Bengaluru Power Cut: ಬೆಂಗಳೂರಿನ ಬನಶಂಕರಿ, ಜೆಪಿ ನಗರ, ಮಹಾಲಕ್ಷ್ಮೀ ಪುರಂನಲ್ಲಿ ಇಂದು ಪವರ್ ಕಟ್

BESCOM Power Cut: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಜೆ.ಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಬಾಣಸವಾಡಿ, ಮಹಾಲಕ್ಷ್ಮೀ ಪುರಂ, ಜೆ.ಪಿ ನಗರ, ಬಿಇಎಲ್​ ಮುಂತಾದೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

Bengaluru Power Cut: ಬೆಂಗಳೂರಿನ ಬನಶಂಕರಿ, ಜೆಪಿ ನಗರ, ಮಹಾಲಕ್ಷ್ಮೀ ಪುರಂನಲ್ಲಿ ಇಂದು ಪವರ್ ಕಟ್
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Jan 11, 2022 | 6:05 AM

ಬೆಂಗಳೂರು: ವಿದ್ಯುತ್ ಕಾಮಗಾರಿ ಮತ್ತು ಇತರೆ ಕೆಲಸಗಳ ಕಾರಣದಿಂದ ಬೆಸ್ಕಾಂ (BESCOM) ಇಂದು (ಮಂಗಳವಾರ) ಪವರ್ ಕಟ್ ಇರಲಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಜೆ.ಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಬಾಣಸವಾಡಿ, ಮಹಾಲಕ್ಷ್ಮೀ ಪುರಂ, ಜೆ.ಪಿ ನಗರ, ಬಿಇಎಲ್​ ಮುಂತಾದೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ಇಂದು (ಜನವರಿ 11) ಬೆಂಗಳೂರು ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ನಂಜಪ್ಪ ವೃತ್ತ, ಬಿಕಿಸಿಪುರ, ಇಸ್ರೋ ಲೇಔಟ್, ವಿಟ್ಲ ನಗರ, ಕುಮಾರಸ್ವಾಮಿ ಲೇಔಟ್, ಗೌಡನಪಾಳ್ಯ, ಸಿದ್ಧಾಪುರ, ಸೋಮೇಶ್ವರನಗರ, ಜೆ.ಪಿ. ನಗರ 1ನೇ ಹಂತ, ಶಾಕಾಂಬರಿ ನಗರ, ಸಾರಕ್ಕಿ ಮಾರುಕಟ್ಟೆ, ಲಕ್ಷ್ಮಿ ನಗರ, ಚುಂಚಘಟ್ಟ ಮುಖ್ಯರಸ್ತೆ, ರಾಜೀವ್ ಗಾಂಧಿ ರಸ್ತೆ, ರಾಜೀವ್ ನಗರ, ಜೆ.ಪಿ. ನಗರ 5ನೇ ಹಂತ, ವಿನಾಯಕ ನಗರ, ಭುವನೇಶ್ವರಿ ನಗರ, ಕಾವೇರಿ ನಗರ, ವಿವೇಕಾನಂದ ನಗರ, ಕತ್ರಿಗುಪ್ಪೆ ಮುಖ್ಯರಸ್ತೆ, ಬನಶಂಕರಿ 3ನೇ ಹಂತ, ಮುನೇಶ್ವರ ನಗರ, ಕದಿರೇನಹಳ್ಳಿ, ಉತ್ತರಹಳ್ಳಿ ಮುಖ್ಯರಸ್ತೆ, ಮಾರತಹಳ್ಳಿ, ಕಾವೇರಿ ಲೇಔಟ್, ಸಿ ಬಾಲಾಜಿಶ್ವರ ಲೇಔಟ್, ವಿನಾಯಕ ದೇವಸ್ಥಾನ ರಸ್ತೆ ಥಿಯೇಟರ್ ರಸ್ತೆ, ಐಟಿಪಿಎಲ್ ಮುಖ್ಯರಸ್ತೆ, ಹೊಂಗಸಂದ್ರ, ಬೇಗೂರು ಮುಖ್ಯರಸ್ತೆ, ಬಿಡಿಎ 2ನೇ ಹಂತ ಮತ್ತು ಜುನ್ನಸಂದ್ರ ಮುಖ್ಯರಸ್ತೆಯಲ್ಲಿ ಪವರ್ ಕಟ್ ಇರಲಿದೆ.

ಬೆಂಗಳೂರು ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ಕಡಿತವಾಗಲಿದೆ. ರಾಮಯ್ಯ ಕಾಂಪ್ಲೆಕ್ಸ್ ಸ್ವಾಮಿ ವಿವೇಕಾನಂದ ರಸ್ತೆ, ಕೆ.ಜಿ ಪುರ ಮುಖ್ಯ ರಸ್ತೆ, ಎನ್‌.ಸಿ ಕಾಲೋನಿ, ಪಿ.ಕೆ ಕಾಲೋನಿ, ಬಾಣಸವಾಡಿ ಮುಖ್ಯ ರಸ್ತೆ, ಎಚ್‌ಆರ್‌ಬಿಆರ್ ಲೇಔಟ್ 3ನೇ ಬ್ಲಾಕ್, ದೊಡ್ಡ ಬಾಣಸವಾಡಿ, ಆರ್‌.ಎಂ ನಗರ ಮುಖ್ಯ ರಸ್ತೆ, ಬಾಣಸವಾಡಿ, ವಾಜಿದ್ ಲೇಔಟ್, ನಾರಾಯಣಪುರ, ಕಾವೇರಿ ಲೇಔಟ್, ನಾಗವಾರ, ಎಂ. ರಾಮಯ್ಯ ಉತ್ತರ ನಗರ, ಕೆ. ನಾರಾಯಣಪುರ, ಭುವನೇಶ್ವರಿ ನಗರ, ದಾಸರಹಳ್ಳಿ ಕಾಲೋನಿ, ದಾಸರಹಳ್ಳಿ ಗ್ರಾಮ, ವರ್ತೂರು ಮುಖ್ಯ ರಸ್ತೆ, ಕೊಡಿಗೇಹಳ್ಳಿ ಮತ್ತು ಹೂಡಿಯಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರು ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪೀಡಿತ ಪ್ರದೇಶಗಳಲ್ಲಿ ಜೆ.ಪಿ ಪಾರ್ಕ್, ಎಚ್‌ಎಂಟಿ ಲೇಔಟ್, ನ್ಯೂ ಬಿಇಎಲ್ ರಸ್ತೆ, ಅಬ್ಬಿಗೆರೆ ರಸ್ತೆ, ಜಾಜುರಿಯಾ ಕಾಲೋನಿ, ಪೆರಿಯಾರ್ ನಗರ, ಡಿಜೆ ಹಳ್ಳಿ, ಕೆಎಚ್‌ಬಿ ಕ್ವಾರ್ಟರ್ಸ್, ಹೆಗ್ಡೆ ನಗರ, ಆರ್‌ಟಿ ನಗರ, ಭೂಪಸಂದ್ರ, ಶೇಟಿಹಳ್ಳಿ, ಮಲ್ಲಸಂದ್ರ, ಹೆಸರಘಟ್ಟ ಮುಖ್ಯರಸ್ತೆ, ಭುವನೇಶ್ವರಿ ನಗರ, ಟಿ. ದಾಸರಹಳ್ಳಿ, ಮಹಾಲಕ್ಷ್ಮಿ ಪುರಂ, ಲಕ್ಷ್ಮಿದೇವಿ ನಗರ ಸ್ಲಂ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ವಿದ್ಯುತ್ ಪೂರೈಕೆ ಇರುವುದಿಲ್ಲ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆವಲಹಳ್ಳಿ, ಬಿಎಚ್‌ಇಎಲ್ ಲೇಔಟ್, ದೊಡ್ಡಬೆಲೆ ರಸ್ತೆ, ಬಿಎಚ್‌ಇಎಲ್ ಲೇಔಟ್, ಕೃಷ್ಣ ಗಾರ್ಡನ್, ಆಂಧ್ರಹಳ್ಳಿ, ಮುನಿನಗರ, ಸುಂಕದಕಟ್ಟೆ, ಗಾಂಧಿ ನಗರ, ಬಿಡಿಎ ಏರಿಯಾ ಬ್ಲಾಕ್ -1, ಭುವನೇಶ್ವರ ನಗರ, ದೊಡ್ಡಬಸ್ತಿ ಮುಖ್ಯರಸ್ತೆ, ಕುವೆಂಪು ಮುಖ್ಯರಸ್ತೆ, ಜಿಕೆ ಗಲ್ಲಿ ರಸ್ತೆ ಮತ್ತು ಗಂಗಾನಗರದಲ್ಲಿಂದು ಕರೆಂಟ್ ಇರುವುದಿಲ್ಲ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಡಿಸೆಂಬರ್ 26, 27ಕ್ಕೆ ಕರೆಂಟ್ ಇರಲ್ಲ

ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ನಿಮ್ಮ ಏರಿಯಾದಲ್ಲೂ ಪವರ್ ಕಟ್ ಇದೆಯಾ? ಇಲ್ಲಿದೆ ಮಾಹಿತಿ

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ