AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶಿಲ್ಪಾಶೆಟ್ಟಿ ಒಡೆತನದ ಬೆಂಗಳೂರು ಪಬ್​​​ನಲ್ಲಿ ಗಲಾಟೆ:​​​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಉದ್ಯಮಿ

ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಒಡೆತನದ 'ಬ್ಯಾಸ್ಟಿಯನ್' ಪಬ್‌ನಲ್ಲಿ ಉದ್ಯಮಿ ಸತ್ಯ ನಾಯ್ಡು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಸೇವೆ ವಿಚಾರಕ್ಕೆ ಗುರುವಾರ ರಾತ್ರಿ ನಡೆದ ಗಲಾಟೆ 2 ದಿನಗಳ ನಂತರ ಬೆಳಕಿಗೆ ಬಂದಿದೆ. ಸತ್ಯ ನಾಯ್ಡು ಕುಡಿದ ಅಮಲಿನಲ್ಲಿದ್ದು, ಹಲ್ಲೆ ನಡೆಸಿದ ವಿಡಿಯೋ ಲಭ್ಯವಾಗಿದೆ. ದೂರು ದಾಖಲಾಗದಿದ್ದರೂ, ಕಬ್ಬನ್ ಪಾರ್ಕ್ ಪೊಲೀಸರು ಈಗ ಸ್ವತಃ ತನಿಖೆ ಆರಂಭಿಸಿದ್ದಾರೆ.

ನಟಿ ಶಿಲ್ಪಾಶೆಟ್ಟಿ ಒಡೆತನದ ಬೆಂಗಳೂರು ಪಬ್​​​ನಲ್ಲಿ ಗಲಾಟೆ:​​​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಉದ್ಯಮಿ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Dec 13, 2025 | 7:03 PM

Share

ಬೆಂಗಳೂರು, ಡಿ.13: ಬೆಂಗಳೂರು ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾಶೆಟ್ಟಿ ಒಡೆತನದ ‘ಬ್ಯಾಸ್ಟಿಯನ್’ ಪಬ್‌ನಲ್ಲಿ (Bangalore pub brawl) ಗಲಾಟೆ ನಡೆದಿದೆ. 2 ದಿನಗಳ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಗುರುವಾರ ರಾತ್ರಿ 1.30 ಸುಮಾರಿಗೆ ಈ ಘಟನೆ ನಡೆದಿದೆ. ಪಬ್‌ನಲ್ಲಿ ಸರ್ವಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಸಿಬ್ಬಂದಿ ಹಾಗೂ ಉದ್ಯಮಿ ಸತ್ಯ ನಾಯ್ಡು ನಡುವೆ ವಾಗ್ವಾದ ನಡೆದು, ಪಬ್​​​ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ನು ಗಲಾಟೆಯ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಇದೀಗ ಪೊಲೀಸರು ಸ್ವತಃ ಪಬ್​​​​​​​​ಗೆ ಬಂದು ಮಾಹಿತಿ ಕಲೆಹಾಕಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಗೆ ಈ ಗಲಾಟೆ ಬಗ್ಗೆ ವಿಡಿಯೋವೊಂದು ಸಿಕ್ಕಿದೆ, ಅದರ ಆಧಾರ ಮೇಲೆ ತನಿಖೆ ನಡೆಸಿದ್ದಾರೆ.

ಇನ್ನು ಉದ್ಯಮಿ ಸತ್ಯ ನಾಯ್ಡು ಅವರನ್ನು ಮಾಜಿ ಬಿಗ್ ಬಾಸ್ ಸ್ಪರ್ಧಿ ಮತ್ತು ನಿರೂಪಕಿಯ ಮಾಜಿ ಪತಿ ಎಂದು ಹೇಳಲಾಗಿದೆ. ಪಬ್‌ ಮುಚ್ಚುವ ಸಮಯದಲ್ಲಿ ಈ ಗಲಾಟೆ ನಡೆದಿದೆ. ಪಬ್‌ನಲ್ಲಿ ಸರ್ವಿಸ್ ನೀಡುವ ವಿಚಾರಕ್ಕೆ ಸತ್ಯ ನಾಯ್ಡು ಸಿಬ್ಬಂದಿಗಳ ಮೇಲೆ ಸಿಟ್ಟಾಗಿದ್ದಾರೆ. ಈ ವೇಳೆ ಸಿಬ್ಬಂದಿಗಳು ತುಂಬಾ ತಾಳ್ಮೆಯಿಂದ, ಅವರನ್ನು ಸಮಾಧಾನ ಮಾಡಲು ಮುಂದಾಗಿದ್ದಾರೆ. ಆದರೆ ಸತ್ಯ ನಾಯ್ಡು ಮಾತು ಕೇಳದೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇಬ್ಬರು ಗಂಡಂದಿರ ಮುದ್ದಿನ ಮಡದಿ ಪೊಲೀಸಪ್ಪನ ಜತೆ ಪರಾರಿ

ಈ ಘಟನೆಯ ವೇಳೆ ಸತ್ಯ ನಾಯ್ಡು ಅತಿಯಾಗಿ ಮದ್ಯಪಾನ ಮಾಡಿದ್ದರು ಎಂದು ಹೇಳಲಾಗಿದೆ. ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದನ್ನು ತಡೆಯಲು ಪಬ್‌ನ ಬೌನ್ಸರ್‌ಗಳು ಪ್ರಯತ್ನಿಸಿದ್ದಾರೆ. ಇನ್ನು ಈ ಬಗ್ಗೆ ಪೊಲೀಸರು ಯಾವುದೇ ದೂರು ದಾಖಲಿಸಿಕೊಂಡಿಲ್ಲ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ಈ ಗಲಾಟೆಯ ಬಗ್ಗೆ ವಿಡಿಯೋವೊಂದು ಸಿಕ್ಕಿದೆ. ಅದರ ಆಧಾರ ಮೇಲೆ ತನಿಖೆ ನಡೆಸಲು ಮುಂದಾಗಿದ್ದಾರೆ.

ವರದಿ: ಜಗ್ಗ

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್