AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಶಾಕ್; ಖಾಸಗಿ ಬಸ್​ಗಳಲ್ಲಿ ದುಪ್ಪಟ್ಟು ಟಿಕೆಟ್ ರೇಟ್, ದುಪ್ಪಟ್ಟು ಹಣ ಪೀಕಿದ್ರೆ ದಂಡ ಫಿಕ್ಸ್

ಪ್ರತಿ ಖಾಸಗಿ ಬಸ್ ನಿಲ್ದಾಣದಲ್ಲೂ ಸಾರಿಗೆ ಇಲಾಖೆಯಿಂದ ಸ್ಕ್ವಾಡ್​ಗಳ ನೇಮಕ ಮಾಡಲಾಗ್ತಿದೆ.‌ ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ‌ರೇಸ್ ಕೋರ್ಸ್, ಕಲಾಸಿಪಾಳ್ಯ, ದೇವನಹಳ್ಳಿ, ‌ಸಿಲ್ಕ್ ಬೋರ್ಡ್, ಹೊಸೂರ್ ರೋಡ್, ಹೊಸಕೋಟೆ, ಗೊರಗುಂಟೆಪಾಳ್ಯ ಸೇರಿ ಪ್ರಮುಖ ನಿಲ್ದಾಣಗಳಲ್ಲಿ ಅಧಿಕಾರಿಗಳು ಇರಲಿದ್ದಾರೆ.

ಯುಗಾದಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಶಾಕ್; ಖಾಸಗಿ ಬಸ್​ಗಳಲ್ಲಿ ದುಪ್ಪಟ್ಟು ಟಿಕೆಟ್ ರೇಟ್, ದುಪ್ಪಟ್ಟು ಹಣ ಪೀಕಿದ್ರೆ ದಂಡ ಫಿಕ್ಸ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 30, 2022 | 10:37 PM

Share

ಬೆಂಗಳೂರು: ಈ ಹಬ್ಬಗಳು ಬಂದ್ರೆ ಸಾಕು ಖಾಸಗಿ ಬಸ್ಸುಗಳು ಮನಬಂದಂತೆ ಬಸ್ ಚಾರ್ಚ್ ವಿಧಿಸುವುದಲ್ಲದೇ, ಸೀಟ್ ಕೆಪಾಸಿಟಿ ಮೀರಿಯು ಜನರು ಕೂರಿಸುಸ್ತಾರೆ.‌ ಹೀಗಾಗಿ ಇವರನ್ನ ಕಂಟ್ರೋಲ್ ಮಾಡುವ ಸಲುವಾಗಿಯೇ ಸಾರಿಗೆ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಬೇರೆ ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಬಂದು ಬದುಕುಕಟ್ಟಿಕೊಂಡ ಎಷ್ಟೋ ಜನ ಹಬ್ಬ ಹರಿದಿನ ಬಂತಂದ್ರೆ ಸಾಕು ಊರ ಕಡೆ ಮುಖ ಮಾಡ್ತಾರೆ. ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡಿರೋ ಖಾಸಗಿ ಬಸ್ ಮಾಲೀಕರು ಮನಬಂದಂತೆ ಟಿಕೆಟ್ ದರ ನಿಗದಿ ಮಾಡ್ತಿದ್ದಾರೆ. ಹೀಗಾಗಿ ಗ್ರಾಹಕರಿಗೆ ತೊಂದರೆ ಆಗಬಾರ್ದು ಅಂತ ಸಾರಿಗೆ ಇಲಾಖೆ ಹೊಸ ಪ್ಲ್ಯಾನ್ ಮಾಡಿದೆ.

ಪ್ರತಿ ಖಾಸಗಿ ಬಸ್ ನಿಲ್ದಾಣದಲ್ಲೂ ಸಾರಿಗೆ ಇಲಾಖೆಯಿಂದ ಸ್ಕ್ವಾಡ್​ಗಳ ನೇಮಕ ಮಾಡಲಾಗ್ತಿದೆ.‌ ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ‌ರೇಸ್ ಕೋರ್ಸ್, ಕಲಾಸಿಪಾಳ್ಯ, ದೇವನಹಳ್ಳಿ, ‌ಸಿಲ್ಕ್ ಬೋರ್ಡ್, ಹೊಸೂರ್ ರೋಡ್, ಹೊಸಕೋಟೆ, ಗೊರಗುಂಟೆಪಾಳ್ಯ ಸೇರಿ ಪ್ರಮುಖ ನಿಲ್ದಾಣಗಳಲ್ಲಿ ಅಧಿಕಾರಿಗಳು ಇರಲಿದ್ದಾರೆ. ಸೀಟ್ ಲಿಮಿಟ್​ನಷ್ಟೇ ಪ್ರಯಾಣಿಕರು ಇಲ್ಲದೇ ಇದ್ರೆ, ಲಗೇಜ್ ಸ್ಟ್ಯಾಂಡ್​ಗಳಲ್ಲಿ ಪ್ರಯಾಣಿಕರನ್ನ ಕೂರಿಸಿದ್ರೆ 1000 ದಿಂದ 5000 ರೂಪಾಯಿಗಳವರೆಗೆ ತನಕ ದಂಡ ವಿಧಿಸಲು ಸಾರಿಗೆ ಇಲಾಖೆ ಸಜ್ಜಾಗಿದೆ.

ಇನ್ನು, ಈಗಾಗಲೇ ಹಬ್ಬಗಳಿಗೆ ಊರಿಗೆ ಹೋಗಲು ಪ್ರಯಾಣಿಕರು ಟಿಕೆಟ್​ಗಳನ್ನ ಬುಕ್ ಮಾಡಿಕೊಂಡಿದ್ದು, ಅದ್ರಲ್ಲಿ ಟಿಕೆಟ್ ದರ 150 ರಿಂದ 250 ರೂಪಾಯಿವರೆಗೆ ಏರಿಕೆಯಾಗಿದೆಯಂತೆ. ಈ‌ ಕುರಿತು ಟ್ರಾವೆಲ್ಸ್ ಮಾಲೀಕರನ್ನ ಕೇಳಿದ್ರೆ ಕೊರೊನಾದಿಂದಾಗಿ ಖಾಸಗಿ ವಾಹನಗಳು ಸಂಕಷ್ಟದಲ್ಲಿವೆ. ಈ ನಷ್ಟವನ್ನ ಸರಿದೂಗಿಸಲು ಹಬ್ಬಗಳ ಸಂದರ್ಭದಲ್ಲಿ ದರ ಜಾಸ್ತಿ ಮಾಡ್ತೀವಿ ಅಂತ ಸಮರ್ಥಿಸಿಕೊಳ್ತಿದ್ದಾರೆ. ಒಟ್ಟಾರೆ, ಖಾಸಗಿ ಬಸ್​ಗಳ ದುಪ್ಪಟ್ಟು ರೇಟ್​ಗೆ ಪ್ರಯಾಣಿಕರು ಕಂಗಾಲಾಗಿರೋದಂತೂ ಸುಳ್ಳಲ್ಲ.

ವರದಿ: ಪೂರ್ಣಿಮಾ, ಟಿವಿ9, ಬೆಂಗಳೂರು

ಇದನ್ನೂ ಓದಿ: ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ಎಲ್ಲಿದ್ದಾನೆ ಎಂದು ಭಾರತಕ್ಕೆ ತಿಳಿಸಿದ್ದು ನವಾಜ್ ಷರೀಫ್: ಪಾಕ್ ಸಚಿವ

‘ಕೆಜಿಎಫ್ 2’ ಟ್ರೇಲರ್ ಕಂಡು ವಾವ್ ಎಂದ ಸೆಲೆಬ್ರಿಟಿಗಳು

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ