AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ತೆರಿಗೆ ಪಾವತಿಗೂ EMI?: ಜಿಬಿಎಯಿಂದ ಬೆಂಗಳೂರಿಗರಿಗೆ ಸಿಗುತ್ತಾ ಗುಡ್​​ ನ್ಯೂಸ್​?

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ EMI ಸೌಲಭ್ಯ ಮತ್ತು ಸಕಾಲಿಕ ಪಾವತಿಗೆ ರಿಯಾಯಿತಿ ನೀಡುವಂತೆ ರಾಜ್ಯ ಹಣಕಾಸು ಆಯೋಗವು ಶಿಫಾರಸು ಮಾಡಿದೆ. ಇದು ತೆರಿಗೆದಾರರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಮತ್ತು ತೆರಿಗೆ ಸಂಗ್ರಹವನ್ನು ಹೆಚ್ಚಿಸುತ್ತದೆ. ಸುಮಾರು 2.75 ಲಕ್ಷ ಡಿಫಾಲ್ಟರ್‌ಗಳಿಂದ 786 ಕೋಟಿ ಬಾಕಿ ಇರುವ ಹಿನ್ನೆಲೆಯಲ್ಲಿ, ಈ ಹೊಸ ಕ್ರಮಗಳು ಬಾಕಿ ವಸೂಲಿಗೂ ಸಹಾಯ ಮಾಡಲಿವೆ ಎಂದು ಅಭಿಪ್ರಾಯಪಟ್ಟಿದೆ.

ಆಸ್ತಿ ತೆರಿಗೆ ಪಾವತಿಗೂ EMI?: ಜಿಬಿಎಯಿಂದ ಬೆಂಗಳೂರಿಗರಿಗೆ ಸಿಗುತ್ತಾ ಗುಡ್​​ ನ್ಯೂಸ್​?
ಗ್ರೇಟರ್ ಬೆಂಗಳೂರು ಪ್ರಾಧಿಕಾರImage Credit source: Google
ಪ್ರಸನ್ನ ಹೆಗಡೆ
|

Updated on: Mar 11, 2026 | 11:11 AM

Share

ಬೆಂಗಳೂರು, ಮಾರ್ಚ್​​ 11: ಗ್ರೇಟರ್ ಬೆಂಗಳೂರು ಪ್ರಾಧಿಕಾರದ(GBA) ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಆಸ್ತಿ ತೆರಿಗೆಗಳ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಹಣಕಾಸು ಆಯೋಗ (SFC) ವಿಶೇಷ ಪರಿಹಾರವನ್ನು ಸೂಚಿಸಿದೆ. ಆಸ್ತಿ ತೆರಿಗೆ ಪಾವತಿಗೆ EMI ಯೋಜನೆ ಜೊತೆಗೆ ರಿಯಾಯಿತಿ ನೀಡುವಂತೆ ಶೀಫಾರಸು ಮಾಡಿದೆ. ಐದನೇ ರಾಜ್ಯ ಹಣಕಾಸು ಆಯೋಗದ ವರದಿ ಪ್ರಕಾರ, ಈ ಕ್ರಮದಿಂದ ಆಸ್ತಿ ತೆರಿಗೆ ಸಂಗ್ರಹಣೆಯ ಕಾರ್ಯಕ್ಷಮತೆ ಹೆಚ್ಚಬಹುದು. ಪ್ರತಿ ವರ್ಷ ಒಮ್ಮೆಲೇ ದೊಡ್ಡ ಮೊತ್ತವನ್ನು ಪಾವತಿಸುವುದು ಕೆಲವರಿಗೆ ಕಷ್ಟವಾಗಬಹುದು. ಅದನ್ನು ತಿಂಗಳ ಕಂತುಗಳಾಗಿ (EMI) ಪಾವತಿಸುವ ವ್ಯವಸ್ಥೆ ಮಾಡಿದರೆ ಪಾವತಿ ಸುಲಭವಾಗುತ್ತದೆ ಮತ್ತು ಜನರ ಮೇಲೆ ಇರುವ ಒತ್ತಡವೂ ಕಡಿಮೆಯಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದರ ಜೊತೆಗೆ ಆಸ್ತಿ ತೆರಿಗೆಯನ್ನು ಸಮಯಕ್ಕೆ ಸರಿಯಾಗಿ ಪಾವತಿಸುವವರಿಗೆ ರಿಯಾಯಿತಿ ನೀಡುವಂತೆ ಕೂಡ ಆಯೋಗ ಶಿಫಾರಸು ಮಾಡಿದೆ. ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನೀಡುತ್ತಿದ್ದಂತೆ ಶೇಕಡಾ 5ರಷ್ಟು ರಿಯಾಯಿತಿ ನೀಡುವ ಕ್ರಮವನ್ನು ಮುಂದುವರಿಸಲು ಸಲಹೆ ನೀಡಲಾಗಿದೆ. ಇದರಿಂದ ಜನರು ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಲು ಉತ್ತೇಜನ ದೊರೆಯುತ್ತದೆ ಎಂದು ಆಯೋಗ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​; ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ

ಕಳೆದ ವರ್ಷದ ಸೆಪ್ಟೆಂಬರ್ ವೇಳೆಗೆ, BBMP ಸುಮಾರು 2.75 ಲಕ್ಷ ಡಿಫಾಲ್ಟರ್‌ಗಳನ್ನು ಗುರುತಿಸಿತ್ತು. ಇವರಿಂದ ಸುಮಾರು 786 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿದಿತ್ತು. ಇದಕ್ಕೂ ಮೊದಲು, ಬಾಕಿ ತೆರಿಗೆ ವಸೂಲಿಗಾಗಿ ಜಾರಿಗೊಳಿಸಿದ್ದ ಒನ್​​ ಟೈಂ ಸೆಟಲ್​​ಮೆಂಟ್​​ ಯೋಜನೆ ಮೂಲಕ BBMP ಸುಮಾರು 1,200 ಕೋಟಿ ಬಾಕಿ ತೆರಿಗೆಯನ್ನು ಸಂಗ್ರಹಿಸಿತ್ತು. ಈ ಯೋಜನೆಯಲ್ಲಿ ಬಾಕಿ ತೆರಿಗೆಯ ಮೇಲಿನ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗಿದ್ದು, ದಂಡದಲ್ಲಿ 50 ಶೇಕಡಾ ಕಡಿತ ನೀಡಲಾಗಿತ್ತು.

ರಾಜ್ಯ ಹಣಕಾಸು ಆಯೋಗದ ಪ್ರಕಾರ, ತೆರಿಗೆ ವ್ಯಾಪ್ತಿಗೆ ಇನ್ನೂ ಸೇರಿಸದಿರುವ ಆಸ್ತಿಗಳನ್ನು ಈ ವ್ಯಾಪ್ತಿಗೆ ತಂದರೆ ವರ್ಷಕ್ಕೆ ಸುಮಾರು 1,000 ಕೋಟಿ ಹೆಚ್ಚುವರಿ ಆದಾಯ ದೊರೆಯುವ ಸಾಧ್ಯತೆ ಇದೆ. ಇದಕ್ಕಾಗಿ GIS ಆಧಾರಿತ ಇ-ಖಾತಾ ವ್ಯವಸ್ಥೆಯನ್ನು ಆಸ್ತಿ ತೆರಿಗೆ ವ್ಯವಸ್ಥೆಯೊಂದಿಗೆ ಏಕೀಕರಿಸುವ ಕೆಲಸ ನಡೆಯುತ್ತಿದೆ. ಸುಮಾರು ಐದು ಲಕ್ಷಕ್ಕೂ ಹೆಚ್ಚು ಆಸ್ತಿಗಳು ಇನ್ನೂ ತೆರಿಗೆ ವ್ಯಾಪ್ತಿಗೆ ಸೇರಿಸದೇ ಉಳಿದಿವೆಎಂದು ವರದಿ ತಿಳಿಸಿದೆ. ಅಲ್ಲದೆ ಹೊಸ ವಿದ್ಯುತ್ ಸಂಪರ್ಕಗಳ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು BESCOM ಡೇಟಾವನ್ನು ಆಸ್ತಿ ತೆರಿಗೆ ದಾಖಲೆಗಳೊಂದಿಗೆ ಹೋಲಿಕೆ ಮಾಡುವ ವ್ಯವಸ್ಥೆ ಸ್ಥಾಪಿಸುವಂತೆ ಆಯೋಗ ಶಿಫಾರಸು ಮಾಡಿದೆ. ಇದಕ್ಕಾಗಿ GBAಯ ಕಟ್ಟಡ ಪರವಾನಗಿ (Building Licence) ಮಾಹಿತಿಯನ್ನು ಬಳಸುವಂತೆ ಸೂಚಿಸಲಾಗಿದೆ ಎಂದಿ ದಿ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ