AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಭಾನುವಾರ ಪವರ್ ಕಟ್

Power Cut in Bangalore: ಬೆಸ್ಕಾಂ ಕೈಗೊಂಡ ಕೆಲವು ಉನ್ನತೀಕರಣ ಮತ್ತು ಇತರ ನಿರ್ವಹಣಾ ಕಾರ್ಯಗಳಿಂದಾಗಿ ಬೆಂಗಳೂರಿನ ಹಲವಾರು ಭಾಗಗಳಲ್ಲಿ ಇಂದು (ಏ. 16) ಮತ್ತು ನಾಳೆ (ಏ. 17) ವಿದ್ಯುತ್ ಕಡಿತವಾಗಲಿದೆ.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಭಾನುವಾರ ಪವರ್ ಕಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 16, 2022 | 4:48 PM

ಬೆಂಗಳೂರು: ಬೆಂಗಳೂರಿನಲ್ಲಿ (Bangalore Power Cut) ನಡೆಯುತ್ತಿರುವ ನಿರ್ವಹಣಾ ಕಾಮಗಾರಿಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಭಾರೀ ವಿದ್ಯುತ್ ಕಡಿತವಾಗುತ್ತಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಕೈಗೊಂಡ ಕೆಲವು ಉನ್ನತೀಕರಣ ಮತ್ತು ಇತರ ನಿರ್ವಹಣಾ ಕಾರ್ಯಗಳಿಂದಾಗಿ ಬೆಂಗಳೂರಿನ ಹಲವಾರು ಭಾಗಗಳಲ್ಲಿ ಇಂದು (ಏ. 16) ಮತ್ತು ನಾಳೆ (ಏ. 17) ವಿದ್ಯುತ್ ಕಡಿತವಾಗಲಿದೆ. ಬೆಂಗಳೂರಿನ ಪೂರ್ವ, ದಕ್ಷಿಣ, ಉತ್ತರ ಮತ್ತು ಪಶ್ಚಿಮ ವಲಯಗಳ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ(Power Cut) ವ್ಯತ್ಯಯವಾಗಲಿದೆ.

ಇಂದು ಬೆಂಗಳೂರಿನ ಚಂದ್ರಾ ಲೇಔಟ್, ಸುಂಕದಕಟ್ಟೆ, ವೃಷಭಾವತಿ ಲೇಔಟ್, ಆರ್.ಆರ್. ಲೇಔಟ್, ಕಲ್ಯಾಣಿ ಲೇಔಟ್, ಜಯನಗರ 4ನೇ ಟಿ ಬ್ಲಾಕ್‌ನ 22ನೇ ಮುಖ್ಯರಸ್ತೆ, ತಲಘಟ್ಟಪುರ, ಇಂದಿರಾನಗರ, ಹೆಸರಘಟ್ಟ ಮುಖ್ಯರಸ್ತೆ, ಜಕ್ಕೂರು ಮುಖ್ಯರಸ್ತೆ, ವಿನಾಯಕ ಲೇಔಟ್​ ಮುಂತಾದೆಡೆ ಪವರ್ ಕಟ್ ಉಂಟಾಗಿತ್ತು.

ಭಾನುವಾರ (ಏಪ್ರಿಲ್ 17) ಬೆಂಗಳೂರಿನ ದಕ್ಷಿಣ ವಲಯದಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯ ಸುತ್ತಮುತ್ತ, ಬಿಟಿಎಂ ಲೇಔಟ್ 16ನೇ ಮುಖ್ಯ ರಸ್ತೆ, KPRC ಲೇಔಟ್, ಜಯನಗರ ಈಸ್ಟ್ ಎಂಡ್ ಮುಖ್ಯ ರಸ್ತೆ, ಗೊಟ್ಟಿಗೆರೆ, ಶಾಂತಿನಿಕೇತನ ಲೇಔಟ್, ನ್ಯೂ ಹಾರಿಜನ್ ಕಾಲೇಜು ರಸ್ತೆ, ವಿವೇಕಾನಂದ ಲೇಔಟ್, ಕೃಪಾನಿಧಿ ಕಾಲೇಜು ರಸ್ತೆ, ಕುಂದಲಹಳ್ಳಿ, ತಾವರೆಕೆರೆ ಮುಖ್ಯರಸ್ತೆ, ಮಡಿವಾಳ ಗ್ರಾ.ಪಂ. ರಸ್ತೆ ಹಾಗೂ ಚಿಕ್ಕಾಡುಗೋಡಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರಿನ ಪೂರ್ವ ವಲಯದಲ್ಲಿ ಉಮರ್‌ನಗರ, ಚಾಣಕ್ಯ ಲೇಔಟ್, ನಾಗವಾರ, ಕೆ. ನಾರಾಯಣಪುರ, ದೊಮ್ಮಸಂದ್ರ ರಸ್ತೆ, ಕೃಪಾನಿಧಿ ಕಾಲೇಜು ರಸ್ತೆ, ಗೌತಮಪುರ, ಕೇಂಬ್ರಿಡ್ಜ್ ಲೇಔಟ್, ಜೋಗುಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಪೈ ಲೇಔಟ್, ವರ್ತೂರು ರಸ್ತೆ, ಹೊಯ್ಸಳನಗರ ಮತ್ತು ಕೋಡಿಹಳ್ಳಿ 2ನೇ ಮುಖ್ಯ ರಸ್ತೆಯ ಭಾಗಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ವಿದ್ಯುತ್ ಕಡಿತ ಉಂಟಾಗಲಿದೆ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಬಿಇಎಲ್ ಲೇಔಟ್ 1 ಮತ್ತು 2ನೇ ಹಂತ, ಉಳ್ಳಾಲ ನಗರ, ಮಾರುತಿನಗರ, ರಾಬಿನ್ ಥಿಯೇಟರ್ ಸರ್ಕಲ್, ಟಿ.ಪಿ.ಮುಖ್ಯ ರಸ್ತೆ, ಬಿಎಚ್‌ಇಎಲ್ ಲೇಔಟ್, ಉತ್ತರಹಳ್ಳಿ, ಪ್ರಶಾಂತನಗರ, ನಾಗರಭಾವಿ 9ನೇ ಬ್ಲಾಕ್, ಕಾಮಾಕ್ಷಿಪಾಳ್ಯ, ವೃಷಭಾವತಿ ನಗರ, ಸುಂಕದಕಟ್ಟೆ ಮತ್ತು ಚಂದ್ರಾ ಲೇಔಟ್ ಭಾಗಗಳಲ್ಲಿ ಬೆಳಗ್ಗೆ ಮತ್ತು ಸಂಜೆ 5ರವರೆಗೆ ಪವರ್ ಕಟ್ ಇರಲಿದೆ.

ಬೆಂಗಳೂರಿನ ಉತ್ತರ ವಲಯದಲ್ಲಿ ಟಿ. ದಾಸರಹಳ್ಳಿ, ನೃಪತುಂಗ ರಸ್ತೆ, ಮಲ್ಲಸಂದ್ರ, ಬಾಬಾ ನಗರ, ಆರ್‌ಟಿ ನಗರ, ಕೊಡಿಗೇಹಳ್ಳಿ, ಎಂಎಸ್‌ ಪಾಳ್ಯ ವೃತ್ತ, ಏರ್‌ಫೋರ್ಸ್‌ ರಸ್ತೆ, ಹೆಸರಘಟ್ಟ, ಮಾವಳ್ಳಿಪುರ ಮತ್ತು ಮಂಜುನಾಥನಗರದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರುವುದಿಲ್ಲ.

ಇದನ್ನೂ ಓದಿ: Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ನಾಳೆ ಪವರ್ ಕಟ್; ನಿರ್ವಹಣಾ ಕಾಮಗಾರಿ ಆರಂಭಿಸಿದ ಬೆಸ್ಕಾಂ

Viral Video: ಆಂಧ್ರದ ಆಸ್ಪತ್ರೆಯಲ್ಲಿ ಪವರ್ ಕಟ್; ಮೊಬೈಲ್ ಬೆಳಕಿನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿದ ವೈದ್ಯರು

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ