AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ನಗರಗಳಲ್ಲಿ ಒಂದು ವಾರ ವಿದ್ಯುತ್ ವ್ಯತ್ಯಯ, ಇಲ್ಲಿದೆ ಮಾಹಿತಿ

ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ವಿದ್ಯುತ್‌ ಸ್ವೀಕರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್​ ತಂತಿಗಳನ್ನು ಬದಲಾವಣೆ ಕಾರ್ಯ ಹಿನ್ನಲೆ ಗುರುವಾದಿಂದ ಜುಲೈ 24 ರವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಯಾವೆಲ್ಲಾ ನಗರಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂಬ ಮಾಹಿತಿ ಇಲ್ಲಿದೆ.

Bengaluru Power Cut: ಬೆಂಗಳೂರಿನ ಈ ನಗರಗಳಲ್ಲಿ ಒಂದು ವಾರ ವಿದ್ಯುತ್ ವ್ಯತ್ಯಯ, ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Jul 17, 2025 | 9:33 AM

Share

ಬೆಂಗಳೂರು ಗ್ರಾಮಾಂತರ, ಜುಲೈ 17: ದೊಡ್ಡಬಳ್ಳಾಪುರ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ವಿದ್ಯುತ್​ ತಂತಿಗಳ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ (Power outage) ಉಂಟಾಗಲಿದೆ. ಈ ಬಗ್ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮಾಹಿತಿ ನೀಡಿದ್ದು, ಇಂದಿನಿಂದ (ಜುಲೈ 17) ಜುಲೈ 24 ರವರೆಗೆ ಅಂದರೆ ಒಂದು ವಾರಗಳ ಕಾಲ ನಗರದ ವಿವಿಧೆಡೆ ವಿದ್ಯುತ್‌​ ವ್ಯತ್ಯಯವಾಗಲಿದೆ. ಹಾಗಾದರೆ ಯಾವೆಲ್ಲಾ ನಗರದಲ್ಲಿ ವಿದ್ಯುತ್‌​ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (ಕೆಪಿಟಿಸಿಎಲ್) 220 ಕೆವಿ ದೊಡ್ಡಬಳ್ಳಾಪುರ ವಿದ್ಯುತ್ ಕೇಂದ್ರಕ್ಕೆ ಸಂಪರ್ಕಗೊಂಡಿರುವ 66 ಕೆವಿ ದೊಡ್ಡಬಳ್ಳಾಪುರ-ದೇವನಹಳ್ಳಿ ಪ್ರಸರಣ ಮಾರ್ಗದಲ್ಲಿ ವಿದ್ಯುತ್​ ತಂತಿಗಳನ್ನು ಬದಲಾಯಿಸಲಿದೆ. ಈ ನಿರ್ವಹಣಾ ಕಾರ್ಯವು ಈ ಪ್ರದೇಶದ 66/11 ಕೆವಿ ಸಬ್‌ಸ್ಟೇಷನ್‌ಗಳಿಗೆ ವಿದ್ಯುತ್ ಸರಬರಾಜಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಬೆಸ್ಕಾಂ ಅಧಿಕೃತ ಸೂಚನೆ ನೀಡಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರು, ಕೊಡಗು, ಹಾಸನದಲ್ಲಿ ಭಾರಿ ಮಳೆ ಸಾಧ್ಯತೆ

ಇಂದಿನಿಂದ ಜುಲೈ 24 ರವರೆಗೆ ಅಂದರೆ ಒಂದು ವಾರಗಳ ಕಾಲ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆ ರವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ನಿಟ್ಟಿನಲ್ಲಿ ತಮ್ಮ ದಿನದ ಯೋಜನೆಗಳನ್ನು ಮುಂಚಿತವಾಗಿ ಯೋಜಿಸುವಂತೆ ಬೆಸ್ಕಾಂ ಸಾರ್ವಜನಿಕರಲ್ಲಿ ಕೋರಿದೆ.

ಎಲ್ಲೆಲ್ಲಿ ವಿದ್ಯುತ್‌​ ವ್ಯತ್ಯಯ

ದೇವನಹಳ್ಳಿ ಪಟ್ಟಣ, ವಸತಿ ಸಮುಚ್ಚಯಗಳು, ಗೋಕರೆ, ಯರ್ತಿಗಾನಹಳ್ಳಿ ಚಿಕ್ಕಸಣ್ಣೆ ಅವತಿ, ಭುವನಹಳ್ಳಿ, ಬಿದಲೂರು, ಬೊಮವಾರ, ವಿಶ್ವನಾಥಪುರ, ಯಲಿಯೂರು, ಚಿಮಾಚನಹಳ್ಳಿ, ಕನ್ನಮಂಗಳ, ಸಣ್ಣಅಮಾನಿಕೆರೆ, ಹೀರಾನಂದಾನಿ, ಕೋಯಿರ, ತೈಲಗೆರೆ, ಗೊಬ್ಬರಗುಂಟೆ, ಕೋರಮಂಗಲ ವ್ಯಾಪ್ತಿಯ ಸುತ್ತಮುತ್ತಲ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕವಿರುವುದಿಲ್ಲ.

ಇದನ್ನೂ ಓದಿ: ಬೇಕರಿ, ಕಾಂಡಿಮೆಂಡ್ಸ್ ಬಂದ್ ಅಷ್ಟೇ ಅಲ್ಲ: ಈ ಮೂರು ದಿನ ಹಾಲು, ಹಾಲಿನ ಉತ್ಪನ್ನವೂ ಸಿಗಲ್ಲ!

ಕುಂದಾಣ ವಿದ್ಯುತ್ ಉಪಕೇಂದ್ರದ ಬೆಂಗ್ರಾ ಜಿಲ್ಲಾಡಳಿತ ಕಚೇರಿ, ಕುಂದಾಣ ಗ್ರಾಮ ಪಂಚಾಯತ, ಕೊಯಿರ ಗ್ರಾಮ ಪಂಚಾಯತ, ಆಲೂರು-ದುದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಸುತ್ತಮುತ್ತಲ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕವಿರುವುದಿಲ್ಲ, ಆದ್ದರಿಂದ ವಿದ್ಯುತ್ ಗ್ರಾಹಕರು ಹಾಗೂ ರೈತರು ಸಹಕರಿಸುವಂತೆ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:31 am, Thu, 17 July 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ