Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Press Club: ಜೀವಮಾನ ಸಾಧನೆಗಾಗಿ ಟಿವಿ9 ಹಿರಿಯ ವರದಿಗಾರ ಕಿರಣ್​ಗೆ ಪ್ರೆಸ್​​ ಕ್ಲಬ್ ಪ್ರಶಸ್ತಿ ಪ್ರದಾನ

ಸಿಎಂ ಸಿದ್ದರಾಮಯ್ಯನವರು ಮಾಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಪರ್ತಕರ್ತರಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಟಿವಿ9ನ ಕ್ರೈಂ ವಿಭಾಗದ ಹಿರಿಯ ವರದಿಗಾರ ಹೆಚ್​​.ವಿ.ಕಿರಣ್ ಅವರು ಸಿಎಂ ಸಿದ್ದರಾಮಯ್ಯರವರ ಕೈಯಿಂದ ಜೀವಮಾನ ಸಾಧನೆ ಪ್ರಶಸ್ತಿ ಪಡೆದರು.

Bengaluru Press Club: ಜೀವಮಾನ ಸಾಧನೆಗಾಗಿ ಟಿವಿ9 ಹಿರಿಯ ವರದಿಗಾರ ಕಿರಣ್​ಗೆ ಪ್ರೆಸ್​​ ಕ್ಲಬ್ ಪ್ರಶಸ್ತಿ ಪ್ರದಾನ
ಪ್ರೆಸ್​ಕ್ಲಬ್
Follow us
ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು

Updated on:Dec 31, 2023 | 1:59 PM

ಬೆಂಗಳೂರು, ಡಿ.31: ಬೆಂಗಳೂರಿನ ಪ್ರೆಸ್​ಕ್ಲಬ್​​​ (Bengaluru Press Club) ವತಿಯಿಂದ ಹಮ್ಮಿಕೊಳ್ಳಲಾಗಿರುವ ಪ್ರೆಸ್‌ ಕ್ಲಬ್ ಆಫ್ ಬೆಂಗಳೂರು 2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ (Bengaluru Press Club Award)ವಿತರಣ ಕಾರ್ಯಕ್ರಮ ಬೆಂಗಳೂರು ಪ್ರೆಸ್ ಕ್ಲಬ್​ನಲ್ಲಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯನವರು ಮಾಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಪರ್ತಕರ್ತರಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಟಿವಿ9ನ ಕ್ರೈಂ ವಿಭಾಗದ ಹಿರಿಯ ವರದಿಗಾರ ಹೆಚ್​​.ವಿ.ಕಿರಣ್ (Kiran H.V)​ ಅವರು ಸಿಎಂ ಸಿದ್ದರಾಮಯ್ಯರವರ (Siddaramaiah) ಕೈಯಿಂದ ಜೀವಮಾನ ಸಾಧನೆ ಪ್ರಶಸ್ತಿ ಪಡೆದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಶ್ಯಾಮನೂರು ಶಿವಶಂಕರಪ್ಪ, ಸಂತೋಷ್​ ಲಾಡ್​​, ಕೆ.ಗೋವಿಂದ ರಾಜು ಹಾಗೂ 29 ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಟಿವಿ9 ಹಿರಿಯ ವರದಿಗಾರ ಕಿರಣ್​.H​​.V.ಗೆ ಜೀವಮಾನ ಸಾಧನೆಗಾಗಿ ಪ್ರೆಸ್​​ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಿರಣ್ ಅವರು ಸೇರಿ ಒಟ್ಟು 29 ಪತ್ರಕರ್ತರ ಜೀವಮಾನ ಸಾಧನೆಗಾಗಿ ಪ್ರೆಸ್​​ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​​​​ಗೆ ವರ್ಷದ ವ್ಯಕ್ತಿ, ಶಾಸಕ ಶ್ಯಾಮನೂರು ಶಿವಶಂಕರಪ್ಪಗೆ ಪ್ರೆಸ್‌ ಕ್ಲಬ್ ವಿಶೇಷ ಪ್ರಶಸ್ತಿ, ಸಂತೋಷ್​ ಲಾಡ್​​, ಕೆ.ಗೋವಿಂದ ರಾಜುಗೆ ಪ್ರೆಸ್​​ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಸಿದ್ದರಾಮಯ್ಯನವರು ಸನ್ಮಾನಿಸಿದರು.

ಇದನ್ನೂ ಓದಿ: ಟಿವಿ9ನ ಕಿರಣ್​ ಸೇರಿದಂತೆ 29 ಮಂದಿಗೆ ಬೆಂಗಳೂರು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ, ಡಿಕೆಶಿ ʼವರ್ಷದ ವ್ಯಕ್ತಿʼ

ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ ಪಡೆದ 29 ಪತ್ರಕರ್ತರು

ಕಿರಣ್ ಎಚ್.ವಿ (ಟಿವಿ9), ಸದಾಶಿವ ಶೆಣೈ. ಕೆ, ಆರ್. ಶಂಕರ್, ಡಾ. ಕೂಡ್ಲಿ ಗುರುರಾಜ್, ಕೆ.ಕೆ ಮೂರ್ತಿ (ಕಂ.ಕ ಮೂರ್ತಿ), ನಾಗರಾಜ. ಎಂ, ರೂಪಾ ಆರ್. ರಾವ್, ಸತೀಶ್‌ಕುಮಾರ್ ಬಿ.ಎಸ್, ರಾಕೇಶ್ ಪ್ರಕಾಶ್ , ರಮೇಶ್ ಬಿ.ಎನ್ (ಅಭಿಮನ್ಯು), ಚನ್ನಕೃಷ್ಣ ಪಿ.ಕೆ, ವಿಜಯ್‌ಕುಮಾರ್ ಮಲಗಿಹಾಳ್, ಮನೋಜ್‌ಕುಮಾರ್, ಮುತ್ತು. ಪಿ, ಶ್ರೀಕಂಠ ಶರ್ಮ. ಆರ್, ಸಿದ್ದೇಶ್‌ಕುಮಾರ್ ಹೆಚ್.ಪಿ, ಅಫ್ಶಾನ್ ಯಾಸ್ಮಿನ್, ಚಂದ್ರಶೇಖರ್. ಎಂ, ಭಾಸ್ಕರ್ ಕೆ.ಎಸ್, ಸುಭಾಷ್ ಹೂಗಾರ್, ಪ್ರಸನ್ನಕುಮಾರ್ ಲೂಯಿಸ್, ಶಂಕರೇಗೌಡ ಹೆಚ್.ಡಿ, ಜನಾರ್ಧನಾಚಾರಿ ಕೆ.ಎಸ್, ಲಿಂಗರಾಜು ಡಿ. ನೊಣವಿನಕೆರೆ, ಮೋಹನ್‌ರಾವ್ ಸಾವಂತ್. ಜಿ, ಅನಂತರಾಮು ಸಂಕ್ಲಾಪುರ್. ಎಲ್, ಕೌಶಿಕ್. ಆರ್, ಲಕ್ಷ್ಮಿ ಸಾಗರ ಸ್ವಾಮಿಗೌಡ, ಚಿದಾನಂದ ಪಟೇಲ್.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:40 pm, Sun, 31 December 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​