Power Cut: ಬೆಂಗಳೂರಿನ ಯಶವಂತಪುರ, ದೊಮ್ಮಲೂರು, ಜಯನಗರ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

Power Cut in Bengaluru: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಜೆಪಿ ನಗರ, ಜಯನಗರ 8ನೇ ಬ್ಲಾಕ್, ದೊಮ್ಮಲೂರು, ಯಶವಂತಪುರದಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

Power Cut: ಬೆಂಗಳೂರಿನ ಯಶವಂತಪುರ, ದೊಮ್ಮಲೂರು, ಜಯನಗರ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್
ಪ್ರಾತಿನಿಧಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Jan 20, 2022 | 6:05 AM

ಬೆಂಗಳೂರು: ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಇಂದು (ಜನವರಿ 20) ಮತ್ತು ನಾಳೆ (ಜನವರಿ 21) ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಸ್ಕಾಂ (BESCOM) ನಿರ್ವಹಿಸುತ್ತಿರುವ ನಿರ್ವಹಣೆ ಮತ್ತು ಇತರ ಉನ್ನತೀಕರಣ ಕಾರ್ಯಗಳಿಂದ ವಿದ್ಯುತ್ ಕಡಿತ ಉಂಟಾಗಲಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಜೆಪಿ ನಗರ, ಜಯನಗರ 8ನೇ ಬ್ಲಾಕ್, ದೊಮ್ಮಲೂರು, ಯಶವಂತಪುರದಲ್ಲಿ ಇಂದು ಪವರ್ ಕಟ್ (Power Cut) ಇರಲಿದೆ.

ಇಂದು (ಗುರುವಾರ) ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಿದ್ದಯ್ಯ ರಸ್ತೆ, ಲಾಲ್‌ಬಾಗ್ ರಸ್ತೆ, ಸುಧಾಮನಗರ, ವಿಟ್ಲ ನಗರ, ಕುಮಾರಸ್ವಾಮಿ ಲೇಔಟ್, ಇಸ್ರೋ ಲೇಔಟ್, ವಸಂತ ವಲ್ಲಭ ನಗರ, ಶಾರದಾ ನಗರ, ಎಲ್‌ಐಸಿ ಕಾಲೋನಿ, ಜೆಪಿ ನಗರ 1 ನೇ ಹಂತ, ಜಯನಗರ 8ನೇ ಬ್ಲಾಕ್, ಪುಟ್ಟೇನಹಳ್ಳಿ ಮುಖ್ಯ ರಸ್ತೆ, ಬ್ಯಾಂಕ್ ಆಫ್ ಬರೋಡಾ ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ.

ಹಾಗೇ, ಚುಂಚಗಟ್ಟಾ ಗ್ರಾಮ, ಸುಪ್ರಜಾ ನಗರ, ಗಣಪತಿಪುರ, ಓಲ್ಡ್ ಬ್ಯಾಂಕ್ ಕಾಲೋನಿ, ಟೀಚರ್ಸ್ ಕಾಲೋನಿ, ಬೀರೇಶ್ವರ ನಗರ, ಕೋಣನಕುಂಟೆ ಕೈಗಾರಿಕಾ ಪ್ರದೇಶ, ಚುಂಚಗಟ್ಟಾ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಜೆಪಿ ನಗರ 2ನೇ ಹಂತ, ಜೆಪಿ ನಗರ 3ನೇ ಹಂತ, ಜೆಪಿ ನಗರ 4ನೇ ಹಂತ, ಜೆಪಿ ನಗರ 5ನೇ ಹಂತ ಹಂತ, 15ನೇ ಕ್ರಾಸ್ ಜೆಪಿ ನಗರ, ಡಾಲರ್ಸ್ ಲೇಔಟ್, ದೊಮ್ಮಲೂರು, ದೊಡ್ಡ ನೆಕುಂದಿ, ಐಟಿಪಿಎಲ್ ಮುಖ್ಯರಸ್ತೆ, ಗಾಂಧಿನಗರ, ಭೋಗನಹಳ್ಳಿ ಮುಖ್ಯರಸ್ತೆ, ಪಾಣತ್ತೂರು ಮುಖ್ಯರಸ್ತೆ, ಹೊಂಗಸಂದ್ರ, ಪವಮಾನ ನಗರ 8 ಮತ್ತು 9ನೇ ಹಂತ, ಜುನ್ನಸಂದ್ರ ಮುಖ್ಯರಸ್ತೆಯಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.

ಬೆಂಗಳೂರಿನ ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ 12ರವರೆಗೆ ವಿದ್ಯುತ್‌ ಕಡಿತವಾಗಲಿದೆ. ರಾಮಮೂರ್ತಿನಗರ ಮುಖ್ಯರಸ್ತೆ, ಮಾರ್ಗೊಂಡನಹಳ್ಳಿ, ಉದಯನಗರ, ಕೆ.ಜಿ. ಪುರ, ಇಂದಿರಾಗಾಂಧಿ ನಗರ, ರಾಮ್ ನಂಜಪ್ಪ ಲೇಔಟ್, ಉಮರ್ ನಗರ, ನಾಗವಾರ, ಚಾಣಕ್ಯ ಲೇಔಟ್, ಗೆದ್ದಲಹಳ್ಳಿ, ಕಾಫಿ ಬೋರ್ಡ್ ಲೇಔಟ್ ಮತ್ತು ಕಚಮಾರನಹಳ್ಳಿದಲ್ಲಿ ಪವರ್ ಕಟ್ ಇರಲಿದೆ.

ಬೆಂಗಳೂರಿನ ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವೈಯಾಲಿಕಾವಲ್, ಯಶವಂತಪುರದ ಕೆಲವು ಭಾಗಗಳು, ಮುನೇಶ್ವರ ಸ್ವಾಮಿ ಲೇಔಟ್, ಸಿದ್ದೇಶ್ವರ ಲೇಔಟ್, ಮಾವಳ್ಳಿಪುರ, ಶಬರಿನಗರ, ತಿರುಮೇನಹಳ್ಳಿ, ಬಾಗಲೂರು ಮುಖ್ಯರಸ್ತೆ, ದ್ವಾರಕಾ ನಗರ 1ನೇ ಮುಖ್ಯರಸ್ತೆ, ಜಕ್ಕೂರು ಮುಖ್ಯರಸ್ತೆ ಹತ್ತಿರ, ಗಂಗಾನಗರ, ಆರ್‌ಬಿಐ ಕಾಲೋನಿ, ಕೆಪಾರಾಸ್ ಕಾಲೋನಿ, ಕೆಪಾರಾಸ್ ಕಾಲೋನಿ, ಕೆಪಾರಳ್ಳಿ , ಹೆಸರಘಟ್ಟ ಮುಖ್ಯ ರಸ್ತೆ, ಬಾಗಲಗುಂಟೆ, ಭುವನೇಶ್ವರಿ ನಗರ, ಕಲ್ಯಾಣ ನಗರ ಮತ್ತು ರಾಜೀವ್ ಗಾಂಧಿ ನಗರದಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್‌ ಕಡಿತವಾಗಲಿದೆ. ಆರ್‌ವಿ ರಸ್ತೆ, ಬಿಎಚ್‌ಇಎಲ್ ಲೇಔಟ್, ದೊಡ್ಡಬೆಲೆ ರಸ್ತೆ, ವಿಘ್ನೇಶ್ವರ ನಗರ, ದುಬಾಸಿಪಾಳ್ಯ, ಬಿಡಿಎ ಏರಿಯಾ ಬ್ಲಾಕ್-1, ಕುವೆಂಪು ಮುಖ್ಯರಸ್ತೆ ಮತ್ತು ಗಂಗಾನಗರದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಶುಕ್ರವಾರ ಪವರ್ ಕಟ್ ಇರುವ ಪ್ರದೇಶಗಳು: ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಶಾಂತಿನಗರ, ನಂಜಪ್ಪ ವೃತ್ತ, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಸಿದ್ದಾಪುರ, ಸೋಮೇಶ್ವರನಗರ, ಜೆಪಿ ನಗರ 1ನೇ ಹಂತ, ಶಾಕಾಂಬರಿ ನಗರ, ಸಾರಕ್ಕಿ ಮಾರುಕಟ್ಟೆ, ಆರ್‌ಬಿಐ ಲೇಔಟ್, ಜೆಪಿ ನಗರ 5ನೇ ಹಂತ, ದೊರೆಸಾನಿಪಾಳ್ಯ, ಬನಶಂಕರಿ, ಮಾರತ್‌ವ್ಯೂ , ಚೌಡೇಶ್ವರಿ ದೇವಸ್ಥಾನ ರಸ್ತೆ, ಗಾಂಧಿನಗರ ರಸ್ತೆ, ಭೋಗನಹಳ್ಳಿ ಮುಖ್ಯರಸ್ತೆ, ಪಾಣತ್ತೂರು ಮುಖ್ಯರಸ್ತೆ, ವರ್ತೂರು ರಸ್ತೆ, ಹೊಂಗಸಂದ್ರ, ಗೊಟ್ಟಿಗೆರೆ ಮುಖ್ಯರಸ್ತೆ, ಬಿಡಿಎ 2ನೇ ಹಂತ, ತುಳಸೀಪುರ, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು, ಪರಪ್ಪನ ಅಗ್ರಹಾರ ಸುತ್ತಮುತ್ತಲಿನ ಪ್ರದೇಶ ಮತ್ತು ಕಳಸವನಹಳ್ಳಿಯಲ್ಲಿ ನಾಳೆ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ 12ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ದೂರವಾಣಿ ನಗರ, ಸುದ್ದಗುಂಟೆ ಪಾಳ್ಯ, ಕೆಜಿ ಪುರ ಮುಖ್ಯ ರಸ್ತೆ, ಡಿಫೆನ್ಸ್ ಕಾಲೋನಿ, ನಾರಾಯಣಪುರ, ಬಿಡಿಎಸ್ ನಗರ, ಬೈರತಿ, ಬೈರತಿ ಗ್ರಾಮ, ಎಚ್‌ಬಿಆರ್ 4ನೇ ಬ್ಲಾಕ್, ಎಚ್‌ಬಿಆರ್ 5ನೇ ಬ್ಲಾಕ್ ಮತ್ತು ಚನ್ನಸಂದ್ರದಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಲಿದೆ.

ಬೆಂಗಳೂರಿನ ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶ್ರೀರಾಮಪುರಂ, ಪ್ಲಾಟ್‌ಫಾರ್ಮ್ ರಸ್ತೆ, ನ್ಯೂ ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಎಚ್‌ಎಂಟಿ ಇಂಡಸ್ಟ್ರಿ, ಸಾಯಿನಗರ 2ನೇ ಹಂತ, ಬಿಎಚ್‌ಇಎಲ್ ಲೇಔಟ್, ಕೊಡಿಗೇಹಳ್ಳಿ, ಕೆಂಪನಹಳ್ಳಿ, ಅಮೃತನಗರ, ಹೆಗಡೆ ನಗರ, ಕೋಗಿಲು, ದ್ವಾರಕಾ ನಗರ, ಶೆಟ್ಟಿಹಳ್ಳಿ, ಮಲ್ಲಸಂದ್ರ, ಹೆಸರಘಟ್ಟ ರಸ್ತೆ, ಭುವನಘಟ್ಟ ರಸ್ತೆ , ಟಿ ದಾಸರಹಳ್ಳಿ, ಕಂಠೀರವ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯಾಪೀಠ, ಶಂಕರನಾಗ್ ವೃತ್ತ, ಹನುಮಂತನಗರ, ಉತ್ತರಹಳ್ಳಿ ರಸ್ತೆ, ಕೊಂಚಂದ್ರ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಲೇಔಟ್, ಭೂಮಿಕಾ ಲೇಔಟ್, ಬಿಎಚ್‌ಇಎಲ್ ಲೇಔಟ್, ಆಂಧ್ರಹಳ್ಳಿ ಸರ್ಕಲ್, ಡಿ ಗ್ರೂಪ್ ಲೇಔಟ್, ಕೆಂಗೇರಿ ಮುಖ್ಯರಸ್ತೆ, ಉಳ್ಳಾಲ ನಗರ, ಬಿಇಎಲ್ 1ನೇ ಹಂತ, ಬಿಇಎಲ್ 1ನೇ ಹಂತದಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದು ಪವರ್ ಕಟ್

Bengaluru RTO: ಶಾರ್ಟ್ಸ್​ ಧರಿಸಿ ಹೋಗಿದ್ದಕ್ಕೆ ಆರ್​ಟಿಒ ಅಧಿಕಾರಿಯಿಂದ ಬೆಂಗಳೂರಿನ ಟೆಕ್ಕಿಗೆ ಕಿರುಕುಳ

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ