AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ರಜೆ ಮುಗಿಸಿ ಬೆಂಗಳೂರಿನತ್ತ ಜನ: ನೆಲಮಂಗಲ, ಪೀಣ್ಯ, ಕುಣಿಗಲ್ ಬೈಪಾಸ್ ಬಳಿ ಟ್ರಾಫಿಕ್​ ಜಾಮ್​

ದೀಪಾವಳಿ ರಜಾ ಮುಗಿಸಿಕೊಂಡು ಜನರು ಊರುಗಳಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಇದರಿಂದ ತುಮಕೂರು-ಸಿರಾ, ನೆಲಮಂಗಲ, ಪೀಣ್ಯ, ಕುಣಿಗಲ್ ಬೈಪಾಸ್ ಹತ್ತಿರ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ರವಿವಾರ ರಾತ್ರಿಯಿಂದ ಸೋಮವಾರದವರೆಗೆ ಈ ದಟ್ಟಣೆ ಮುಂದುವರಿದಿದ್ದು, ವಾಹನ ಸವಾರರು ಗಂಟೆಗಟ್ಟಲೇ ಟ್ರಾಫಿಕ್​ನಲ್ಲಿ ಸಿಲುಕಿಕೊಂಡರು.

ದೀಪಾವಳಿ ರಜೆ ಮುಗಿಸಿ ಬೆಂಗಳೂರಿನತ್ತ ಜನ: ನೆಲಮಂಗಲ, ಪೀಣ್ಯ, ಕುಣಿಗಲ್ ಬೈಪಾಸ್ ಬಳಿ ಟ್ರಾಫಿಕ್​ ಜಾಮ್​
ಬೆಂಗಳೂರು ಸಂಚಾರ ದಟ್ಟಣೆ
ವಿವೇಕ ಬಿರಾದಾರ
|

Updated on:Nov 04, 2024 | 12:54 PM

Share

ಬೆಂಗಳೂರು, ನವೆಂಬರ್​ 04: ದೀಪವಾಳಿ (Deepavali) ರಜೆ ಮುಗಿಸಿ ಜನರು ಊರುಗಳಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದಾರೆ. ಊರುಗಳಿಗೆ ತೆರಳಿದ ಜನರು ಒಮ್ಮೆಲೆ ಬಂದಿದ್ದರಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ತುಮಕೂರು-ಶಿರಾ, ನೆಲಮಂಗಲ ರಸ್ತೆಯಲ್ಲಿ ಭಾರಿ ಟ್ರಾಫಿಕ್​ ಜಾಮ್​ (Traffic Jam) ಉಂಟಾಗಿದೆ. ರವಿವಾರ (ಅ.03) ರಾತ್ರಿಯಿಂದ ಸೋಮವಾರ (ನ.04) ಈವರೆಗೂ ಟ್ರಾಫಿಕ್​ ಜಾಮ್​ ಉಂಟಾಗಿದೆ. ಇದರಿಂದ ವಾಹನ ಸವಾರರು ಗಂಟೆಗಟ್ಟಲೇ ಟ್ರಾಫಿಕ್​ನಲ್ಲಿ ಸಿಲುಕಿಕೊಂಡರು.

ರವಿವಾರ ರಾತ್ರಿ ಬೆಂಗಳೂರು-ಶಿರಾ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಾವಿರಾರು ಪ್ರಯಾಣಿಕರು ಪರದಾಡಿದರು. ಇಲ್ಲಿ ವಾಹನ ಸಂಚಾರ ನಿಧಾನಗತಿಯಲ್ಲಿದ್ದು, ವಾಹನ ವೇಗ ಗಂಟೆಗೆ 10 ಕಿಮೀ ಇತ್ತು. ರಸ್ತೆಯಲ್ಲಿ ವಾಹನಗಳು 3-5 ಕಿಲೋಮೀಟರ್‌ವರೆಗೆ ಸಾಲುಗಟ್ಟಿ ನಿಂತಿದ್ದವು.

ಟ್ವಿಟರ್​​ ಪೋಸ್ಟ್​​​

ಹಾಸನ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ನೆಲಮಂಗಲದ ಕುಣಿಗಲ್ ಬೈಪಾಸ್ ಹತ್ತಿರ ರವಿವಾರ (ನ.03)ರ ಸಂಜೆಯಿಂದ ಸೋಮವಾರ (ನ.04)ರ ನಸುಕಿನ ಜಾವದವರೆಗೆ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಮಳೆ ಸಹ ಬರುತ್ತಿತ್ತು. ಇದರಿಂದ ವಾಹನ ಸವಾರರು ಪರದಾಡಿದರು. ಆದರೆ, ನೆಲಮಂಗಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಜಾಗೃತರಾಗಿ ಸಂಚಾರ ವ್ಯವಸ್ಥೆ ಸುಗಮ ಗೊಳಿಸಿದರು.

ಟ್ವಿಟರ್​ ಪೋಸ್ಟ್​​

ಇನ್ನು, ಗೊರಗುಂಟೆಪಾಳ್ಯ, ಪೀಣ್ಯ ಫ್ಲೈ ಓವರ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿ ಕಿಲೋ ಮೀಟರ್​ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ. ಟ್ರಾಫಿಕ್​​ ಜಾಮ್​ನಲ್ಲಿ ಸಿಲುಕಿ ಆಂಬುಲೆನ್ಸ್ ಚಾಲಕ ಕೆಲಕಾಲ ಪರದಾಡಿದರು. ಬಳಿಕ ಪೊಲೀಸರು ಆಂಬುಲೆನ್ಸ್​ ತೆರಳಲು ಅನುವು ಮಾಡಿಕೊಟ್ಟರು. ಸದ್ಯ ಈ ರಸ್ತೆಯಲ್ಲಿ ವಾಹನ ಸಂಚಾರ ನಿಧಾನಗತಿಯಲ್ಲಿದೆ. ಟ್ರಾಫಿಕ್​ ಜಾಮ್​ ಕ್ಲಿಯರ್​ ಮಾಡಲು ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಮೆಟ್ರೋದತ್ತ ಮುಖ ಮಾಡಿದ ಜನ

ಬೆಂಗಳೂರು ನಗರದೊಳಗೆ ಬರಲು ಟ್ರಾಫಿಕ್​ ಜಾಮ್​ ಅಡ್ಡಿಯಾದ ಹಿನ್ನೆಲಯಲ್ಲಿ ಜನರು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾರೆ. ಟ್ರಾಫಿಕ್​ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಜನರು ನಾಗಸಂದ್ರದಿಂದ ನಮ್ಮ ಮೆಟ್ರೋ ಪ್ರಯಾಣಿಸಿದರು. ಸರ್ಕಾರಿ ಬಸ್​ಗಳಿಗೂ ಕೂಡ ಟ್ರಾಫಿಕ್​ ಜಾಮ್​ ಬಿಸಿ ತಟ್ಟಿದೆ. ಗಂಟೆಗಟ್ಟಲೆ ಬಸ್​ಗಳು ಟ್ರಾಫಿಕ್​ನಲ್ಲಿ ನಿಂತಿದ್ದವು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಕೆಲ ಪ್ರಯಾಣಿಕರು ನಾಗಸಂದ್ರದಲ್ಲೇ ಬಸ್​ನಿಂದ ಇಳಿದು ಮೆಟ್ರೋ ಮೂಲಕ ಬೆಂಗಳೂರು ನಗರದೊಳಗೆ ಆಗಮಿಸಿದರು.

ಇದನ್ನೂ ಓದಿ: ರಜೆ ಮುಗಿಸಿ ಬೆಂಗಳೂರಿಗೆ ಬಂದ ಜನ: ನಮ್ಮ ಮೆಟ್ರೋದಲ್ಲಿ ಜನಜಂಗುಳಿ

ಏಕಾಏಕಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೆಟ್ರೋದತ್ತ ಮುಖ ಮಾಡಿದ್ದರಿಂದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ ಉಂಟಾಗಿತ್ತು. ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತು ನಿಲ್ದಾಣದ ಒಳಗೆ ಪ್ರವೇಶಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:48 pm, Mon, 4 November 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ