AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶಿಲ್ಪಾಶೆಟ್ಟಿ ಒಡೆತನದ ಬೆಂಗಳೂರು ಪಬ್​​​ನಲ್ಲಿ ಗಲಾಟೆ:​​​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಉದ್ಯಮಿ

ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಒಡೆತನದ 'ಬ್ಯಾಸ್ಟಿಯನ್' ಪಬ್‌ನಲ್ಲಿ ಉದ್ಯಮಿ ಸತ್ಯ ನಾಯ್ಡು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಸೇವೆ ವಿಚಾರಕ್ಕೆ ಗುರುವಾರ ರಾತ್ರಿ ನಡೆದ ಗಲಾಟೆ 2 ದಿನಗಳ ನಂತರ ಬೆಳಕಿಗೆ ಬಂದಿದೆ. ಸತ್ಯ ನಾಯ್ಡು ಕುಡಿದ ಅಮಲಿನಲ್ಲಿದ್ದು, ಹಲ್ಲೆ ನಡೆಸಿದ ವಿಡಿಯೋ ಲಭ್ಯವಾಗಿದೆ. ದೂರು ದಾಖಲಾಗದಿದ್ದರೂ, ಕಬ್ಬನ್ ಪಾರ್ಕ್ ಪೊಲೀಸರು ಈಗ ಸ್ವತಃ ತನಿಖೆ ಆರಂಭಿಸಿದ್ದಾರೆ.

ನಟಿ ಶಿಲ್ಪಾಶೆಟ್ಟಿ ಒಡೆತನದ ಬೆಂಗಳೂರು ಪಬ್​​​ನಲ್ಲಿ ಗಲಾಟೆ:​​​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಉದ್ಯಮಿ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Dec 13, 2025 | 7:03 PM

Share

ಬೆಂಗಳೂರು, ಡಿ.13: ಬೆಂಗಳೂರು ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾಶೆಟ್ಟಿ ಒಡೆತನದ ‘ಬ್ಯಾಸ್ಟಿಯನ್’ ಪಬ್‌ನಲ್ಲಿ (Bangalore pub brawl) ಗಲಾಟೆ ನಡೆದಿದೆ. 2 ದಿನಗಳ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಗುರುವಾರ ರಾತ್ರಿ 1.30 ಸುಮಾರಿಗೆ ಈ ಘಟನೆ ನಡೆದಿದೆ. ಪಬ್‌ನಲ್ಲಿ ಸರ್ವಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಸಿಬ್ಬಂದಿ ಹಾಗೂ ಉದ್ಯಮಿ ಸತ್ಯ ನಾಯ್ಡು ನಡುವೆ ವಾಗ್ವಾದ ನಡೆದು, ಪಬ್​​​ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ನು ಗಲಾಟೆಯ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಇದೀಗ ಪೊಲೀಸರು ಸ್ವತಃ ಪಬ್​​​​​​​​ಗೆ ಬಂದು ಮಾಹಿತಿ ಕಲೆಹಾಕಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಗೆ ಈ ಗಲಾಟೆ ಬಗ್ಗೆ ವಿಡಿಯೋವೊಂದು ಸಿಕ್ಕಿದೆ, ಅದರ ಆಧಾರ ಮೇಲೆ ತನಿಖೆ ನಡೆಸಿದ್ದಾರೆ.

ಇನ್ನು ಉದ್ಯಮಿ ಸತ್ಯ ನಾಯ್ಡು ಅವರನ್ನು ಮಾಜಿ ಬಿಗ್ ಬಾಸ್ ಸ್ಪರ್ಧಿ ಮತ್ತು ನಿರೂಪಕಿಯ ಮಾಜಿ ಪತಿ ಎಂದು ಹೇಳಲಾಗಿದೆ. ಪಬ್‌ ಮುಚ್ಚುವ ಸಮಯದಲ್ಲಿ ಈ ಗಲಾಟೆ ನಡೆದಿದೆ. ಪಬ್‌ನಲ್ಲಿ ಸರ್ವಿಸ್ ನೀಡುವ ವಿಚಾರಕ್ಕೆ ಸತ್ಯ ನಾಯ್ಡು ಸಿಬ್ಬಂದಿಗಳ ಮೇಲೆ ಸಿಟ್ಟಾಗಿದ್ದಾರೆ. ಈ ವೇಳೆ ಸಿಬ್ಬಂದಿಗಳು ತುಂಬಾ ತಾಳ್ಮೆಯಿಂದ, ಅವರನ್ನು ಸಮಾಧಾನ ಮಾಡಲು ಮುಂದಾಗಿದ್ದಾರೆ. ಆದರೆ ಸತ್ಯ ನಾಯ್ಡು ಮಾತು ಕೇಳದೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇಬ್ಬರು ಗಂಡಂದಿರ ಮುದ್ದಿನ ಮಡದಿ ಪೊಲೀಸಪ್ಪನ ಜತೆ ಪರಾರಿ

ಈ ಘಟನೆಯ ವೇಳೆ ಸತ್ಯ ನಾಯ್ಡು ಅತಿಯಾಗಿ ಮದ್ಯಪಾನ ಮಾಡಿದ್ದರು ಎಂದು ಹೇಳಲಾಗಿದೆ. ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದನ್ನು ತಡೆಯಲು ಪಬ್‌ನ ಬೌನ್ಸರ್‌ಗಳು ಪ್ರಯತ್ನಿಸಿದ್ದಾರೆ. ಇನ್ನು ಈ ಬಗ್ಗೆ ಪೊಲೀಸರು ಯಾವುದೇ ದೂರು ದಾಖಲಿಸಿಕೊಂಡಿಲ್ಲ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ಈ ಗಲಾಟೆಯ ಬಗ್ಗೆ ವಿಡಿಯೋವೊಂದು ಸಿಕ್ಕಿದೆ. ಅದರ ಆಧಾರ ಮೇಲೆ ತನಿಖೆ ನಡೆಸಲು ಮುಂದಾಗಿದ್ದಾರೆ.

ವರದಿ: ಜಗ್ಗ

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ