AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಶಾಕ್; ಖಾಸಗಿ ಬಸ್​ಗಳಲ್ಲಿ ದುಪ್ಪಟ್ಟು ಟಿಕೆಟ್ ರೇಟ್, ದುಪ್ಪಟ್ಟು ಹಣ ಪೀಕಿದ್ರೆ ದಂಡ ಫಿಕ್ಸ್

ಪ್ರತಿ ಖಾಸಗಿ ಬಸ್ ನಿಲ್ದಾಣದಲ್ಲೂ ಸಾರಿಗೆ ಇಲಾಖೆಯಿಂದ ಸ್ಕ್ವಾಡ್​ಗಳ ನೇಮಕ ಮಾಡಲಾಗ್ತಿದೆ.‌ ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ‌ರೇಸ್ ಕೋರ್ಸ್, ಕಲಾಸಿಪಾಳ್ಯ, ದೇವನಹಳ್ಳಿ, ‌ಸಿಲ್ಕ್ ಬೋರ್ಡ್, ಹೊಸೂರ್ ರೋಡ್, ಹೊಸಕೋಟೆ, ಗೊರಗುಂಟೆಪಾಳ್ಯ ಸೇರಿ ಪ್ರಮುಖ ನಿಲ್ದಾಣಗಳಲ್ಲಿ ಅಧಿಕಾರಿಗಳು ಇರಲಿದ್ದಾರೆ.

ಯುಗಾದಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಶಾಕ್; ಖಾಸಗಿ ಬಸ್​ಗಳಲ್ಲಿ ದುಪ್ಪಟ್ಟು ಟಿಕೆಟ್ ರೇಟ್, ದುಪ್ಪಟ್ಟು ಹಣ ಪೀಕಿದ್ರೆ ದಂಡ ಫಿಕ್ಸ್
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Mar 30, 2022 | 10:37 PM

Share

ಬೆಂಗಳೂರು: ಈ ಹಬ್ಬಗಳು ಬಂದ್ರೆ ಸಾಕು ಖಾಸಗಿ ಬಸ್ಸುಗಳು ಮನಬಂದಂತೆ ಬಸ್ ಚಾರ್ಚ್ ವಿಧಿಸುವುದಲ್ಲದೇ, ಸೀಟ್ ಕೆಪಾಸಿಟಿ ಮೀರಿಯು ಜನರು ಕೂರಿಸುಸ್ತಾರೆ.‌ ಹೀಗಾಗಿ ಇವರನ್ನ ಕಂಟ್ರೋಲ್ ಮಾಡುವ ಸಲುವಾಗಿಯೇ ಸಾರಿಗೆ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಬೇರೆ ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಬಂದು ಬದುಕುಕಟ್ಟಿಕೊಂಡ ಎಷ್ಟೋ ಜನ ಹಬ್ಬ ಹರಿದಿನ ಬಂತಂದ್ರೆ ಸಾಕು ಊರ ಕಡೆ ಮುಖ ಮಾಡ್ತಾರೆ. ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡಿರೋ ಖಾಸಗಿ ಬಸ್ ಮಾಲೀಕರು ಮನಬಂದಂತೆ ಟಿಕೆಟ್ ದರ ನಿಗದಿ ಮಾಡ್ತಿದ್ದಾರೆ. ಹೀಗಾಗಿ ಗ್ರಾಹಕರಿಗೆ ತೊಂದರೆ ಆಗಬಾರ್ದು ಅಂತ ಸಾರಿಗೆ ಇಲಾಖೆ ಹೊಸ ಪ್ಲ್ಯಾನ್ ಮಾಡಿದೆ.

ಪ್ರತಿ ಖಾಸಗಿ ಬಸ್ ನಿಲ್ದಾಣದಲ್ಲೂ ಸಾರಿಗೆ ಇಲಾಖೆಯಿಂದ ಸ್ಕ್ವಾಡ್​ಗಳ ನೇಮಕ ಮಾಡಲಾಗ್ತಿದೆ.‌ ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ‌ರೇಸ್ ಕೋರ್ಸ್, ಕಲಾಸಿಪಾಳ್ಯ, ದೇವನಹಳ್ಳಿ, ‌ಸಿಲ್ಕ್ ಬೋರ್ಡ್, ಹೊಸೂರ್ ರೋಡ್, ಹೊಸಕೋಟೆ, ಗೊರಗುಂಟೆಪಾಳ್ಯ ಸೇರಿ ಪ್ರಮುಖ ನಿಲ್ದಾಣಗಳಲ್ಲಿ ಅಧಿಕಾರಿಗಳು ಇರಲಿದ್ದಾರೆ. ಸೀಟ್ ಲಿಮಿಟ್​ನಷ್ಟೇ ಪ್ರಯಾಣಿಕರು ಇಲ್ಲದೇ ಇದ್ರೆ, ಲಗೇಜ್ ಸ್ಟ್ಯಾಂಡ್​ಗಳಲ್ಲಿ ಪ್ರಯಾಣಿಕರನ್ನ ಕೂರಿಸಿದ್ರೆ 1000 ದಿಂದ 5000 ರೂಪಾಯಿಗಳವರೆಗೆ ತನಕ ದಂಡ ವಿಧಿಸಲು ಸಾರಿಗೆ ಇಲಾಖೆ ಸಜ್ಜಾಗಿದೆ.

ಇನ್ನು, ಈಗಾಗಲೇ ಹಬ್ಬಗಳಿಗೆ ಊರಿಗೆ ಹೋಗಲು ಪ್ರಯಾಣಿಕರು ಟಿಕೆಟ್​ಗಳನ್ನ ಬುಕ್ ಮಾಡಿಕೊಂಡಿದ್ದು, ಅದ್ರಲ್ಲಿ ಟಿಕೆಟ್ ದರ 150 ರಿಂದ 250 ರೂಪಾಯಿವರೆಗೆ ಏರಿಕೆಯಾಗಿದೆಯಂತೆ. ಈ‌ ಕುರಿತು ಟ್ರಾವೆಲ್ಸ್ ಮಾಲೀಕರನ್ನ ಕೇಳಿದ್ರೆ ಕೊರೊನಾದಿಂದಾಗಿ ಖಾಸಗಿ ವಾಹನಗಳು ಸಂಕಷ್ಟದಲ್ಲಿವೆ. ಈ ನಷ್ಟವನ್ನ ಸರಿದೂಗಿಸಲು ಹಬ್ಬಗಳ ಸಂದರ್ಭದಲ್ಲಿ ದರ ಜಾಸ್ತಿ ಮಾಡ್ತೀವಿ ಅಂತ ಸಮರ್ಥಿಸಿಕೊಳ್ತಿದ್ದಾರೆ. ಒಟ್ಟಾರೆ, ಖಾಸಗಿ ಬಸ್​ಗಳ ದುಪ್ಪಟ್ಟು ರೇಟ್​ಗೆ ಪ್ರಯಾಣಿಕರು ಕಂಗಾಲಾಗಿರೋದಂತೂ ಸುಳ್ಳಲ್ಲ.

ವರದಿ: ಪೂರ್ಣಿಮಾ, ಟಿವಿ9, ಬೆಂಗಳೂರು

ಇದನ್ನೂ ಓದಿ: ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ಎಲ್ಲಿದ್ದಾನೆ ಎಂದು ಭಾರತಕ್ಕೆ ತಿಳಿಸಿದ್ದು ನವಾಜ್ ಷರೀಫ್: ಪಾಕ್ ಸಚಿವ

‘ಕೆಜಿಎಫ್ 2’ ಟ್ರೇಲರ್ ಕಂಡು ವಾವ್ ಎಂದ ಸೆಲೆಬ್ರಿಟಿಗಳು

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?