AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಇಂದು ಮತ್ತು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಆಗಸ್ಟ್ 2 ಮತ್ತು 3 ರಂದು ಬೆಂಗಳೂರಿನ ಸರ್ಜಾಪುರ ಮತ್ತು ಅತ್ತಿಬೆಲೆ ವ್ಯಾಪ್ತಿಯಲ್ಲಿ ವಿದ್ಯುತ್ ಕಾರ್ಯಾಚರಣೆಗಳಿಂದಾಗಿ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ. ಹಾಗಾದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Bengaluru Power Cut: ಇಂದು ಮತ್ತು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Power Cut
ಗಂಗಾಧರ​ ಬ. ಸಾಬೋಜಿ
|

Updated on:Aug 02, 2025 | 8:14 AM

Share

ಬೆಂಗಳೂರು, ಆಗಸ್ಟ್​ 02: ಸರ್ಜಾಪುರ ಮತ್ತು ಅತ್ತಿಬೆಲೆ 66 ಕೆವಿ ವ್ಯಾಪ್ತಿಯಲ್ಲಿ ಹೆಚ್‌ಟಿಎಲ್‌ಎಸ್​ ಕಂಡಕ್ಟರ್‌ಗಳ ತಂತಿ ಜೋಡಣೆ ಕಾರ್ಯಚರಣೆ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಆಗಸ್ಟ್ 2 ಮತ್ತು 3 ರಂದು ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ (power cut) ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM)  ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ. ಹಾಗಾದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂಬ ಮಾಹಿತಿ ಇಲ್ಲಿದೆ.

ಎಲ್ಲೆಲ್ಲಿ ವಿದ್ಯುತ್​ ಕಡಿತ?

66/11 ಕೆವಿ ಅತ್ತಿಬೆಲೆ ವ್ಯಾಪ್ತಿಯಲ್ಲಿ: ಯಡವನಹಳ್ಳಿ, ಇಚ್ಚಂಗೂರು, ವಡ್ಡರಪಾಳ್ಯ, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ಬಳಗಾರನಹಳ್ಳಿ, ಮಂಚನಹಳ್ಳಿ, ಅತ್ತಿಬೆಲೆ ಟೌನ್, ಮಾಯಸಂದ್ರ, ದಾಸನಾಪುರ, ಬಲ್ಲೂರು, ಕಂಬಳಿಪುರ, ಚಿಕ್ಕ ಕಾನಹಳ್ಳಿ, ಇಂಡ್ಲಬೆಲೆ ಮತ್ತು ಹಾರೋಹಳ್ಳಿ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಇದನ್ನೂ ಓದಿ
Image
ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ, ಬರಲಿದೆ ಡಿಜಿಟಲ್ ಟೆಲಿಮೆಟ್ರಿ!
Image
ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ
Image
ಬೆಂಗಳೂರಿನ ಈ ನಗರಗಳಲ್ಲಿ ಒಂದು ವಾರ ವಿದ್ಯುತ್ ವ್ಯತ್ಯಯ, ಇಲ್ಲಿದೆ ಮಾಹಿತಿ
Image
ಸ್ಮಾರ್ಟ್ ಮೀಟರ್ ಅಕ್ರಮ: ಜಾರ್ಜ್​ಗೆ ಸಂಕಷ್ಟ, ಕೋರ್ಟ್​ಗೆ ಬಿಜೆಪಿ ದೂರು

66/11 ಕೆವಿ ಆನೇಕಲ್ ವ್ಯಾಪ್ತಿಯಲ್ಲಿ: ಆನೇಕಲ್ ಟೌನ್, ಕಾವಲಹೊಸಹಳ್ಳಿ, ಗೌರೇನಹಳ್ಳಿ, ಹಾಲ್ದೇನಹಳ್ಳಿ, ಹೊಂಪಲಘಟ್ಟ, ಚೂಡೇನಹಳ್ಳಿ, ಹೊನ್ನ ಕಳಸಾಪುರ, ಕರ್ಪೂರು, ಬ್ಯಾಗಡದೇನಹಳ್ಳಿ, ಕಾದ ಅಗ್ರಹಾರ, ಚಿಕ್ಕಹಾಗಡೆ, ದೊಡ್ಡಹಾಗಡೆ.

66/11 ಕೆವಿ ಸಮಂದೂರು ವ್ಯಾಪ್ತಿಯಲ್ಲಿ: ಸಮಂದೂರು, ರಾಚಮನಹಳ್ಳಿ, ಗುಡ್ಡನಹಳ್ಳಿ, ಅರವಂಟಿಗೆ ಪುರ, ಪಿ.ಗೊಲ್ಲಹಳ್ಳಿ, ತೆಲಗಾರ ಹಳ್ಳಿ, ವನಕನಹಳ್ಳಿ.

ಬೆಸ್ಕಾಂ ವಿದ್ಯುತ್ ಬಿಲ್ ಪಾವತಿಯ ಎಟಿಸಿ ಸೇವೆ ಸ್ಥಗಿತ

ಬೆಸ್ಕಾಂ ವಿದ್ಯುತ್ ಬಿಲ್ ಪಾವತಿಯ ಎಟಿಸಿ (ಎನಿ ಟೈಮ್ ಪೇಮೆಂಟ್) ಸೇವೆಯನ್ನು ಶುಕ್ರವಾರದಿಂದ (ಆಗಸ್ಟ್ 1 ರಿಂದ) ಸ್ಥಗಿತಗೊಳಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಎಟಿಪಿ ಪಾವತಿ ಯಂತ್ರ ಸೇವಾ ಪೂರೈಕೆದಾರರ ಗುತ್ತಿಗೆ ಅವಧಿ ಮುಕ್ತಾಯಾಗಿದ್ದು, ಜೊತೆಗೆ ವಿದ್ಯುತ್ ಬಿಲ್ ಪಾವತಿಗೆ ಸಾಕಷ್ಟು ಆಯ್ಕೆಗಳಿವೆ. ಈ ನಿಟ್ಟಿನಲ್ಲಿ ಎಟಿಪಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: Karnataka Smart Meter Scam | ಸ್ಮಾರ್ಟ್ ಮೀಟರ್ ಅಕ್ರಮ ಆರೋಪ: ಸಚಿವ ಕೆಜೆ ಜಾರ್ಜ್​ಗೆ ಸಂಕಷ್ಟ, ಕೋರ್ಟ್​ ಮೆಟ್ಟಿಲೇರಿದ ಬಿಜೆಪಿ

ಗ್ರಾಹಕರು ಅದರ ಬದಲಾಗಿ ಬೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿರುವ ನಗದು ಪಾವತಿ ಕೇಂದ್ರಗಳಲ್ಲಿ ಅಂದರೆ ಬೆಂಗಳೂರು ಒನ್, ಬೆಸ್ಕಾಂ ವ್ಯಾಪ್ತಿಯಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಪಾವತಿ ಮಾಡಬಹುದಾಗಿದೆ. ಅಷ್ಟೆ ಅಲ್ಲದೇ ಯುಪಿಐ ಮೂಲಕವೂ ವಿದ್ಯುತ್ ಬಿಲ್​ಗಳನ್ನು ಪಾವತಿಸಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:10 am, Sat, 2 August 25

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್