AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು

ಬೆಂಗಳೂರಿನ ದಾಸರಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಬಿಎಂಟಿಸಿ ಅಧಿಕಾರಿ ಜಗದೀಪ್, ಅಕ್ರಮ ಸಂಬಂಧದಿಂದ ಗರ್ಭಿಣಿ ಪತ್ನಿ ಶ್ವೇತಾರನ್ನು ಮನೆಯಿಂದ ಹೊರಹಾಕಿದ್ದಾರೆ. ಆರು ತಿಂಗಳ ಗರ್ಭಿಣಿಗೆ 'ಮಗು ತೆಗೆಸಿಬಿಡು' ಎಂದು ಕಿರುಕುಳ ನೀಡಿ, ದೈಹಿಕ ಹಲ್ಲೆ ನಡೆಸಿದ್ದಾರೆ. ಮನೆ ಕಳೆದುಕೊಂಡ ಶ್ವೇತಾ, ನ್ಯಾಯಕ್ಕಾಗಿ ಬಾಗಲಗುಂಟೆ ಪೊಲೀಸರನ್ನು ಆಶ್ರಯಿಸಿದ್ದಾರೆ. ಪತಿಯ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು
ಅಕ್ರಮ ಸಂಬಂಧ ಬೆಂಗಳೂರು
ಮಂಜುನಾಥ ಕೆಬಿ
| Edited By: |

Updated on:May 03, 2026 | 1:10 PM

Share

ಬೆಂಗಳೂರು, ಮೇ.3: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗರ್ಭಿಣಿ ಹೆಂಡತಿಯನ್ನೇ ಮನೆಯಿಂದ ಆಚೆ ಹಾಕಿರುವ ಅಮಾನವೀಯ ಘಟನೆ ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್‌ಚಾರ್ಜ್ ಆಗಿರುವ ಜಗದೀಪ್ (42) ತನ್ನ ಪತ್ನಿ ಶ್ವೇತಾ (32)ಗೆ ದ್ರೋಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶ್ವೇತಾ ಮತ್ತು ಜಗದೀಪ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರದ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಇಬ್ಬರೂ ವಾಸವಿದ್ದರು.

ಪತಿ ಜಗದೀಪ್‌ನ ವರ್ತನೆಯಲ್ಲೂ ತುಂಬಾ ಬದಲಾವಣೆಗಳು ಆಗಿತ್ತು. ಇದರಿಂದ ಅನುಮಾನಗೊಂಡು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ ಆತನಿಗೆ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿರುವುದು ಪತ್ನಿ ಶ್ವೇತಾಗೆ ಗೊತ್ತಾಗಿದೆ. ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದಾಗ ಜಗದೀಪ್ ಪತ್ನಿಯ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ, ಪ್ರಸ್ತುತ ಆರು ತಿಂಗಳ ಗರ್ಭಿಣಿಯಾಗಿರುವ ಶ್ವೇತಾಗೆ “ಮಗು ತೆಗೆಸಿಬಿಡು, ನೀನು ನನಗೆ ಬೇಡ” ಎಂದು ಕಿರುಕುಳ ನೀಡಿದ್ದಾನೆ.

ಇದನ್ನೂ ಓದಿ: ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್

ಕಳೆದ ಆರು ತಿಂಗಳ ಹಿಂದೆ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿರುವ ಜಗದೀಪ್, ಈಗ ಆಕೆಗೆ ಯಾವುದೇ ಆಸರೆ ಇಲ್ಲದಂತೆ ಮಾಡಿದ್ದಾನೆ. ನ್ಯಾಯಕ್ಕಾಗಿ ಆಗ್ರಹಿಸಿ ನೊಂದ ಗರ್ಭಿಣಿ ಶ್ವೇತಾ ಬಾಗಲಗುಂಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನ್ನ ಗಂಡನ ವಿರುದ್ಧ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ.

ವರದಿ: ಮಂಜುನಾಥ್ ಟಿವಿ9 ಕನ್ನಡ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Sun, 3 May 26

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ