AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ

ಹುಡುಗಿಯರ ಬಳಿ ಮೊಬೈಲ್​ ನಂಬರ್​​ ಕೇಳಿದ ವಿಚಾರಕ್ಕೆ ಶುರುವಾದ ಕಿರಿಕ್​​ ಫೈಟ್​​ ಹಂತಕ್ಕೆ ಹೋಗಿರುವ ಘಟನೆ ಬೆಂಗಳೂರಿನ ನಾಗರಭಾವಿ ರಸ್ತೆಯಲ್ಲಿರುವ ಪಬ್ನಲ್ಲಿ ನಡೆದಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ದೊಡ್ಡ ಗಲಾಟೆ ಹಂತಕ್ಕೆ ಹೋಗಿದ್ದ ಸಂದರ್ಭ ಪಬ್​​ ಸಿಬ್ಬಂದಿ ಮತ್ತು ಪೊಲೀಸರು ಎಲ್ಲವನ್ನು ತಿಳಿಗೊಳಿಸುವ ಯತ್ನ ಮಾಡಿದ್ದಾರೆ. ಬಳಿಕ ಘಟನೆ ಪೊಲೀಸ್​​ ಠಾಣೆ ಮೆಟ್ಟಿಲೇರಿದ್ದು, ದೂರು-ಪ್ರತಿದೂರುಗಳು ದಾಖಲಾಗಿವೆ.

ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ
ಪಬ್​​ ಬಳಿ ಗಲಾಟೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Dec 18, 2025 | 7:13 PM

Share

ಬೆಂಗಳೂರು, ಡಿಸೆಂಬರ್​​ 18: ಹುಡುಗಿಯರ ಮೊಬೈಲ್​​ ನಂಬರ್​ ಕೇಳಿದ ಆರೋಪ ವಿಚಾರವಾಗಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಪಬ್​​ನಲ್ಲಿ ನಡೆದ ಗಲಾಟೆ ಪೊಲೀಸ್​​ ಠಾಣೆ ಮೆಟ್ಟಿಲೆರಿದ್ದು, ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿವೆ. ನಾಗರಬಾವಿ ರಸ್ತೆಯಲ್ಲಿರುವ ಪಬ್​ನಲ್ಲಿ ನಡೆದ ಘಟನೆ ಸಂಬಂಧ ಎರಡೂ ಕಡೆಯವರ ದೂರು ಪಡೆದಿರುವ ಪೊಲೀಸರು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಘಟನೆ ಏನು?

ಪಬ್​​ನಲ್ಲಿ ಹೇಮಂತ್ ಜೊತೆಗಿದ್ದ ಯುವತಿಯರ ಫೋನ್ ನಂಬರ್ ಅನ್ನು ಉಮೇಶ್​​ ಎಂಬವರು ಕೇಳಿದ್ದಾರೆ. ಈ ವೇಳೆ ಯುವತಿಯರು ಮೊಬೈಲ್​​ ನಂಬರ್​​ ನೀಡಲು ನಿರಾಕರಿಸಿರುವ ಕಾರಣಕ್ಕೆ ಅವರ ಜೊತೆಗೆ ಉಮೇಶ್​​ ಅಸಭ್ಯವರ್ತನೆ ತೋರಿದ್ದಾರೆ. ಘಟನೆ ಬಗ್ಗೆ ಪಬ್​​ ಸಿಬ್ಬಂದಿಗೆ ಹೇಮಂತ್​​ ದೂರು ನೀಡಿದ್ದು, ಆ ಬಳಿಕ ಉಮೆಶ್​​ ಟೇಬಲ್​​ನ ಪಬ್​​ನವರು ಬೇರೆಡೆಗೆ ಶಿಫ್ಟ್​​ ಮಾಡುವ ಮೂಲಕ ಪರಿಸ್ಥಿತಿ ಶಾಂತಗೊಳಿಸಿದ್ದರು. ಆದ್ರೆ ಪಾರ್ಟಿ ಮುಗಿಸಿ ಪಬ್​​ನಿಂದ ಹೊರಬರುವಾಗ ಉಮೆಶ್​ ಮತ್ತೆ ಹೇಮಂತ್​​​ಗೆ ಬೈದಿದ್ದು ರಾದ್ಧಾಂತಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​; ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ಉಮೇಶ್​​ ಮಾತಿನಿಂದ ಹೇಮಂತ್​​ ಕೂಡ ಸಿಟ್ಟಾಗಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ಹೋಗಿದೆ. ಆಕ್ರೋಶಭರಿತರಾಗಿದ್ದ ಹೇಮಂತ್​​ ಉಮೇಶ್​​ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಪಬ್ ಬಳಿಗೆ ಕೆಲ ಹುಡುಗರನ್ನು ಕರೆಸಿ ಮತ್ತೆ ಅಟ್ಯಾಕ್​​ಗೆ ಮುಂದಾಗಿದ್ದಾರೆ. ಈ ವೇಳೆ ದೊಡ್ಡ ಗಲಾಟೆ ನಡೆಯದಂತೆ ಪಬ್ ಸಿಬ್ಬಂದಿ ಮತ್ತು ಸ್ಥಳಕ್ಕೆ ಬಂದ ಜ್ಞಾನಭಾರತಿ ಪೊಲೀಸರು ತಡೆದಿದ್ದಾರೆ. ಬಳಿಕ ಹೇಮಂತ್ ತನ್ನ ಮೇಲೆ ಹಲ್ಲೆ ಮಾಡಿದ್ದಾನೆಂದು ಉಮೇಶ್ ದೂರು ನೀಡಿದ್ದರೆ, ಅಸಭ್ಯ ವರ್ತನೆ ಆರೋಪದಡಿ ಉಮೇಶ್ ವಿರುದ್ಧ ಹೇಮಂತ್​​ ಜೊತೆಗಿದ್ದ ಯುವತಿಯರು ಕೂಡ ಪ್ರತಿದೂರು ದಾಖಲಿಸಿದ್ದಾರೆ. ಇಬ್ಬರ ದೂರಿನ ಅನ್ವಯ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ