AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು

ಬೆಂಗಳೂರಿನಲ್ಲಿ ಇಬ್ಬರು ಪಿಯು ವಿದ್ಯಾರ್ಥಿನಿಯರು ಪರೀಕ್ಷಾ ಭಯದಿಂದ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ನಡೆದಿದೆ. ಜನವರಿ 31ರಂದು ವಿದ್ಯಾರಣ್ಯಪುರದಲ್ಲಿ ಈ ವಿದ್ಯಾರ್ಥಿನಿರು ಕಾಣೆಯಾಗಿದ್ದು, ಕುಟುಂಬಸ್ಥರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಪೋಲೀಸರು ತೀವ್ರ ಶೋಧ ನಡೆಸುತ್ತಿದ್ದು, ವಿದ್ಯಾರ್ಥಿನಿಯರು ಸುರಕ್ಷಿತವಾಗಿ ಮರಳಲು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು
ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Mar 04, 2026 | 11:12 AM

Share

ಬೆಂಗಳೂರು, ಮಾರ್ಚ್​ 04: ರಾಜ್ಯದಲ್ಲಿ ಪಿಯುಸಿ ಪರೀಕ್ಷೆ (PUC Exams) ನಡೆಯುತ್ತಿರುವ ಬೆನ್ನಲ್ಲೇ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು 2ನೇ ಪಿಯು ಓದುತ್ತಿದ್ದ ತನಿಷ್ಕಾ ಹಾಗೂ 1ನೇ ಪಿಯು ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಹಿಂದೆಯೂ ಪರೀಕ್ಷೆ ವೇಳೆ ಕೈ ಕತ್ತರಿಸಿಕೊಂಡಿದ್ದ ವಿದ್ಯಾರ್ಥಿನಿ

ಪರೀಕ್ಷೆ ಸಮೀಪಿಸುತ್ತಿದ್ದ ಹಿನ್ನೆಲೆ ಎಕ್ಸಾಮ್ ಭಯದಿಂದ ಸೀನಿಯರ್ ವಿದ್ಯಾರ್ಥಿನಿ ತನ್ನ ಜೂನಿಯರ್ ಸ್ನೇಹಿತೆಯನ್ನು ಕರೆದುಕೊಂಡು ಮನೆ ಬಿಟ್ಟು ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷ ಪರೀಕ್ಷೆ ತಪ್ಪಿಸಿಕೊಳ್ಳಲು ತನಿಷ್ಕಾ ತನ್ನ ಕೈ ಕತ್ತರಿಸಿಕೊಂಡಿದ್ದಳೆಂದು ತಿಳಿದುಬಂದಿದೆ. ಹೀಗಾಗಿ ಈ ಬಾರಿ ಎಕ್ಸಾಮ್ ಬರೆಯಲು ಇಚ್ಚಿಸದೆ ಈ ನಿರ್ಧಾರ ಕೈಗೊಂಡಿರಬಹುದೆಂದು ಕುಟುಂಬಸ್ಥರು ಮತ್ತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕಾಣೆಯಾಗಿರುವ ಈ ಇಬ್ಬರು ವಿದ್ಯಾರ್ಥಿನಿಯರು ತಮ್ಮ ಮೊಬೈಲ್ ಫೋನ್‌ಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದು, ಎಟಿಎಂ ಕಾರ್ಡ್ ಸೇರಿದಂತೆ ಯಾವುದೇ ಹಣಕಾಸು ಕೊಂಡೊಯ್ದಿಲ್ಲವೆಂದು ಹೇಳಲಾಗಿದೆ. ಆಧಾರ್ ಕಾರ್ಡ್ ಹಾಗೂ ಕಾಲೇಜು ಬ್ಯಾಗ್ ಮಾತ್ರ ತೆಗೆದುಕೊಂಡು ನಾಪತ್ತೆಯಾಗಿರುವ ಇವರು, ಉಚಿತ ಬಸ್ ಪ್ರಯಾಣ ಸೌಲಭ್ಯ ಬಳಸಿಕೊಂಡಿರುವ ಶಂಕೆಯೂ ವ್ಯಕ್ತವಾಗಿದೆ.

ಇದನ್ನೂ ಓದಿ ಕೊಡಲಿಯಿಂದ ತಂದೆಯನ್ನೇ ಕಡಿದು ಕೊಂದು, ಟ್ಯಾಂಕ್​ಗೆ ಎಸೆದು ನೆಮ್ಮದಿಯಿಂದ ಕುಳಿತು ಬಿರಿಯಾನಿ ತಿಂದ ಮಗ

ಒಂದು ವಾರದ ಗಡುವು ನೀಡಿರುವ ಹೈ ಕೋರ್ಟ್​

ಕಳೆದ ಕೆಲ ದಿನಗಳ ಹಿಂದೆ ಸ್ನೇಹಿತರಿಗೆ ಕರೆ ಮಾಡಿ ಮಲೆ ಮಹಾದೇಶ್ವರ ಬೆಟ್ಟದಲ್ಲಿದ್ದೇವೆ ಎಂದು ತಿಳಿದಿದ್ದರಂತೆ. ಒಂದು ವಾರದಲ್ಲಿ ಮತ್ತೆ ಸಂಪರ್ಕಿಸುವುದಾಗಿಯೂ ಹೇಳಿದ್ದರು ಎನ್ನಲಾಗಿದೆ. ಆದರೆ ಅದಾದ ಬಳಿಕ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಸಂಬಂಧ ಪೊಲೀಸರು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹೈ ಕೋರ್ಟ್​ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಒಂದು ವಾರದ ಗಡುವು ನೀಡಿದೆ ಎಂದು ತಿಳಿದುಬಂದಿದೆ. ಒಂದು ತಿಂಗಳಿಂದ ಮಕ್ಕಳಿಗಾಗಿ ಕಣ್ಣೀರಿಡುತ್ತಿರುವ ಕುಟುಂಬಸ್ಥರು, ಸುರಕ್ಷಿತವಾಗಿ ಮರಳಿ ಬರುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us