AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ವೀಕೆಂಡ್​​​ನಲ್ಲಿ ಬೆಂಗಳೂರಿಗರಿಗೆ ತಟ್ಟಲಿದೆ ಪವರ್ ಕಟ್ ಬಿಸಿ: ಈ ನಗರಗಳಲ್ಲಿ ವಿದ್ಯುತ್ ಕಡಿತ

Bengaluru Power Cut today: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನಲ್ಲಿ ಇಂದು ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಹಾಗಾದರೆ ಯಾವೆಲ್ಲಾ ನಗರಗಳಲ್ಲಿ ಮತ್ತು ಯಾವ ಸಮಯದಲ್ಲಿ ವಿದ್ಯುತ್​ ಕಡಿತವಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Power Cut: ವೀಕೆಂಡ್​​​ನಲ್ಲಿ ಬೆಂಗಳೂರಿಗರಿಗೆ ತಟ್ಟಲಿದೆ ಪವರ್ ಕಟ್ ಬಿಸಿ: ಈ ನಗರಗಳಲ್ಲಿ ವಿದ್ಯುತ್ ಕಡಿತ
Bengaluru Power Cut
ಗಂಗಾಧರ​ ಬ. ಸಾಬೋಜಿ
|

Updated on:Aug 24, 2025 | 8:18 AM

Share

ಬೆಂಗಳೂರು, ಆಗಸ್ಟ್​ 24: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಸಿಲಿಕಾನ್ ಸಿಟಿ ಜನರಿಗೆ ವೀಕೆಂಡ್​​​ನಲ್ಲಿ ವಿದ್ಯುತ್​ ವ್ಯತ್ಯಯದ ಬಿಸಿ ತಟ್ಟಲಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (Bescom) ತಿಳಿಸಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್​ ಕಡಿತಗೊಳಿಸಲಾಗುತ್ತಿದೆ.

ವಿದ್ಯುತ್ ಕಡಿತ ಏಕೆ?

ಅಧಿಕಾರಿಗಳ ಪ್ರಕಾರ, ಪ್ರಸರಣ ಜಾಲದ ತುರ್ತು ನಿರ್ವಹಣೆ ಮತ್ತು ನವೀಕರಣ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಇಂದು ವಿದ್ಯುತ್ ಕಡಿತ ಅನಿವಾರ್ಯವಾಗಿದೆ. ಇದು ಮುಂದಿನ ದಿನಗಳಲ್ಲಿ ವಿಶ್ವಾಸಾರ್ಹ ಮತ್ತು ನಿರಂತರ ವಿದ್ಯುತ್ ಸರಬರಾಜು ಒದಗಿಸಲು ಸಹಕಾರಿಯಾಗಲಿದೆ ಎಂದಿದ್ದಾರೆ.

ಎಲ್ಲೆಲ್ಲಿ ವಿದ್ಯುತ್ ಕಡಿತ

ಎಚ್​​ಎಂಟಿ ರಸ್ತೆ, ಆರ್​ ಎನ್​​ಎಸ್​​ ಅಪಾರ್ಟ್​​ ಮೆಂಟ್​, ಸಿಎಂಟಿಐ, ಬೋರಲಿಂಗಪ್ಪ ಗಾರ್ಡನ್​, ಪೀಣ್ಯ ಪೊಲೀಸ್​​ ಠಾಣೆ ರಸ್ತೆ, ಟೆಲಿಪೋನ್​​ ಎಕ್ಸ್​ ಚೇಂಜ್​, ರಿಲಯನ್ಸ್​​ ಕಮ್ಯುನಿಕೇಷನ್​, ಗಣಪತಿನಗರ ಮುಖ್ಯರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮಲಯಾಳಿ ಅತಿಥಿಗೃಹ ರಸ್ತೆ, ಕೆಎಚ್​​ ಬಿ ಲೇಔಟ್​, ಬ್ಯಾಂಕ್​​ ಕಲೊನಿ, ಯುಕೊ ಬ್ಯಾಂಕ್​​ ರಸ್ತೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜೆಕೆಡಬ್ಲೂ ಲೇಔಟ್​, ಇಎಸ್​​ಐಸಿ ಆಸ್ಪತ್ರೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್​ ಸಂಪರ್ಕ ಇರುವುದಿಲ್ಲ.

ಇದನ್ನೂ ಓದಿ: Power Cut: ಬೆಂಗಳೂರು ಸುತ್ತಮುತ್ತಲಿನ ಈ ಪ್ರದೇಶಗಳಲ್ಲಿ ಇಂದು 6 ಗಂಟೆ ವಿದ್ಯುತ್ ವ್ಯತ್ಯಯ

ನೆಲಗೆದರನಹಳ್ಳಿ, ಸಬ್​​ ಸ್ಟೇಷನ್​ ವ್ಯಾಪ್ತಿಯ ಕೆಂಪಯ್ಯ ಗಾರ್ಡನ್​​, ಶಿಗರಳಪಾಳ್ಯ ಮುಖ್ಯರಸ್ತೆ, ಮಾರುತಿ ಇಂಡಸ್ಟ್ರಿಯಲ್​ ಎಸ್ಟೇಟ್​, ಎಚ್​ ಎಂಟಿ ಲೇಜೌಟ್​​, ಶಿವಪುರ, ಗೃಹಲಕ್ಷಿ ಲೇಔಟ್​, ಶಿವಪುರ ಲೇಔಟ್​​, ವಿನಾಯನಗರ, 8ನೇ ಮೈಲಿ ರಸ್ತೆ, ಜಾಲಹಳ್ಳಿ ಕ್ರಾಸ್​, ಶೋಭಾ ಅಪಾರ್ಟ್​ ಮೆಂಟ್​, ಅಮರಾಮತಿ ಲೇಔಟ್​, ಕೆಎಪಿಎಲ್​, ಕರ್ನಾಟಕ ಆ್ಯಂಟಿಬಯೋಟಿಕ್ಸ್​​ ಪ್ರೈವೇಟ್​​ ಲಿಮಿಟೆಡ್​​, ರುಕ್ಮಿಣಿನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್​ ಸಂಪರ್ಕ ಇರುವುದಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:15 am, Sun, 24 August 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್