Bengaluru Power Cut: ಇಂದು ಮತ್ತು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

Bengaluru Power Cut: ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿಯಿಂದಾಗಿ ಸೆಪ್ಟೆಂಬರ್ 22 ಮತ್ತು 23 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಘೋಷಿಸಿದೆ. ಉತ್ತರ ಮತ್ತು ದಕ್ಷಿಣ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹಾಗಾದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂಬ ಮಾಹಿತಿ ಇಲ್ಲಿದೆ.

Bengaluru Power Cut: ಇಂದು ಮತ್ತು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!
Power Outage

Updated on: Sep 22, 2025 | 7:43 AM

ಬೆಂಗಳೂರು, ಸೆಪ್ಟೆಂಬರ್​ 22: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (bescom) ತುರ್ತು ನಿರ್ವಹಣಾ ಕಾಮಗಾರಿ ಘೋಷಿಸಿರುವುದರಿಂದ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Power Cut) ಉಂಟಾಗಲಿದೆ. ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ ಬೆಂಗಳೂರು ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಸೆಪ್ಟೆಂಬರ್ 22 ಮತ್ತು 23ರಂದು ಅನೇಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಇಂದು ಎಲ್ಲೆಲ್ಲಿ ವಿದ್ಯುತ್​ ಕಡಿತ

ನಾಮಧಾರಿ, ಹೆಗಡೆ ನಗರ, ಉಗ್ರಹಳ್ಳಿ, ಮಾಯಗಾನಹಳ್ಳಿ, ಎಂ.ಬಿ. ಲೇಔಟ್, ಬಿ.ಸಿ. ಲೇಔಟ್, ಕಾಂಚನ ಲೇಔಟ್, ಪಾದರಹಳ್ಳಿ, ಚನ್ನಸಂದ್ರ, ಮದನಪುರ, ಯಶವಂತಪುರ, ಫ್ರೇಜರ್ ಟೌನ್, ಹಲಸೂರು, ಮಲ್ಲೇಶ್ವರಂ, ಗಾಂಧಿನಗರ, ಅತ್ತಿಗುಪ್ಪೆ, ಚಾಮರಾಜಪೇಟೆ, ಲಿಂಗರಾಜಪುರ, ಕೆಂಪಾಪುರ, ವಿನಾಯಕ ನಗರ.

ಬೆಸ್ಕಾಂ ಟ್ವೀಟ್​

ಟ್ರಿನಿಟಿ, ಬೈಯಪ್ಪನಹಳ್ಳಿ, ಶಾಂತಿನಗರ, ಜಯಮಹಲ್, ಮಾರತ್ತಹಳ್ಳಿ, ಕೋಗಿಲು, ಬಿಡಿಎ ಲೇಔಟ್, ರಾಜನಗರ, ಬಾಗಲೂರು, ರಾಜನಗರ ಬಡಾವಣೆ, ಬಾಗಲೂರು ಲೇಔಟ್, ಅರಮನೆ ನಗರ, ದೊಡ್ಡಕಲಸಂದ್ರ, ಹನುಮಂತಪುರ, ಅಟ್ಟೂರು, ಜಗನಾಥಪುರ, ನಿವಾರ, ಲೆಬ್ಬೆಟ್, ಅಗ್ನಿನಗರ, ಬಿ.ವಿ.ಗುಡಿಪಾಲ, ಅಂಬೇಡ್ಕರ್ ನಗರ, ಬಿ.ಬಿ.ಪಾಳ್ಯ, ಹೊಸಹಳ್ಳಿ, ಗುಬ್ಬಿ ಗೇಟ್, ರಿಂಗ್ ರಸ್ತೆ, ಹಾರೋಹಳ್ಳಿ, ಹೊನ್ನೇಮನಹಳ್ಳಿ, ಹೆಬ್ಬಾಳ, ಕುಪ್ಪೂರು, ಡಿ.ಎಂ. ಪಾಳ್ಯ, ಪಿಎನ್ ಆರ್ ಪಾಳ್ಯ, ನರಸಾಪುರ, ಕೆ.ಜಿ. ಪಾಳ್ಯ, ಭಜಂತ್ರಿ ಪಾಳ್ಯದಲ್ಲಿ ಇಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್​​ ಕಡಿತವಾಗಲಿದೆ.

ನಾಳೆ ಎಲ್ಲೆಲ್ಲಿ ವಿದ್ಯುತ್​ ಕಡಿತ

ಇನ್ನು ಯಲ್ಲಾರ್ ಬಂಡೆ 66/11 ಕೆವಿ ಉಪಕೇಂದ್ರ (ಉತ್ತರ) ದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡ ಹಿನ್ನಲೆ ಮಂಗಳವಾರ ಅಂದರೆ ಸೆಪ್ಟೆಂಬರ್ 23ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 11ರಿಂದ ಸಂಜೆ 4 ಗಂಟೆ ವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ.

ಇದನ್ನೂ ಓದಿ: Bescom Power Cut: ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಇಂದಿನಿಂದ ಸೆ 30ರವರೆಗೆ ವಿದ್ಯುತ್ ವ್ಯತ್ಯಯ!

ಕಾವಲ್ ಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ಮೆಡಿಕಲ್ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆಎಚ್‌ಬಿ ಮುಖ್ಯರಸ್ತೆ, ವಿ. ನಾಗೇನಹಳ್ಳಿ, ಭುವನೇಶ್ವರಿ ನಗರ, ಕುಶಾಲ್‌ನಗರ, ಪೆರಿಯಾ‌ರ್ ನಗರ, ಮೋದಿ ಉದ್ಯಾನ, ಮೋದಿ ರಸ್ತೆ, ಮುನಿವೀರಪ್ಪ ಲೇಔಟ್, ದೊಡ್ಡಣ್ಣ ನಗರ, ಉಪ್ಪಿನ ಮಂಡಿ, ಸಕ್ಕರೆ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:41 am, Mon, 22 September 25