AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಲ್ ಮಾರ್ಕ್ಸ್ ಕೊಡ್ತೇನೆ, ಸಹಕರಿಸು: ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ ಬೆಂಗಳೂರು ಖಾಸಗಿ ಕಾಲೇಜು ಎಚ್​ಒಡಿ

‘ನಿನಗೆ ಹಾಜರಾತಿ ಕಡಿಮೆ ಇದೆ. ನನ್ನೊಂದಿಗೆ ಸಹಕರಿಸು, ನಾನು ಹೇಳಿದಂತೆ ಮಾಡು. ಫುಲ್ ಮಾರ್ಕ್ಸ್ ಕೊಡುತ್ತೇನೆ’. ಬೆಂಗಳೂರಿನ ಖಾಸಗಿ ಕಾಲೇಜಿನ ಎಚ್​ಒಡಿಯೊಬ್ಬರು ವಿದ್ಯಾರ್ಥಿನಿಯನ್ನು ಊಟಕ್ಕೆಂದು ಮನೆಗೆ ಕರೆಸಿಕೊಂಡು, ಆಡಿದ ಮಾತುಗಳಿವು. ಸದ್ಯ, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ಎಚ್​ಒಡಿ ವಿರುದ್ಧ ಪ್ರಕರಣ ದಾಖಲಾಗಿದೆ.

ಫುಲ್ ಮಾರ್ಕ್ಸ್ ಕೊಡ್ತೇನೆ, ಸಹಕರಿಸು: ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ ಬೆಂಗಳೂರು ಖಾಸಗಿ ಕಾಲೇಜು ಎಚ್​ಒಡಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Oct 08, 2025 | 8:49 AM

Share

ಬೆಂಗಳೂರು, ಅಕ್ಟೋಬರ್ 8: ಬೆಂಗಳೂರಿನ (Bengaluru) ಖಾಸಗಿ ಕಾಲೇಜಿನ ವಿಭಾಗದ ಮುಖ್ಯಸ್ಥರೊಬ್ಬರು (ಎಚ್‌ಒಡಿ) ವಿದ್ಯಾರ್ಥಿನಿಯನ್ನು ಊಟದ ನೆಪದಲ್ಲಿ ಮನೆಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ತೆ ತಿಲಕ್​ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ, ಆರೋಪಿ ಸಂಜೀವ್ ಕುಮಾರ್ ಮಂಡಲ್ ವಿರುದ್ಧ ತಿಲಕ್​ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಗೆ ಕಡಿಮೆ ಹಾಜರಾತಿ ಇದ್ದುದನ್ನೇ ಮುಂದಿಟ್ಟುಕೊಂಡು, ಪೂರ್ಣ ಅಂಕ ನೀಡುವ ಆಮಿಷವೊಡ್ಡಿ ಉಪನ್ಯಾಸಕರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮನೆಗೆ ಊಟಕ್ಕೆ ಕರೆದ ಎಚ್​​ಒಡಿ ಆಮೇಲೆ ಮಾಡಿದ್ದೇ ಬೇರೆ!

ಆರೋಪಿ ಸಂಜೀವ್ ಕುಮಾರ್ ಮಂಡಲ್ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್ (ಬಿಸಿಎ) ವಿದ್ಯಾರ್ಥಿನಿಯನ್ನು ಅಕ್ಟೋಬರ್ 2 ರಂದು ತನ್ನ ಮನೆಗೆ ಕರೆಸಿಕೊಂಡಿದ್ದಾರೆ. ತನ್ನ ಕುಟುಂಬದೊಂದಿಗೆ ಜತೆಯಾಗಿ ಊಟ ಮಾಡೋಣ ಎಂದು ವಿದ್ಯಾರ್ಥಿನಿಯನ್ನು ಕರೆಸಿಕೊಂಡಿದ್ದಾರೆ. ಆದರೆ, ವಿದ್ಯಾರ್ಥಿನಿ ಅವರ ಮನೆಗೆ ತೆರಳಿದಾಗ ಮೊಂಡಲ್ ಒಬ್ಬಂಟಿಯಾಗಿ ಮನೆಯಲ್ಲಿದ್ದರು. ಆ ಬಳಿಕ ಅವರು ವಿದ್ಯಾರ್ಥಿನಿಗೆ ಉಟ ನೀಡಿದ್ದಾರೆ. ಆದರೆ, ಮೊಂಡಲ್ ಒಬ್ಬರೇ ಇದ್ದುದರಿಂದ ಇರಿಸುಮುರಿಸಿಗೆ ಒಳಗಾದ ವಿದ್ಯಾರ್ಥಿನಿ ತಾನು ಹೊರಡುವುದಾಗಿ ಹೇಳಿದ್ದಾಳೆ.

ಫುಲ್ ಮಾರ್ಕ್ಸ್ ಕೊಡುತ್ತೇನೆ ಎಂದು ಅನುಚಿತ ವರ್ತನೆ

ವಿದ್ಯಾರ್ಥಿನಿ ಹೊರಡಲು ಅನುವಾಗುತ್ತಿದ್ದಂತೆಯೇ ಎಚ್​​ಒಡಿ, ನಿನಗೆ ಹಾಜರಾತಿ ಕಡಿಮೆ ಇದೆ. ನನ್ನೊಂದಿಗೆ ಸಹಕರಿಸು, ಪೂರ್ಣ ಅಂಕಗಳನ್ನು ಕೊಡಿಸಲು ಸಹಾಯ ಮಾಡುತ್ತೇನೆ ಎಂದಿದ್ದಾರೆ. ಅಷ್ಟರಲ್ಲಿ ಸ್ನೇಹಿತೆಯಿಂದ ಫೋನ್ ಕರೆ ಬಂದಿದ್ದು, ತುರ್ತಾಗಿ ಹೋಗಬೇಕಿದೆ ಎಂದು ಎಚ್​ಒಡಿ ಮನೆಯಿಂದ ಹೇಗೋ ತಪ್ಪಿಸಿಕೊಂಡು ಬಂದೆ ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆನ್​ಲೈನ್ ಹೂಡಿಕೆ ಹೆಸರಿನಲ್ಲಿ ಭಾರಿ ವಂಚನೆ, ಬೃಹತ್ ಜಾಲ ಭೇದಿಸಿದ ಕೆಂಗೇರಿ ಪೊಲೀಸರು, 8 ಮಂದಿಯ ಬಂಧನ

ಎಚ್​ಒಡಿ ಮನೆಯಿಂದ ತನ್ನ ಮನೆಗೆ ತೆರಳಿದ ವಿದ್ಯಾರ್ಥಿನಿ ಪೋಷಕರಿಗೆ ಘಟನೆಯ ಬಗ್ಗೆ ವಿವರಿಸಿದ್ದಾಳೆ. ಅವರು ಕಾಲೇಜು ಆಡಳಿತ ಮಂಡಳಿಯನ್ನು ಸಂಪರ್ಕಿಸಿ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ, ವಿದ್ಯಾರ್ಥಿನಿಯ ದೂರಿನ ಮೇರೆಗೆ ತಿಲಕ್‌ನಗರ ಪೊಲೀಸರು ಆರೋಪಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪದಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 am, Wed, 8 October 25

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!