AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಇಂದು ಮತ್ತು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಆಗಸ್ಟ್ 2 ಮತ್ತು 3 ರಂದು ಬೆಂಗಳೂರಿನ ಸರ್ಜಾಪುರ ಮತ್ತು ಅತ್ತಿಬೆಲೆ ವ್ಯಾಪ್ತಿಯಲ್ಲಿ ವಿದ್ಯುತ್ ಕಾರ್ಯಾಚರಣೆಗಳಿಂದಾಗಿ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ. ಹಾಗಾದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Bengaluru Power Cut: ಇಂದು ಮತ್ತು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Power Cut
ಗಂಗಾಧರ​ ಬ. ಸಾಬೋಜಿ
|

Updated on:Aug 02, 2025 | 8:14 AM

Share

ಬೆಂಗಳೂರು, ಆಗಸ್ಟ್​ 02: ಸರ್ಜಾಪುರ ಮತ್ತು ಅತ್ತಿಬೆಲೆ 66 ಕೆವಿ ವ್ಯಾಪ್ತಿಯಲ್ಲಿ ಹೆಚ್‌ಟಿಎಲ್‌ಎಸ್​ ಕಂಡಕ್ಟರ್‌ಗಳ ತಂತಿ ಜೋಡಣೆ ಕಾರ್ಯಚರಣೆ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಆಗಸ್ಟ್ 2 ಮತ್ತು 3 ರಂದು ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ (power cut) ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM)  ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ. ಹಾಗಾದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂಬ ಮಾಹಿತಿ ಇಲ್ಲಿದೆ.

ಎಲ್ಲೆಲ್ಲಿ ವಿದ್ಯುತ್​ ಕಡಿತ?

66/11 ಕೆವಿ ಅತ್ತಿಬೆಲೆ ವ್ಯಾಪ್ತಿಯಲ್ಲಿ: ಯಡವನಹಳ್ಳಿ, ಇಚ್ಚಂಗೂರು, ವಡ್ಡರಪಾಳ್ಯ, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ಬಳಗಾರನಹಳ್ಳಿ, ಮಂಚನಹಳ್ಳಿ, ಅತ್ತಿಬೆಲೆ ಟೌನ್, ಮಾಯಸಂದ್ರ, ದಾಸನಾಪುರ, ಬಲ್ಲೂರು, ಕಂಬಳಿಪುರ, ಚಿಕ್ಕ ಕಾನಹಳ್ಳಿ, ಇಂಡ್ಲಬೆಲೆ ಮತ್ತು ಹಾರೋಹಳ್ಳಿ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಇದನ್ನೂ ಓದಿ
Image
ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ, ಬರಲಿದೆ ಡಿಜಿಟಲ್ ಟೆಲಿಮೆಟ್ರಿ!
Image
ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ
Image
ಬೆಂಗಳೂರಿನ ಈ ನಗರಗಳಲ್ಲಿ ಒಂದು ವಾರ ವಿದ್ಯುತ್ ವ್ಯತ್ಯಯ, ಇಲ್ಲಿದೆ ಮಾಹಿತಿ
Image
ಸ್ಮಾರ್ಟ್ ಮೀಟರ್ ಅಕ್ರಮ: ಜಾರ್ಜ್​ಗೆ ಸಂಕಷ್ಟ, ಕೋರ್ಟ್​ಗೆ ಬಿಜೆಪಿ ದೂರು

66/11 ಕೆವಿ ಆನೇಕಲ್ ವ್ಯಾಪ್ತಿಯಲ್ಲಿ: ಆನೇಕಲ್ ಟೌನ್, ಕಾವಲಹೊಸಹಳ್ಳಿ, ಗೌರೇನಹಳ್ಳಿ, ಹಾಲ್ದೇನಹಳ್ಳಿ, ಹೊಂಪಲಘಟ್ಟ, ಚೂಡೇನಹಳ್ಳಿ, ಹೊನ್ನ ಕಳಸಾಪುರ, ಕರ್ಪೂರು, ಬ್ಯಾಗಡದೇನಹಳ್ಳಿ, ಕಾದ ಅಗ್ರಹಾರ, ಚಿಕ್ಕಹಾಗಡೆ, ದೊಡ್ಡಹಾಗಡೆ.

66/11 ಕೆವಿ ಸಮಂದೂರು ವ್ಯಾಪ್ತಿಯಲ್ಲಿ: ಸಮಂದೂರು, ರಾಚಮನಹಳ್ಳಿ, ಗುಡ್ಡನಹಳ್ಳಿ, ಅರವಂಟಿಗೆ ಪುರ, ಪಿ.ಗೊಲ್ಲಹಳ್ಳಿ, ತೆಲಗಾರ ಹಳ್ಳಿ, ವನಕನಹಳ್ಳಿ.

ಬೆಸ್ಕಾಂ ವಿದ್ಯುತ್ ಬಿಲ್ ಪಾವತಿಯ ಎಟಿಸಿ ಸೇವೆ ಸ್ಥಗಿತ

ಬೆಸ್ಕಾಂ ವಿದ್ಯುತ್ ಬಿಲ್ ಪಾವತಿಯ ಎಟಿಸಿ (ಎನಿ ಟೈಮ್ ಪೇಮೆಂಟ್) ಸೇವೆಯನ್ನು ಶುಕ್ರವಾರದಿಂದ (ಆಗಸ್ಟ್ 1 ರಿಂದ) ಸ್ಥಗಿತಗೊಳಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಎಟಿಪಿ ಪಾವತಿ ಯಂತ್ರ ಸೇವಾ ಪೂರೈಕೆದಾರರ ಗುತ್ತಿಗೆ ಅವಧಿ ಮುಕ್ತಾಯಾಗಿದ್ದು, ಜೊತೆಗೆ ವಿದ್ಯುತ್ ಬಿಲ್ ಪಾವತಿಗೆ ಸಾಕಷ್ಟು ಆಯ್ಕೆಗಳಿವೆ. ಈ ನಿಟ್ಟಿನಲ್ಲಿ ಎಟಿಪಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: Karnataka Smart Meter Scam | ಸ್ಮಾರ್ಟ್ ಮೀಟರ್ ಅಕ್ರಮ ಆರೋಪ: ಸಚಿವ ಕೆಜೆ ಜಾರ್ಜ್​ಗೆ ಸಂಕಷ್ಟ, ಕೋರ್ಟ್​ ಮೆಟ್ಟಿಲೇರಿದ ಬಿಜೆಪಿ

ಗ್ರಾಹಕರು ಅದರ ಬದಲಾಗಿ ಬೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿರುವ ನಗದು ಪಾವತಿ ಕೇಂದ್ರಗಳಲ್ಲಿ ಅಂದರೆ ಬೆಂಗಳೂರು ಒನ್, ಬೆಸ್ಕಾಂ ವ್ಯಾಪ್ತಿಯಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಪಾವತಿ ಮಾಡಬಹುದಾಗಿದೆ. ಅಷ್ಟೆ ಅಲ್ಲದೇ ಯುಪಿಐ ಮೂಲಕವೂ ವಿದ್ಯುತ್ ಬಿಲ್​ಗಳನ್ನು ಪಾವತಿಸಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:10 am, Sat, 2 August 25

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ