AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಹಲವೆಡೆ ಇಂದು, ನಾಳೆ ಪವರ್​​ ಕಟ್; ಇಲ್ಲಿದೆ ವಿವರ

Bangalore Power Outage; ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳ ಕಾರಣದಿಂದಾಗಿ ಬೆಂಗಳೂರು ನಗರದ ಹಲವೆಡೆ ಜೂನ್ 12 ರವರೆಗೆ ವಿದ್ಯುತ್ ಕಡಿತ ಮಾಡಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ. ಯಾವೆಲ್ಲ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ? ಪವರ್ ಕಟ್ ಸಮಯ ಎಷ್ಟು ಗಂಟೆಯಿಂದ ಎಷ್ಟು ಗಂಟೆಯವರೆಗೆ ಎಂಬ ಮಾಹಿತಿ ಇಲ್ಲಿದೆ.

Bengaluru Power Cut: ಬೆಂಗಳೂರಿನ ಹಲವೆಡೆ ಇಂದು, ನಾಳೆ ಪವರ್​​ ಕಟ್; ಇಲ್ಲಿದೆ ವಿವರ
ಬೆಂಗಳೂರಿನ ಹಲವೆಡೆ ಇಂದು, ನಾಳೆ ಪವರ್​​ ಕಟ್; ಇಲ್ಲಿದೆ ವಿವರ
ಗಣಪತಿ ಶರ್ಮಾ
|

Updated on: Jun 11, 2024 | 9:33 AM

Share

ಬೆಂಗಳೂರು, ಜೂನ್ 11: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಕೆಲವು ಪ್ರದೇಶಗಳಲ್ಲಿ ಪವರ್ ಕಟ್ (Power Cut) ಇರಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ದುರಸ್ತಿ ಕಾರ್ಯ, ನಿರ್ವಹಣೆ ಮತ್ತಿತರ ಕಾರ್ಯಗಳಿಗಾಗಿ ಪವರ್ ಕಟ್ ಮಾಡಲಾಗುತ್ತಿದೆ ಎಂದು ಬೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ತಿಳಿಸಿವೆ.

ಜೂನ್ 10 ರಿಂದಲೇ ನಿರ್ವಹಣೆ, ದುರಸ್ತಿ ಕಾರ್ಯ ಆರಂಭಿಸಲಾಗಿದ್ದು, ಮೊದಲ ದಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಿದೆ. ಜೂನ್ 8-9 ರಂದು ಕೂಡ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಿತ್ತು. ಜೂನ್ 10 ರ ಅದೇ ಸಮಯದಲ್ಲಿ ಸಿ ಕುಪ್ಪೆ, ತಾವರೆಕೆರೆ, ಹಕ್ಕಿ ಮಾರಿಪಾಳ್ಯ, ಹಂಗರಹಳ್ಳಿ, ಎಂಎಚ್ ಪಾಳ್ಯ, ಟಿ.ಬೊಮ್ಮೇನಹಳ್ಳಿ, ನೀಲಸಂದ್ರ ಮತ್ತು ಆರ್ ಬ್ಯಾಡರಹಳ್ಳಿಯಲ್ಲಿ ವಿದ್ಯುತ್ ಕಡಿತ ಮಾಡಲಾಗಿತ್ತು.

ಪವರ್ ಕಟ್ ಸಮಯ

ಇಂದು ಮತ್ತು ನಾಳೆ (ಜೂನ್ 11-12 ರಂದು) ವಿದ್ಯುತ್ ಕಡಿತದ ಸಮಯವು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಇರುತ್ತದೆ.

ಎಲ್ಲೆಲ್ಲಿ ಪವರ್ ಕಟ್?

ಜೂನ್ 11 (ಬೆಳಿಗ್ಗೆ 10 ರಿಂದ ಮಧ್ಯಾಹ್ನ 3): ಆಡುಗೋಡಿ, ಸಾಲರ್ಪುರಿಯ ಟವರ್, ಚಿಕ್ಕ ಆಡುಗೋಡಿ, ನಂಜಪ್ಪ ಲೇಔಟ್, ಚಿಕ್ಕ ಲಕ್ಷ್ಮಯ್ಯ ಲೇಔಟ್, ವಿಲ್ಸನ್ ಗಾರ್ಡನ್, ಲಕ್ಕಸಂದ್ರ ಮತ್ತು ಲಾಲ್ಜಿನಗರ.

ಇದನ್ನೂ ಓದಿ: ಸಂಚಾರ ನಿಲ್ಲಿಸಿದ ಇಂದಿರಾ ಮೊಬೈಲ್ ಕ್ಯಾಂಟೀನ್​ಗಳು; ಗ್ಯಾರಂಟಿ ಗಮನದಲ್ಲಿ ಸಿಎಂ ಕನಸಿನ ಯೋಜನೆಗೆ ನಿರ್ಲಕ್ಷ್ಯ

ಜೂನ್ 12 (ಬೆಳಿಗ್ಗೆ 10 ರಿಂದ ಮಧ್ಯಾಹ್ನ 3): ಶ್ರೀನಗರ, ಹೊಸಕೆರೆಹಳ್ಳಿ, ವೀರಭದ್ರನಗರ, ನ್ಯೂ ಟಿಂಬರ್ಯಾರ್ಡ್ (NTY) ಲೇಔಟ್, ತ್ಯಾಗರಾಜನಗರ, ಬಿಎಸ್​ಕೆ III ಹಂತ, ಕತ್ರಿಗುಪ್ಪೆ, ಗಿರಿನಗರ 4 ನೇ ಹಂತ, ವಿಲ್ಸನ್ ಗಾರ್ಡನ್, ಜೆಸಿ ರಸ್ತೆ, ಶಾಂತಿನಗರ, ರಿಚ್ಮಂಡ್ ವೃತ್ತ, ರೆಸಿಡೆನ್ಸಿ ರಸ್ತೆ ರಸ್ತೆ, ಸಂಪಂಗಿರಾಮನಗರ, ಕೆಎಚ್ ರಸ್ತೆ, ಸುಬ್ಬಯ್ಯ ವೃತ್ತ ಮತ್ತು ಸುಧಾಮನಗರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?