AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.11ರಂದು ಖಾಸಗಿ ಸಾರಿಗೆ ಮುಷ್ಕರ; ಜನರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸರ್ಕಾರಿ ಸಾರಿಗೆ, ಪೊಲೀಸರಿಗೆ ರಾಮಲಿಂಗಾರೆಡ್ಡಿ ಸೂಚನೆ

ಸೆ.11ಕ್ಕೆ ಖಾಸಗಿ ಸಾರಿಗೆ ವಾಹನ ಮಾಲೀಕರು ಹಾಗು ಚಾಲಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಸೆಪ್ಟೆಂಬರ್ 11 ರಂದು ಜನ ಸಾಮಾನ್ಯರಿಗೆ, ಸ್ಕೂಲ್ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಬಿಎಂಟಿಸಿ, ಕೆಎಸ್ಆರ್​ಟಿಸಿ ಎಂಡಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಕೊಟ್ಟಿದ್ದಾರೆ.

ಸೆ.11ರಂದು ಖಾಸಗಿ ಸಾರಿಗೆ ಮುಷ್ಕರ; ಜನರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸರ್ಕಾರಿ ಸಾರಿಗೆ, ಪೊಲೀಸರಿಗೆ ರಾಮಲಿಂಗಾರೆಡ್ಡಿ ಸೂಚನೆ
ಸಚಿವ ರಾಮಲಿಂಗಾ ರೆಡ್ಡಿ
Kiran Surya
| Edited By: |

Updated on:Sep 07, 2023 | 12:17 PM

Share

ಬೆಂಗಳೂರು, ಸೆ.07: ಇದೇ ತಿಂಗಳ 11ಕ್ಕೆ ಖಾಸಗಿ ಸಾರಿಗೆ ವಾಹನ ಮಾಲೀಕರು ಹಾಗು ಚಾಲಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ(Bengaluru Bandh). ಹೀಗಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ(Ramalinga Reddy) ಅವರು ಫುಲ್ ಅಲರ್ಟ್ ಆಗಿದ್ದು ಬೆಳಗ್ಗಿನಿಂದಲೇ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಹಾಗೂ ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ನೀಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಬಿಎಂಟಿಸಿ ಎಂಡಿ, ಕೆಎಸ್ಆರ್​ಟಿಸಿ ಎಂಡಿ, ಸಾರಿಗೆ ಇಲಾಖೆಯ ಕಮೀಷನರ್ ಹಾಗೂ ‌ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ರಾಮಲಿಂಗರೆಡ್ಡಿ ಅವರು ಮಾತುಕತೆ ನಡೆಸಿದ್ದು ಪ್ರತಿಭಟನೆಯಿಂದಾಗುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅದಕ್ಕೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ.

ಸಾರಿಗೆ ಸಚಿವರು ಕೊಟ್ಟ ಸೂಚನೆಗಳೇನು?

ಸೆಪ್ಟೆಂಬರ್ 11 ರಂದು ಜನ ಸಾಮಾನ್ಯರಿಗೆ, ಸ್ಕೂಲ್ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಬಿಎಂಟಿಸಿ, ಕೆಎಸ್ಆರ್​ಟಿಸಿ ಎಂಡಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಕೊಟ್ಟಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಆಟೋ, ಕ್ಯಾಬ್​ಗಳು ಸಂಚಾರ ಮಾಡ್ತಿದ್ದ ರೂಟ್​ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್​ಗಳನ್ನು ರೋಡಿಗಿಳಿಸುವಂತೆ ಸೂಚನೆ ನೀಡಿದ್ದಾರೆ. ಸೆ.11 ರಂದು ರಾಜಧಾನಿಯಲ್ಲಿ ಸ್ಕೂಲ್, ಕಾಲೇಜು ಮಕ್ಕಳಿಗೆ ಎಕ್ಸಾಂ, ಟೆಸ್ಟ್ ಏನಾದರೂ ಇದ್ದರೆ ಅಂತಹ ಸ್ಕೂಲ್ ಕಾಲೇಜಿಗೆ ಕೆಎಸ್​ಆರ್​ಟಿಸಿ ಬಸ್ಸುಗಳನ್ನು ನಿಯೋಜನೆ ಮಾಡಬೇಕು. ಇಂದು ಬೆಂಗಳೂರಿನ ಎಲ್ಲಾ ಸ್ಕೂಲ್, ಕಾಲೇಜುಗಳಿಂದ ಮಾಹಿತಿ ಪಡೆದುಕೊಂಡು ಆಯಾ ಸ್ಕೂಲ್, ಕಾಲೇಜುಗಳಿಗೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳನ್ನು ಕಳಿಸಬೇಕು. ರೋಗಿಗಳಿಗೆ, ಮಹಿಳೆಯರಿಗೆ ಸಮಸ್ಯೆ ಆಗದ ರೀತಿಯಲ್ಲಿ ಆಸ್ಪತ್ರೆ, ಗಾರ್ಮೆಂಟ್ಸ್ ಬಳಿ ಹೆಚ್ಚಿನ ಬಸ್ ವ್ಯವಸ್ಥೆ ‌ಮಾಡಬೇಕೆಂದು ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್​ 11ರಂದು ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಬಂದ್​ಗೆ ಕರೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಇತ್ತ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿರುವ ಸಚಿವ, ಸೆಪ್ಟೆಂಬರ್ 10ರ ಭಾನುವಾರ ರಾತ್ರಿಯಿಂದಲೇ ಫಿಲ್ಡಿಗಿಳಿಯುವಂತೆ ಸೂಚಿಸಿದ್ದಾರೆ. ರಾತ್ರಿ ‌12 ರಿಂದ ಖಾಸಗಿ ‌ಸಾರಿಗೆ ಬಂದ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿಯಿಂದಲೇ ಕಾರ್ಯನಿರ್ವಹಿಸುವಂತೆ ಲಾ ಅಂಡ್ ಅರ್ಡರ್ ಮತ್ತು ಟ್ರಾಫಿಕ್ ಪೊಲೀಸರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬಲವಂತವಾಗಿ ಯಾರು ಕೂಡ ಬಂದ್ ಮಾಡಿಸಲು ಮುಂದಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ಕ್ರಮಕೈಗೊಳ್ಳಲು‌ ಸೂಚನೆ ನೀಡಿದ್ದಾರೆ. ಕೆಲವೊಂದಷ್ಟು ಸಂಘಟನೆಗಳು ಬಂದ್​ನಲ್ಲಿ ಭಾಗಿಯಾಗ್ತಿಲ್ಲ ಅಂತಹ ಸಂಘಟನೆಗಳ ಆಟೋ, ಕ್ಯಾಬ್, ಬಸ್ ಚಾಲಕರಿಗೆ ಅಂದು ಕೆಲಸ ಮಾಡಲು ಭದ್ರತೆ ನೀಡಬೇಕು ಎಂದು ಪ್ರತಿಭಟನೆಯ ದಿನ ಯಾವ ರೀತಿ ತಯಾರಿ ನಡೆಸಬೇಕೆಂಬ ಬಗ್ಗೆ ಸಚಿವರು ಸೂಚನೆ ನೀಡಿದ್ದಾರೆ ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಟಿವಿ9ಗೆ ಮಾಹಿತಿ ಸಿಕ್ಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:59 am, Thu, 7 September 23

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​