕರ್ನಾಟಕ ಪೊಲೀಸರು ದೇಶದಲ್ಲೇ ಅತ್ಯುತ್ತಮ ಸೇವೆಗೆ ಹೆಸರುವಾಸಿಯಾಗಿದ್ದಾರೆ. ನೈತಿಕ ಪೋಲೀಸಿಂಗ್ ಜನರಿಗೆ ತೊಂದರೆ ಉಂಟುಮಾಡುತ್ತದೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರನ್ನು ತರುತ್ತದೆ ಎಂದು ಪರಮೇಶ್ವರ ಅವರು ಮಂಗಳೂರಿನಲ್ಲಿ ಹೇಳಿದ್ದರು.

ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಲ್ಲೂ ಆ್ಯಂಟಿ ಕಮ್ಯೂನಲ್ ವಿಂಗ್ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಪರಮೇಶ್ವರ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Wed, 7 June 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ