AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ

ಹುಡುಗಿಯರ ಬಳಿ ಮೊಬೈಲ್​ ನಂಬರ್​​ ಕೇಳಿದ ವಿಚಾರಕ್ಕೆ ಶುರುವಾದ ಕಿರಿಕ್​​ ಫೈಟ್​​ ಹಂತಕ್ಕೆ ಹೋಗಿರುವ ಘಟನೆ ಬೆಂಗಳೂರಿನ ನಾಗರಭಾವಿ ರಸ್ತೆಯಲ್ಲಿರುವ ಪಬ್ನಲ್ಲಿ ನಡೆದಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ದೊಡ್ಡ ಗಲಾಟೆ ಹಂತಕ್ಕೆ ಹೋಗಿದ್ದ ಸಂದರ್ಭ ಪಬ್​​ ಸಿಬ್ಬಂದಿ ಮತ್ತು ಪೊಲೀಸರು ಎಲ್ಲವನ್ನು ತಿಳಿಗೊಳಿಸುವ ಯತ್ನ ಮಾಡಿದ್ದಾರೆ. ಬಳಿಕ ಘಟನೆ ಪೊಲೀಸ್​​ ಠಾಣೆ ಮೆಟ್ಟಿಲೇರಿದ್ದು, ದೂರು-ಪ್ರತಿದೂರುಗಳು ದಾಖಲಾಗಿವೆ.

ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ
ಪಬ್​​ ಬಳಿ ಗಲಾಟೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Dec 18, 2025 | 7:13 PM

Share

ಬೆಂಗಳೂರು, ಡಿಸೆಂಬರ್​​ 18: ಹುಡುಗಿಯರ ಮೊಬೈಲ್​​ ನಂಬರ್​ ಕೇಳಿದ ಆರೋಪ ವಿಚಾರವಾಗಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಪಬ್​​ನಲ್ಲಿ ನಡೆದ ಗಲಾಟೆ ಪೊಲೀಸ್​​ ಠಾಣೆ ಮೆಟ್ಟಿಲೆರಿದ್ದು, ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿವೆ. ನಾಗರಬಾವಿ ರಸ್ತೆಯಲ್ಲಿರುವ ಪಬ್​ನಲ್ಲಿ ನಡೆದ ಘಟನೆ ಸಂಬಂಧ ಎರಡೂ ಕಡೆಯವರ ದೂರು ಪಡೆದಿರುವ ಪೊಲೀಸರು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಘಟನೆ ಏನು?

ಪಬ್​​ನಲ್ಲಿ ಹೇಮಂತ್ ಜೊತೆಗಿದ್ದ ಯುವತಿಯರ ಫೋನ್ ನಂಬರ್ ಅನ್ನು ಉಮೇಶ್​​ ಎಂಬವರು ಕೇಳಿದ್ದಾರೆ. ಈ ವೇಳೆ ಯುವತಿಯರು ಮೊಬೈಲ್​​ ನಂಬರ್​​ ನೀಡಲು ನಿರಾಕರಿಸಿರುವ ಕಾರಣಕ್ಕೆ ಅವರ ಜೊತೆಗೆ ಉಮೇಶ್​​ ಅಸಭ್ಯವರ್ತನೆ ತೋರಿದ್ದಾರೆ. ಘಟನೆ ಬಗ್ಗೆ ಪಬ್​​ ಸಿಬ್ಬಂದಿಗೆ ಹೇಮಂತ್​​ ದೂರು ನೀಡಿದ್ದು, ಆ ಬಳಿಕ ಉಮೆಶ್​​ ಟೇಬಲ್​​ನ ಪಬ್​​ನವರು ಬೇರೆಡೆಗೆ ಶಿಫ್ಟ್​​ ಮಾಡುವ ಮೂಲಕ ಪರಿಸ್ಥಿತಿ ಶಾಂತಗೊಳಿಸಿದ್ದರು. ಆದ್ರೆ ಪಾರ್ಟಿ ಮುಗಿಸಿ ಪಬ್​​ನಿಂದ ಹೊರಬರುವಾಗ ಉಮೆಶ್​ ಮತ್ತೆ ಹೇಮಂತ್​​​ಗೆ ಬೈದಿದ್ದು ರಾದ್ಧಾಂತಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​; ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ಉಮೇಶ್​​ ಮಾತಿನಿಂದ ಹೇಮಂತ್​​ ಕೂಡ ಸಿಟ್ಟಾಗಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ಹೋಗಿದೆ. ಆಕ್ರೋಶಭರಿತರಾಗಿದ್ದ ಹೇಮಂತ್​​ ಉಮೇಶ್​​ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಪಬ್ ಬಳಿಗೆ ಕೆಲ ಹುಡುಗರನ್ನು ಕರೆಸಿ ಮತ್ತೆ ಅಟ್ಯಾಕ್​​ಗೆ ಮುಂದಾಗಿದ್ದಾರೆ. ಈ ವೇಳೆ ದೊಡ್ಡ ಗಲಾಟೆ ನಡೆಯದಂತೆ ಪಬ್ ಸಿಬ್ಬಂದಿ ಮತ್ತು ಸ್ಥಳಕ್ಕೆ ಬಂದ ಜ್ಞಾನಭಾರತಿ ಪೊಲೀಸರು ತಡೆದಿದ್ದಾರೆ. ಬಳಿಕ ಹೇಮಂತ್ ತನ್ನ ಮೇಲೆ ಹಲ್ಲೆ ಮಾಡಿದ್ದಾನೆಂದು ಉಮೇಶ್ ದೂರು ನೀಡಿದ್ದರೆ, ಅಸಭ್ಯ ವರ್ತನೆ ಆರೋಪದಡಿ ಉಮೇಶ್ ವಿರುದ್ಧ ಹೇಮಂತ್​​ ಜೊತೆಗಿದ್ದ ಯುವತಿಯರು ಕೂಡ ಪ್ರತಿದೂರು ದಾಖಲಿಸಿದ್ದಾರೆ. ಇಬ್ಬರ ದೂರಿನ ಅನ್ವಯ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ