AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ: ಬಸವನಗುಡಿ PSI ವಿರುದ್ಧ ಆಯುಕ್ತರಿಗೆ ದೂರು

ಬೆಂಗಳೂರಿನ ಬಸವನಗುಡಿ ಠಾಣೆಯ ಪಿಎಸ್ಐನಿಂದ ಖಾಸಗಿ ಆಸ್ಪತ್ರೆಯ ವೈದ್ಯೆಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ಆರೋಪ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ ವೈದ್ಯೆ ಪೊಲೀಸ್ ಕಮಿಷನರ್​ಗೆ ದೂರು ನೀಡಿದ್ದಾರೆ. ವೈದ್ಯೆಯಿಂದ 1.71 ಲಕ್ಷ ರೂ. ಪಡೆದಿರುವ ಆರೋಪ ಕೂಡ ಮಾಡಲಾಗಿದೆ.

ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ: ಬಸವನಗುಡಿ PSI ವಿರುದ್ಧ ಆಯುಕ್ತರಿಗೆ ದೂರು
ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ: ಬಸವನಗುಡಿ PSI ವಿರುದ್ಧ ಆಯುಕ್ತರಿಗೆ ದೂರು
Shivaprasad B
| Edited By: |

Updated on: Nov 14, 2024 | 2:57 PM

Share

ಬೆಂಗಳೂರು, ನವೆಂಬರ್​ 14: ನಗ್ನ ಫೋಟೋ ಕಳಿಸುವಂತೆ ಖಾಸಗಿ ಆಸ್ಪತ್ರೆ ವೈದ್ಯೆಗೆ (Doctor) ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್ ರಾಜಕುಮಾರ್​ ಜೋಡಟ್ಟಿ​​ ವಿರುದ್ಧ ಪೊಲೀಸ್ ಕಮಿಷನರ್​ ಬಿ.ದಯಾನಂದ್​​ಗೆ ವೈದ್ಯೆಯಿಂದ ದೂರು ನೀಡಲಾಗಿದೆ.

2020ರಲ್ಲಿ ಪಿಎಸ್​​ಐಗೆ ಫೇಸ್​ಬುಕ್​​ ಮೂಲಕ ಯುವತಿ ಪರಿಚಯವಾಗಿದೆ. ಈ ವೇಳೆ ಯುವತಿ ಎಂಬಿಬಿಎಸ್ ಪದವಿ​​ ವ್ಯಾಸಂಗ ಮಾಡುತ್ತಿದ್ದರು. ಅದೇ ವರ್ಷ ಪೊಲೀಸ್​​ ಅಕಾಡೆಮಿಯಲ್ಲಿ ಪಿಎಸ್​ಐ ಟ್ರೈನಿಂಗ್​ನಲ್ಲಿದ್ದರು. ಈ ವೇಳೆ ಪರಸ್ಪರ ಸ್ನೇಹ ಬೆಳೆದು ಪ್ರೀತಿಯಲ್ಲಿ ಬಿದ್ದಿದ್ದರು.

ನಗ್ನ ಫೋಟೋ ಕಳಿಸುವಂತೆ ಕಿರುಕುಳ

ಇನ್ನು ಇತ್ತೀಚೆಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದು, ಇದನ್ನ ನಿರಾಕರಿಸಿದ ವೈದ್ಯೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡುತ್ತಿರುವ ಆರೋಪ ಮಾಡಲಾಗಿದೆ. ಹೀಗಾಗಿ ಸದ್ಯ ನೊಂದ ವೈದ್ಯೆಯಿಂದ ಬೆಂಗಳೂರು ಪೊಲೀಸ್ ಕಮಿಷನರ್​ಗೆ ದೂರು ನೀಡಲಾಗಿದೆ.

ಇದನ್ನೂ ಓದಿ: ಮದ್ವೆಯಾಗುವಂತೆ ಮಾವನ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯಕಂಡ ಅಪ್ರಾಪ್ತೆ

ಸಬ್​ ಇನ್ಸ್​​ಪೆಕ್ಟರ್ ರಾಜಕುಮಾರ್​ ಜೋಡಟ್ಟಿ ವೈದ್ಯೆಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದಾರೆ. ವಾಟ್ಸಾಪ್​ ಕರೆ ಮಾಡುವ ಮೂಲಕ ನಿನಗೆ ಹಣ ವಾಪಸ್​ ಕೊಡುವುದಿಲ್ಲ ಏನು ಮಾಡಿಕೊಳ್ಳುತ್ತೀಯಾ ಮಾಡಿಕೊ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಿನಗೆ ಹಣ ಬೇಕಾದರೆ ಠಾಣೆಗೆ ಬಂದು ತೆಗೆದುಕೊಂಡು ಹೋಗು ಎಂದು ಬೆದರಿಕೆ ಹಾಕಿದ್ದಾರೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೂ ಯತ್ನಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ತವ್ಯದಲ್ಲಿ ಅಸಡ್ಡೆ ಹಾಗೂ ನಿರ್ಲಕ್ಷ್ಯ: ತಹಶೀಲ್ದಾರ್​ಗೆ ನೋಟಿಸ್

ಕೋಲಾರ: ಕರ್ತವ್ಯದಲ್ಲಿ ಅಸಡ್ಡೆ ಹಾಗೂ ನಿರ್ಲಕ್ಷ್ಯ ಹಿನ್ನೆಲೆ ಮಾಲೂರು ತಹಶೀಲ್ದಾರ್​ಗೆ ರಮೇಶ್​ ಎಂಬುವವರಿಗೆ ನೋಟಿಸ್ ನೀಡಲು ಕಂದಾಯ ಇಲಾಖೆಯ ಸಚಿವ ಕೃಷ್ಣಬೈರೇಗೌಡ ಸೂಚನೆ ನೀಡಿದ್ದಾರೆ. ಬಗರ್​​ ಹುಕುಂ ಹಾಗೂ ಭೂ ಮಂಜೂರಾತಿ ಸೇರಿದಂತೆ ಹಲವು ಕೆಲಸ ನಿರ್ವಹಣೆಯಲ್ಲಿ ಅಸಡ್ಡೆ ತೋರಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಶರಾವತಿ ಹಿನ್ನೀರಿನಲ್ಲಿ ಮಗುಚಿದ ತೆಪ್ಪ: ಐವರ ಪೈಕಿ ಮೂವರು ನಾಪತ್ತೆ

ತಹಶೀಲ್ದಾರ್​​ಗಳ ಜತೆ ಕಾನ್ಫರೆನ್ಸ್​ ಮೂಲಕ ಸಚಿವರು ಸಭೆ ಮಾಡಿದ್ದು, ಈ ವೇಳೆ ನೋಟಿಸ್​ ನೀಡಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾರಿಗೆ ಸೂಚಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ