AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್: ಆಸ್ತಿ ಹರಾಜಿಗೆ ಪ್ಲ್ಯಾನ್

ಬಿಬಿಎಂಪಿ ತೆರಿಗೆ ಬಾಕಿ ಉಳಿಸಿಕೊಂಡಿರುವ 2 ಲಕ್ಷಕ್ಕೂ ಹೆಚ್ಚು ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಿದೆ. ಹಲವು ಬಾರಿ ನೋಟಿಸ್ ನೀಡಿದರೂ ತೆರಿಗೆ ಪಾವತಿಸದವರ ಆಸ್ತಿಗಳನ್ನು ಮಾರಾಟ ಮಾಡಿ ಬಾಕಿ ವಸೂಲಿ ಮಾಡುವ ಯೋಜನೆ ರೂಪಿಸಿದೆ. ಬಾಕಿ ತೆರಿಗೆ ಪಾವತಿಸಲು ಬಿಬಿಎಂಪಿ ಬಾಕಿದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್: ಆಸ್ತಿ ಹರಾಜಿಗೆ ಪ್ಲ್ಯಾನ್
ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್: ಆಸ್ತಿ ಹರಾಜಿಗೆ ಪ್ಲ್ಯಾನ್
ಶಾಂತಮೂರ್ತಿ
| Edited By: |

Updated on:Jan 21, 2025 | 9:38 PM

Share

ಬೆಂಗಳೂರು, ಜನವರಿ 21: ತೆರಿಗೆ ಬಾಕಿದಾರರ ಆಸ್ತಿ ಹರಾಜಿಗೆ (property tax) ಬಿಬಿಎಂಪಿ ಮುಂದಾಗಿದೆ. ಆ ಮೂಲಕ ದೀರ್ಘಕಾಲ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಪಾಲಿಕೆ ಶಾಕ್ ನೀಡಿದೆ. ಮುಂದಿನ ವಾರದಿಂದ ಒಂದೊಂದು ವಲಯದಲ್ಲಿ ಹರಾಜು ನಡೆಯಲಿದ್ದು, ಈ ಕುರಿತು ಬಿಬಿಎಂಪಿಯ ಕಂದಾಯ ವಿಭಾಗದಿಂದ ಆದೇಶ ಹೊರಡಿಸಲಾಗಿದೆ. ಜೊತೆಗೆ ಬಾಕಿದಾರರು ಶೀಘ್ರ ಬಾಕಿ ತೆರಿಗೆ ಪಾವತಿಸಲು ಸೂಚಿಸಲಾಗಿದೆ.

ಹಲವು ಬಾರಿ ನೋಟಿಸ್ ನೀಡಿದರೂ  ಪಾವತಿಸಲು ಬಾಕಿದಾರರ ಹಿಂದೇಟು ಹಾಕಿದ್ದಾರೆ. ಹಾಗಾಗಿ ಸ್ಥಿರಾಸ್ತಿಗಳನ್ನ ಮಾರಾಟ ಮಾಡಿ ತೆರಿಗೆ ಬಾಕಿ ಜಮಾಗೆ ಬಿಬಿಎಂಪಿ ಪ್ಲ್ಯಾನ್​ ಮಾಡಿದೆ. ಹರಾಜಿನಲ್ಲಿ ಬಂದ ಹಣದಿಂದ ತೆರಿಗೆ ವಸೂಲಿಗೆ ತಯಾರಿ ಮಾಡಲಾಗಿದೆ. ತೆರಿಗೆ ಪಾವತಿಸದ 2 ಲಕ್ಷ ಆಸ್ತಿಗಳನ್ನು ಈಗಾಗಲೇ ಪಾಲಿಕೆ ಗುರುತಿಸಿದೆ.

ಇದನ್ನೂ ಓದಿ: ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಒಟಿಎಸ್​ಗೆ ಎರಡು ದಿನ ಬಾಕಿ: ಡಿ 1ರಿಂದ ದುಪ್ಪಟ್ಟು ದಂಡ ವಸೂಲಿ ಎಚ್ಚರಿಕೆ

ಬೆಂಗಳೂರಿನಲ್ಲಿ ಬಿಬಿಎಂಪಿಗೆ ಆಸ್ತಿ ತೆರಿಗೆ ಕಟ್ಟದೇ ಕಳ್ಳಾಟವಾಡುತ್ತಿದ್ದವರ ವಿರುದ್ಧ ಪಾಲಿಕೆ ಇತ್ತೀಚೆಗೆ  ಸಮರ ಸಾರಿತ್ತು. ಇದಾದ ಬಳಿಕವೂ ಬಾಕಿದಾರರು ಎಚ್ಚೆತ್ತುಕೊಂಡಿಲ್ಲ. ಇತ್ತ ಕಳೆದ ಎರಡ್ಮೂರು ತಿಂಗಳ ಹಿಂದೆ ಒಂದಷ್ಟು ತೆರಿಗೆದಾರರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದ ಪಾಲಿಕೆ, ಬಳಿಕ ಡಿಸಿಎಂ ಸೂಚನೆಯಂತೆ ಒನ್ ಟೈಮ್ ಸೆಟಲ್ ಮೆಂಟ್​ಗೆ ಅವಕಾಶ ಕೊಟ್ಟಿತ್ತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2024-25ರ ಆಸ್ತಿ ತೆರಿಗೆ ಸಂಗ್ರಹ ಗುರಿ ಶೇಕಡಾ 83 ರಷ್ಟು ಸಾಧಿಸಿದೆ. ಇನ್ನೂ ಎರಡೂವರೆ ತಿಂಗಳುಗಳು ಬಾಕಿ ಉಳಿದಿದೆ. ಬಿಬಿಎಂಪಿಯು ಈ ಆರ್ಥಿಕ ವರ್ಷದಲ್ಲಿ ಆಸ್ತಿ ತೆರಿಗೆ ಸಂಗ್ರಹಕ್ಕೆ 5,210 ಕೋಟಿ ರೂ. ಗುರಿಯನ್ನು ಹೊಂದಿತ್ತು. ಆದರೆ ಈಗಾಗಲೇ 4,370 ಕೋಟಿ ರೂ. ಸಂಗ್ರಹಿಸಿದೆ.

ಇದನ್ನೂ ಓದಿ: ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಒಟಿಎಸ್ ಗಡವು ಅಂತ್ಯ: ಬಿಬಿಎಂಪಿಯಿಂದ ಹರಾಜಿಗೆ ಸಿದ್ಧತೆ

ನವೆಂಬರ್ ಅಂತ್ಯದಲ್ಲಿ ಮುಕ್ತಾಯಗೊಂಡ ಒನ್-ಟೈಮ್ ಸೆಟ್ಲ್‌ಮೆಂಟ್ (OTS) ಯೋಜನೆಯ ಯಶಸ್ವಿ ಅನುಷ್ಠಾನವೇ ಇಷ್ಟೊಂದು ತೆರಿಗೆ ಸಂಗ್ರಹವಾಗಲು ಕಾರಣ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಹೇಳಿದ್ದರು. ದೀರ್ಘಾವಧಿ ಬಾಕಿ ಉಳಿದಿರುವ ತೆರಿಗೆದಾರರನ್ನು ಗುರುತಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:19 pm, Tue, 21 January 25

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್