AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆರ್​ಟಿಇ ಅಡಿ ಬಡ ಮಕ್ಕಳಿಗೆ ಸಿಗುತ್ತಿಲ್ಲ ಸೀಟು, ಪ್ರಧಾನಿ ಮೋದಿಗೆ ಪತ್ರ ಅಭಿಯಾನ ಆರಂಭಿಸಿದ ಪೋಷಕರು, ಮಕ್ಕಳು

ಬಡ ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿದ್ದ ಆರ್​ಟಿಇ ಬೆಂಗಳೂರಿನಲ್ಲಿ ಹೇಳ ಹೆಸರಿಲ್ಲದೆ ಕಣ್ಮರೆ ಆಗುತ್ತಿದೆ. ಅದೆಷ್ಟೋ ಹೆತ್ತವರಿಗೆ ಪ್ರತಿಷ್ಠಿತ ಶಾಲೆಯಲ್ಲಿ ತನ್ನ ಮಕ್ಕಳು ಓದಬೇಕು ಎಂಬ ಆಸೆ ಇದ್ದರೂ ಅದೊಂದು ತಿದ್ದುಪಡಿ ಪೋಷಕರ ನಿದ್ದೆ ಕೆಡಿಸಿತ್ತು. ಸದ್ಯ ಆರ್​ಟಿಇ ಅಡಿ ಸೀಟ್​​ಗಾಗಿ ಮಕ್ಕಳು ಮತ್ತು ಪೋಷಕರು ವಿನೂತನ ಹಾದಿ ಹಿಡಿದಿದ್ದಾರೆ. ಏನದು? ತಿಳಿಯಲು ಮುಂದೆ ಓದಿ.

ಬೆಂಗಳೂರು: ಆರ್​ಟಿಇ ಅಡಿ ಬಡ ಮಕ್ಕಳಿಗೆ ಸಿಗುತ್ತಿಲ್ಲ ಸೀಟು, ಪ್ರಧಾನಿ ಮೋದಿಗೆ ಪತ್ರ ಅಭಿಯಾನ ಆರಂಭಿಸಿದ ಪೋಷಕರು, ಮಕ್ಕಳು
ಆರ್​ಟಿಇ ಅಡಿ ಬಡ ಮಕ್ಕಳಿಗೆ ಸಿಗುತ್ತಿಲ್ಲ ಸೀಟು, ಪ್ರಧಾನಿ ಮೋದಿಗೆ ಪತ್ರ ಅಭಿಯಾನ ಆರಂಭಿಸಿದ ಪೋಷಕರು, ಮಕ್ಕಳು
Vinay Kashappanavar
| Updated By: Ganapathi Sharma|

Updated on: Aug 21, 2024 | 11:42 AM

Share

ಬೆಂಗಳೂರು, ಆಗಸ್ಟ್ 21: ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಶೇ 25ರಷ್ಟು ಸೀಟು ಬಡ ವಿದ್ಯಾರ್ಥಿಗಳಿಗೆ ಕೊಡಬೇಕು ಎಂಬ ನಿಯಮ 2009ರಲ್ಲಿ ರೂಪಿಸಲಾಗಿತ್ತು. ಆಗ ಅದೆಷ್ಟೋ ಜನ ಪೋಷಕರು ದೊಡ್ಡ ದೊಡ್ಡ ಶಾಲೆಯಲ್ಲಿ ಮಕ್ಕಳಿಗೆ ಸೀಟು ಪಡೆದು ಖುಷಿಪಟ್ಟರು. ಈ ಕಾಯ್ದೆಗೆ ಹೆಚ್​ಡಿ ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ 2019ರಲ್ಲಿ ತಿದ್ದುಪಡಿ ಮಾಡಲಾಯಿತು. ನಂತರ ಆರ್‌ಟಿಇ ಕಾಯ್ದೆ ಅಡಿಯಲ್ಲಿ ಸೀಟು ಪಡೆಯುವ ಅರ್ಜಿಗಳ ಸಂಖ್ಯೆ ಇಳಿಮುಖವಾಯಿತು. ಇದೇ ಕಾರಣಕ್ಕೆ ಈಗ ಲಕ್ಷಾಂತರ ವಿದ್ಯಾರ್ಥಿಗಳು ಆರ್​ಟಿಇ ಕಾಯ್ದೆಯ ತಿದ್ದುಪಡಿ ಮಾಡಲು ಪ್ರಧಾನಿಗೆ ಪತ್ರ ಬರೆಯುವ ಮೂಲಕ ಅಭಿಯಾನ ಶುರು ಮಾಡಿದ್ದಾರೆ.

ಪೋಷಕರು ಹಾಗೂ ಮಕ್ಕಳಿಂದ ಪ್ರಧಾನಿಗೆ ಪತ್ರ ಅಭಿಯಾನ ಆರಂಭವಾಗಿದ್ದು ಖಾಸಗಿ ಶಾಲೆಗಳ ಒಕ್ಕೂಟವೂ ಮಕ್ಕಳಿಗೆ ಅಭಿಯಾನದಲ್ಲಿ ಸಾಥ್ ಕೊಡುತ್ತಿದೆ. ಆರ್​ಟಿಇ ಕಾಯ್ದೆಗೆ ಮಾಡಲಾದ ತಿದ್ದುಪಡಿಯಿಂದ ಲಕ್ಷಂತಾರ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತಿದೆ. ಈ ಹಿಂದೆ ಕುಮಾರಸ್ವಾಮಿ 2019 ರಲ್ಲಿ ಸಿಎಂ ಆದ ವೇಳೆ ಶಿಕ್ಷಣ ಕಾಯ್ದೆಗೆ ತಂದ ತಿದ್ದುಪಡಿಯಿಂದ ಬೆಂಗಳೂರಿನಲ್ಲಿ ಆರ್​ಟಿಇ ಕೇವಲ ಬೆರಳಣೆಕೆಯಷ್ಟು ವಾರ್ಡ್​​ಗಳಲ್ಲಿ ಮಾತ್ರ ಸಿಮೀತ ಆಗುವ ಹಾಗಾಗಿದೆ. ರಾಜ್ಯದಲ್ಲಿ ಆರ್​ಟಿಇ ಕಾಯ್ದೆಗೆ ಮರು ತಿದ್ದುಪಡಿಗೆ ಎಲ್ಲಡೆ ಒತ್ತಾಯ ಶುರುವಾಗಿದೆ. ಆದರೆ ಶಿಕ್ಷಣ ಸಚಿವರು ಮಾತ್ರ ಸದ್ಯ ಆರ್ ಆರ್​ಟಿಇ ಕಾಯ್ದೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

ಆರ್​ಟಿಇ ಕಾಯ್ದೆಗೆ ಮಾಡಿದ್ದ ತಿದ್ದುಪಡಿ ಏನು?

ಆರ್‌ಟಿಇ ಅಡಿಯಲ್ಲಿ ಸೀಟು ಪಡೆಯಬೇಕಾದರೆ ಪಾಲಕರು ವಾಸಿಸುವ ಪ್ರದೇಶದ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆ ಇಲ್ಲದಿದ್ದರೆ ಮಾತ್ರ ಅರ್ಜಿ ಹಾಕಬಹುದು ಎಂದು ಬದಲಾವಣೆ ಮಾಡಲಾಗಿತ್ತು. ಬೆಂಗಳೂರಿನಲ್ಲಿ ಬಹುತೇಕ ಕಡೆಗಳಲ್ಲಿ ಸರ್ಕಾರಿ ಶಾಲೆಗಳು ಇರುವುದರಿಂದ ಪಾಲಕರಿಗೆ ಆರ್‌ಟಿಇ ಕಾಯ್ದೆ ಅಡಿ ಪ್ರಯೋಜನ ಪಡೆಯುವುದು ಕಷ್ಟವಾಗಿದೆ. ಅರ್ಜಿ ಹಾಕಿದರೂ ಪ್ರವೇಶ ಸಿಗದ ಹಿನ್ನೆಲೆಯಲ್ಲಿ ಪಾಲಕರು ಆಸಕ್ತಿ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಶಿಕ್ಷಣದಲ್ಲಿ ಆಂಧ್ರ ಮಾಡೆಲ್: SSLC, PUC ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್

ಆರ್​ಟಿಇ ತಿದ್ದುಪಡಿಗೆ ಈಗ ಪ್ರಧಾನಿ ಮೊರೆ ಹೋಗಲು ಮಕ್ಕಳು ಮತ್ತು ಪೋಷಕರು ಅಭಿಯಾನ ಆರಂಭ ಮಾಡಿದ್ದಾರೆ. ಇದು ಬದಲಾವಣೆ ತರಬಲ್ಲದೇ ಎಂಬುದನ್ನು ಕಾದು ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ