AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ನಗರಗಳಲ್ಲಿ ಒಂದು ವಾರ ವಿದ್ಯುತ್ ವ್ಯತ್ಯಯ, ಇಲ್ಲಿದೆ ಮಾಹಿತಿ

ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ವಿದ್ಯುತ್‌ ಸ್ವೀಕರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್​ ತಂತಿಗಳನ್ನು ಬದಲಾವಣೆ ಕಾರ್ಯ ಹಿನ್ನಲೆ ಗುರುವಾದಿಂದ ಜುಲೈ 24 ರವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಯಾವೆಲ್ಲಾ ನಗರಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂಬ ಮಾಹಿತಿ ಇಲ್ಲಿದೆ.

Bengaluru Power Cut: ಬೆಂಗಳೂರಿನ ಈ ನಗರಗಳಲ್ಲಿ ಒಂದು ವಾರ ವಿದ್ಯುತ್ ವ್ಯತ್ಯಯ, ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Jul 17, 2025 | 9:33 AM

Share

ಬೆಂಗಳೂರು ಗ್ರಾಮಾಂತರ, ಜುಲೈ 17: ದೊಡ್ಡಬಳ್ಳಾಪುರ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ವಿದ್ಯುತ್​ ತಂತಿಗಳ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ (Power outage) ಉಂಟಾಗಲಿದೆ. ಈ ಬಗ್ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮಾಹಿತಿ ನೀಡಿದ್ದು, ಇಂದಿನಿಂದ (ಜುಲೈ 17) ಜುಲೈ 24 ರವರೆಗೆ ಅಂದರೆ ಒಂದು ವಾರಗಳ ಕಾಲ ನಗರದ ವಿವಿಧೆಡೆ ವಿದ್ಯುತ್‌​ ವ್ಯತ್ಯಯವಾಗಲಿದೆ. ಹಾಗಾದರೆ ಯಾವೆಲ್ಲಾ ನಗರದಲ್ಲಿ ವಿದ್ಯುತ್‌​ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (ಕೆಪಿಟಿಸಿಎಲ್) 220 ಕೆವಿ ದೊಡ್ಡಬಳ್ಳಾಪುರ ವಿದ್ಯುತ್ ಕೇಂದ್ರಕ್ಕೆ ಸಂಪರ್ಕಗೊಂಡಿರುವ 66 ಕೆವಿ ದೊಡ್ಡಬಳ್ಳಾಪುರ-ದೇವನಹಳ್ಳಿ ಪ್ರಸರಣ ಮಾರ್ಗದಲ್ಲಿ ವಿದ್ಯುತ್​ ತಂತಿಗಳನ್ನು ಬದಲಾಯಿಸಲಿದೆ. ಈ ನಿರ್ವಹಣಾ ಕಾರ್ಯವು ಈ ಪ್ರದೇಶದ 66/11 ಕೆವಿ ಸಬ್‌ಸ್ಟೇಷನ್‌ಗಳಿಗೆ ವಿದ್ಯುತ್ ಸರಬರಾಜಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಬೆಸ್ಕಾಂ ಅಧಿಕೃತ ಸೂಚನೆ ನೀಡಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರು, ಕೊಡಗು, ಹಾಸನದಲ್ಲಿ ಭಾರಿ ಮಳೆ ಸಾಧ್ಯತೆ

ಇಂದಿನಿಂದ ಜುಲೈ 24 ರವರೆಗೆ ಅಂದರೆ ಒಂದು ವಾರಗಳ ಕಾಲ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆ ರವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ನಿಟ್ಟಿನಲ್ಲಿ ತಮ್ಮ ದಿನದ ಯೋಜನೆಗಳನ್ನು ಮುಂಚಿತವಾಗಿ ಯೋಜಿಸುವಂತೆ ಬೆಸ್ಕಾಂ ಸಾರ್ವಜನಿಕರಲ್ಲಿ ಕೋರಿದೆ.

ಎಲ್ಲೆಲ್ಲಿ ವಿದ್ಯುತ್‌​ ವ್ಯತ್ಯಯ

ದೇವನಹಳ್ಳಿ ಪಟ್ಟಣ, ವಸತಿ ಸಮುಚ್ಚಯಗಳು, ಗೋಕರೆ, ಯರ್ತಿಗಾನಹಳ್ಳಿ ಚಿಕ್ಕಸಣ್ಣೆ ಅವತಿ, ಭುವನಹಳ್ಳಿ, ಬಿದಲೂರು, ಬೊಮವಾರ, ವಿಶ್ವನಾಥಪುರ, ಯಲಿಯೂರು, ಚಿಮಾಚನಹಳ್ಳಿ, ಕನ್ನಮಂಗಳ, ಸಣ್ಣಅಮಾನಿಕೆರೆ, ಹೀರಾನಂದಾನಿ, ಕೋಯಿರ, ತೈಲಗೆರೆ, ಗೊಬ್ಬರಗುಂಟೆ, ಕೋರಮಂಗಲ ವ್ಯಾಪ್ತಿಯ ಸುತ್ತಮುತ್ತಲ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕವಿರುವುದಿಲ್ಲ.

ಇದನ್ನೂ ಓದಿ: ಬೇಕರಿ, ಕಾಂಡಿಮೆಂಡ್ಸ್ ಬಂದ್ ಅಷ್ಟೇ ಅಲ್ಲ: ಈ ಮೂರು ದಿನ ಹಾಲು, ಹಾಲಿನ ಉತ್ಪನ್ನವೂ ಸಿಗಲ್ಲ!

ಕುಂದಾಣ ವಿದ್ಯುತ್ ಉಪಕೇಂದ್ರದ ಬೆಂಗ್ರಾ ಜಿಲ್ಲಾಡಳಿತ ಕಚೇರಿ, ಕುಂದಾಣ ಗ್ರಾಮ ಪಂಚಾಯತ, ಕೊಯಿರ ಗ್ರಾಮ ಪಂಚಾಯತ, ಆಲೂರು-ದುದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಸುತ್ತಮುತ್ತಲ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕವಿರುವುದಿಲ್ಲ, ಆದ್ದರಿಂದ ವಿದ್ಯುತ್ ಗ್ರಾಹಕರು ಹಾಗೂ ರೈತರು ಸಹಕರಿಸುವಂತೆ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:31 am, Thu, 17 July 25

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ