AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದಿನಿಂದ ಬುಧವಾರದವರೆಗೆ ಪವರ್ ಕಟ್

Power cut in Bangalore: ಬೆಂಗಳೂರಿನ ಟೀಚರ್ಸ್​ ಕಾಲೋನಿ, ಶ್ರೀನಿವಾಸನಗರ, ಬ್ಯಾಂಕ್ ಕಾಲೋನಿ, ಕತ್ರಿಗುಪ್ಪೆ ಮುಂತಾದ ಏರಿಯಾಗಳಲ್ಲಿ ಇಂದು ಬೆಸ್ಕಾಂ ಮತ್ತು ಕೆಪಿಟಿಸಿಎಲ್​ನ ಕೇಬಲ್ ಕನ್ವರ್ಷನ್ ಕೆಲಸ ನಡೆಯುತ್ತಿರುವುದರಿಂದ ಇಂದು ಪವರ್ ಕಟ್ ಇರಲಿದೆ.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದಿನಿಂದ ಬುಧವಾರದವರೆಗೆ ಪವರ್ ಕಟ್
ವಿದ್ಯುತ್ ವ್ಯತ್ಯಯ
TV9 Web
| Edited By: |

Updated on:Nov 15, 2021 | 12:40 PM

Share

ಬೆಂಗಳೂರು: ವೀಕೆಂಡ್ ಮುಗಿದು ಇಂದಿನಿಂದ ಮತ್ತೆ ಆಫೀಸಿನ ಕೆಲಸ ಆರಂಭವಾಗಿದೆ. ಬಹುತೇಕ ಕಂಪನಿಗಳಲ್ಲಿ ವರ್ಕ್ ಫ್ರಂ ಹೋಂ (Work from Home) ಅಂತ್ಯವಾಗಿದ್ದರೂ ಕೆಲವು ಕಂಪನಿಗಳ ಉದ್ಯೋಗಿಗಳು ಇನ್ನೂ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಆದರೆ, ಇಂದಿನಿಂದ ಬುಧವಾರದವರೆಗೂ (ನ. 17) ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ (Power Cut) ಬೆಂಗಳೂರಿಗರು ಬದಲಿ ವ್ಯವಸ್ಥೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. 3 ದಿನಗಳ ಪವರ್ ಕಟ್ ಬಗ್ಗೆ ಬೆಸ್ಕಾಂ (BESCOM) ಮಾಹಿತಿ ನೀಡಿದೆ. ಹಾಗಾದರೆ, ಬೆಂಗಳೂರಿನ ಯಾವೆಲ್ಲ ಏರಿಯಾಗಳಲ್ಲಿ ಇಂದಿನಿಂದ 3 ದಿನ ಪವರ್​ ಕಟ್ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಟೀಚರ್ಸ್​ ಕಾಲೋನಿ, ಶ್ರೀನಿವಾಸನಗರ, ಬ್ಯಾಂಕ್ ಕಾಲೋನಿ, ಕತ್ರಿಗುಪ್ಪೆ ಮುಂತಾದ ಏರಿಯಾಗಳಲ್ಲಿ ಇಂದು ಬೆಸ್ಕಾಂ ಮತ್ತು ಕೆಪಿಟಿಸಿಎಲ್​ನ ಕೇಬಲ್ ಕನ್ವರ್ಷನ್ ಕೆಲಸ ನಡೆಯುತ್ತಿರುವುದರಿಂದ ಇಂದು ಪವರ್ ಕಟ್ ಇರಲಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಜಕ್ಕಸಂದ್ರ, ಹೆಚ್​ಎಸ್​ಆರ್​ ಸೆಕ್ಟರ್ 5, ಟೀಚರ್ಸ್ ಕಾಲೋನಿ, ವೆಂಕಟಾಪುರ ಭಾಗಗಳು, ಮೀನಾಕ್ಷಿ ಲೇಔಟ್, ಮೈಸೂರು ಬ್ಯಾಂಕ್ ಕಾಲೋನಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ಆವಲಹಳ್ಳಿ, ಎಸ್​ಬಿಐ ಲೇಔಟ್, ಬಿಳೇಕಹಳ್ಳಿಯಲ್ಲಿ ಪವರ್ ಕಟ್ ಇರಲಿದೆ.

ನಾಳೆ ಅಂದರೆ ಮಂಗಳವಾರ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಸೆಕ್ಟರ್ 6, ಬಿಡಿಎ ಅಂಜನಾಪುರ, ವೀವರ್ಸ್ ಕಾಲೋನಿ, ಕೃಷ್ಣಪ್ಪ ಲೇಔಟ್, ಮೀನಾಕ್ಷಿ ಲೇಔಟ್, ಆವಲಹಳ್ಳಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ.

ಬುಧವಾರ (ನ. 17) ಹೆಚ್ಎಸ್ಆರ್ ಲೇಔಟ್ 17ನೇ ಕ್ರಾಸ್, ಅಂಜನಾಪುರ 3ನೇ ಬ್ಲಾಕ್, ಜಯರಾಮ ರೆಡ್ಡಿ ಲೇಔಟ್, ಜಿಬಿ ಪಾಳ್ಯ ರಸ್ತೆ, ರಾಘವನ ಪಾಳ್ಯ, ಆವಲಹಳ್ಳಿ, ಸಹಾರಾ ಬೇಕರಿ ರಸ್ತೆಯಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಏರಿಯಾಗಳಲ್ಲಿ ಅ. 16ರಿಂದ 22ರವರೆಗೆ ಪವರ್ ಕಟ್

Bengaluru Power Cut: ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಪವರ್​ ಕಟ್; ಯಾವ ಯಾವ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ ಗೊತ್ತಾ?​

Published On - 12:38 pm, Mon, 15 November 21

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ