AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ: ಬಸವನಗುಡಿ PSI ವಿರುದ್ಧ ಆಯುಕ್ತರಿಗೆ ದೂರು

ಬೆಂಗಳೂರಿನ ಬಸವನಗುಡಿ ಠಾಣೆಯ ಪಿಎಸ್ಐನಿಂದ ಖಾಸಗಿ ಆಸ್ಪತ್ರೆಯ ವೈದ್ಯೆಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ಆರೋಪ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ ವೈದ್ಯೆ ಪೊಲೀಸ್ ಕಮಿಷನರ್​ಗೆ ದೂರು ನೀಡಿದ್ದಾರೆ. ವೈದ್ಯೆಯಿಂದ 1.71 ಲಕ್ಷ ರೂ. ಪಡೆದಿರುವ ಆರೋಪ ಕೂಡ ಮಾಡಲಾಗಿದೆ.

ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ: ಬಸವನಗುಡಿ PSI ವಿರುದ್ಧ ಆಯುಕ್ತರಿಗೆ ದೂರು
ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ: ಬಸವನಗುಡಿ PSI ವಿರುದ್ಧ ಆಯುಕ್ತರಿಗೆ ದೂರು
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Nov 14, 2024 | 2:57 PM

ಬೆಂಗಳೂರು, ನವೆಂಬರ್​ 14: ನಗ್ನ ಫೋಟೋ ಕಳಿಸುವಂತೆ ಖಾಸಗಿ ಆಸ್ಪತ್ರೆ ವೈದ್ಯೆಗೆ (Doctor) ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್ ರಾಜಕುಮಾರ್​ ಜೋಡಟ್ಟಿ​​ ವಿರುದ್ಧ ಪೊಲೀಸ್ ಕಮಿಷನರ್​ ಬಿ.ದಯಾನಂದ್​​ಗೆ ವೈದ್ಯೆಯಿಂದ ದೂರು ನೀಡಲಾಗಿದೆ.

2020ರಲ್ಲಿ ಪಿಎಸ್​​ಐಗೆ ಫೇಸ್​ಬುಕ್​​ ಮೂಲಕ ಯುವತಿ ಪರಿಚಯವಾಗಿದೆ. ಈ ವೇಳೆ ಯುವತಿ ಎಂಬಿಬಿಎಸ್ ಪದವಿ​​ ವ್ಯಾಸಂಗ ಮಾಡುತ್ತಿದ್ದರು. ಅದೇ ವರ್ಷ ಪೊಲೀಸ್​​ ಅಕಾಡೆಮಿಯಲ್ಲಿ ಪಿಎಸ್​ಐ ಟ್ರೈನಿಂಗ್​ನಲ್ಲಿದ್ದರು. ಈ ವೇಳೆ ಪರಸ್ಪರ ಸ್ನೇಹ ಬೆಳೆದು ಪ್ರೀತಿಯಲ್ಲಿ ಬಿದ್ದಿದ್ದರು.

ನಗ್ನ ಫೋಟೋ ಕಳಿಸುವಂತೆ ಕಿರುಕುಳ

ಇನ್ನು ಇತ್ತೀಚೆಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದು, ಇದನ್ನ ನಿರಾಕರಿಸಿದ ವೈದ್ಯೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡುತ್ತಿರುವ ಆರೋಪ ಮಾಡಲಾಗಿದೆ. ಹೀಗಾಗಿ ಸದ್ಯ ನೊಂದ ವೈದ್ಯೆಯಿಂದ ಬೆಂಗಳೂರು ಪೊಲೀಸ್ ಕಮಿಷನರ್​ಗೆ ದೂರು ನೀಡಲಾಗಿದೆ.

ಇದನ್ನೂ ಓದಿ: ಮದ್ವೆಯಾಗುವಂತೆ ಮಾವನ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯಕಂಡ ಅಪ್ರಾಪ್ತೆ

ಸಬ್​ ಇನ್ಸ್​​ಪೆಕ್ಟರ್ ರಾಜಕುಮಾರ್​ ಜೋಡಟ್ಟಿ ವೈದ್ಯೆಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದಾರೆ. ವಾಟ್ಸಾಪ್​ ಕರೆ ಮಾಡುವ ಮೂಲಕ ನಿನಗೆ ಹಣ ವಾಪಸ್​ ಕೊಡುವುದಿಲ್ಲ ಏನು ಮಾಡಿಕೊಳ್ಳುತ್ತೀಯಾ ಮಾಡಿಕೊ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಿನಗೆ ಹಣ ಬೇಕಾದರೆ ಠಾಣೆಗೆ ಬಂದು ತೆಗೆದುಕೊಂಡು ಹೋಗು ಎಂದು ಬೆದರಿಕೆ ಹಾಕಿದ್ದಾರೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೂ ಯತ್ನಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ತವ್ಯದಲ್ಲಿ ಅಸಡ್ಡೆ ಹಾಗೂ ನಿರ್ಲಕ್ಷ್ಯ: ತಹಶೀಲ್ದಾರ್​ಗೆ ನೋಟಿಸ್

ಕೋಲಾರ: ಕರ್ತವ್ಯದಲ್ಲಿ ಅಸಡ್ಡೆ ಹಾಗೂ ನಿರ್ಲಕ್ಷ್ಯ ಹಿನ್ನೆಲೆ ಮಾಲೂರು ತಹಶೀಲ್ದಾರ್​ಗೆ ರಮೇಶ್​ ಎಂಬುವವರಿಗೆ ನೋಟಿಸ್ ನೀಡಲು ಕಂದಾಯ ಇಲಾಖೆಯ ಸಚಿವ ಕೃಷ್ಣಬೈರೇಗೌಡ ಸೂಚನೆ ನೀಡಿದ್ದಾರೆ. ಬಗರ್​​ ಹುಕುಂ ಹಾಗೂ ಭೂ ಮಂಜೂರಾತಿ ಸೇರಿದಂತೆ ಹಲವು ಕೆಲಸ ನಿರ್ವಹಣೆಯಲ್ಲಿ ಅಸಡ್ಡೆ ತೋರಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಶರಾವತಿ ಹಿನ್ನೀರಿನಲ್ಲಿ ಮಗುಚಿದ ತೆಪ್ಪ: ಐವರ ಪೈಕಿ ಮೂವರು ನಾಪತ್ತೆ

ತಹಶೀಲ್ದಾರ್​​ಗಳ ಜತೆ ಕಾನ್ಫರೆನ್ಸ್​ ಮೂಲಕ ಸಚಿವರು ಸಭೆ ಮಾಡಿದ್ದು, ಈ ವೇಳೆ ನೋಟಿಸ್​ ನೀಡಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾರಿಗೆ ಸೂಚಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ