AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿಗೆ ಮೈಸೂರು, ಧರ್ಮಸ್ಥಳ, ಕುಕ್ಕೆಗೆ ಹೋಗುವವರಿಗೆ ಬಿಗ್​​ ಶಾಕ್​​​​​ ನೀಡಿದ ಖಾಸಗಿ ಬಸ್​​​: ಟಿಕೆಟ್​​​​ ದರ ಏರಿಕೆ ಪಟ್ಟಿ ಇಲ್ಲಿದೆ

ಯುಗಾದಿ ಮತ್ತು ರಂಜಾನ್ ಹಬ್ಬಗಳ ನಿಮಿತ್ತ ಬೆಂಗಳೂರಿನಿಂದ ತವರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ದರವನ್ನು 2-3 ಪಟ್ಟು ಹೆಚ್ಚಿಸಿದ್ದಾರೆ. ಬೆಂಗಳೂರು-ಮಂಗಳೂರು, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಹಲವು ಮಾರ್ಗಗಳಲ್ಲಿ ದರ ಗಣನೀಯವಾಗಿ ಏರಿದೆ. ಡೀಸೆಲ್ ದರ ಏರಿಕೆ ಕಾರಣ ಎಂದು ಮಾಲೀಕರು ಹೇಳಿದ್ದು, ಪ್ರಯಾಣಿಕರ ಅನುಕೂಲಕ್ಕೆ KSRTC 2,000 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿ ನೆರವಾಗಿದೆ.

ಯುಗಾದಿಗೆ ಮೈಸೂರು, ಧರ್ಮಸ್ಥಳ, ಕುಕ್ಕೆಗೆ ಹೋಗುವವರಿಗೆ ಬಿಗ್​​ ಶಾಕ್​​​​​ ನೀಡಿದ ಖಾಸಗಿ ಬಸ್​​​: ಟಿಕೆಟ್​​​​ ದರ ಏರಿಕೆ ಪಟ್ಟಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Mar 17, 2026 | 12:41 PM

Share

ಬೆಂಗಳೂರು, ಮಾ.17: ಸತತ ನಾಲ್ಕು ದಿನಗಳ ರಜೆ ಮತ್ತು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮೂರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ (Bengaluru private bus ) ಮಾಲೀಕರು ದರ ಏರಿಕೆಯ ಬಿಸಿ ಮುಟ್ಟಿಸಿದ್ದಾರೆ. ಯುಗಾದಿ ಮತ್ತು ರಂಜಾನ್ ಹಬ್ಬವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಿವೆ.

ಖಾಸಗಿ ಬಸ್ ದರ ಏರಿಕೆಯ ಕಟು ಸತ್ಯ (ನಾರ್ಮಲ್ vs ಹಬ್ಬದ ದರ):

ಬೆಂಗಳೂರು-ಮಂಗಳೂರು: 600 ರೂ. ಇದ್ದ ದರ ಈಗ 2,999 ರೂ. ವರೆಗೆ ಏರಿಕೆಯಾಗಿದೆ.

ಬೆಂಗಳೂರು-ಧಾರವಾಡ/ಹುಬ್ಬಳ್ಳಿ: 400-1,300 ರೂ. ಇದ್ದ ದರ ಭರ್ಜರಿ 4,500 ರೂ. ತಲುಪಿದೆ.

ಬೆಂಗಳೂರು-ಶಿವಮೊಗ್ಗ: 400 ರೂ. ಇದ್ದ ಸಾಮಾನ್ಯ ದರ ಹಬ್ಬದ ವೇಳೆ 2,799 ರೂ.ಕ್ಕೆ ಜಿಗಿದಿದೆ.

ಬೆಂಗಳೂರು-ಧರ್ಮಸ್ಥಳ: 500 ರೂ. ರಿಂದ 3,600 ರೂ.ಕ್ಕೆ ಏರಿಕೆ ಕಂಡುಬಂದಿದೆ.

ಬೆಂಗಳೂರು-ಮೈಸೂರು: ಕೇವಲ 350 ರೂ. ಇದ್ದ ದರ ಈಗ 2,500 ರೂ. ವರೆಗೆ ವಸೂಲಿ ಮಾಡಲಾಗುತ್ತಿದೆ.

ಆದರೆ ಇದರ ನಡುವೆ ಖಾಸಗಿ ಬಸ್‌ಗಳ ದರ ಏರಿಕೆಯಿಂದ ಕಂಗಾಲಾದ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೆರವಾಗಲಿದೆ.ಮಾರ್ಚ್ 18, 19 ಮತ್ತು 20 ರಂದು ಬೆಂಗಳೂರಿನ ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್), ಮೈಸೂರು ರಸ್ತೆ ಸ್ಯಾಟಲೈಟ್ ಮತ್ತು ಶಾಂತಿನಗರ ನಿಲ್ದಾಣಗಳಿಂದ ರಾಜ್ಯದ ವಿವಿಧ ಮೂಲೆಗಳಿಗೆ 2,000 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ: ರೊಚ್ಚಿಗೆದ್ದ ಕನ್ನಡಪರ ಹೋರಾಟಗಾರರು

“ಡೀಸೆಲ್ ದರ ಏರಿಕೆ ಮತ್ತು ಸರ್ಕಾರದ ತೆರಿಗೆ ಹೊರೆಯಿಂದಾಗಿ ಅನಿವಾರ್ಯವಾಗಿ ದರ ಹೆಚ್ಚಿಸಬೇಕಾಗಿದೆ. ಯುದ್ಧದಂತಹ ಪರಿಸ್ಥಿತಿಯಿಂದ ಡೀಸೆಲ್ ಬೆಲೆಯಲ್ಲಿ ಏರಿಳಿತವಾಗುತ್ತಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ದರ ಏರಿಕೆ ಅಷ್ಟೊಂದು ಹೆಚ್ಚಿಲ್ಲ” ಎಂದು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ. ಇನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆಯ ( ಸ್ಯಾಟ್ ಲೈಟ್ )ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಿಂದ ಸಂಚಾರ ಮಾಡಲಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ