ಬೆಂಗಳೂರು: ವೃದ್ಧರಿಂದ ಸಿನಿಮೀಯವಾಗಿ ಎಟಿಎಂ ಹಣ ಎಗರಿಸುತ್ತಿದ್ದ ಮೂವರು ಉತ್ತರ ಭಾರತೀಯರ ಬಂಧನ

| Updated By: ವಿವೇಕ ಬಿರಾದಾರ

Updated on: Feb 23, 2025 | 8:03 AM

ಅವರೆಲ್ಲ ಉತ್ತರ ಭಾರತ ಮೂಲದವರು. ಬೆಂಗಳೂರಿಗೆ ಬಂದು ದುಡಿದು ಬದುಕದೆ ಖತರ್ನಾಕ್ ಕೆಲಸಕ್ಕಿಳಿದಿದ್ದರು. ಎಟಿಎಂಗಳಿಗೆ ಬರುವ ವೃದ್ಧರನ್ನೇ ಗುರಿಯಾಗಿಸಿ ಹಣ ಎಗುರಿಸುತ್ತಿದ್ದರು. ವೃದ್ಧರಿಂದ ಹಣ ದೋಚು ಮೂಲಕ ನಗರದಲ್ಲಿ ಆರಾಮದ ಜೀವನ ನಡೆಸುತ್ತಿದ್ದರು. ಇಂತಹ ಕಿಲಾಡಿ ಹೈದರನ್ನು ಪುಲಕೇಶಿನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಂಗಳೂರು: ವೃದ್ಧರಿಂದ ಸಿನಿಮೀಯವಾಗಿ ಎಟಿಎಂ ಹಣ ಎಗರಿಸುತ್ತಿದ್ದ ಮೂವರು ಉತ್ತರ ಭಾರತೀಯರ ಬಂಧನ
ಬಂಧಿತ ಆರೋಪಿಗಳಾದ ನಯಾಜ್, ಸುಭಾಂಸು ಮತ್ತು ರಜೀಬ್
Follow us on

ಬೆಂಗಳೂರು, ಫೆಬ್ರವರಿ 22: ಎಟಿಎಂ, ಜನ ಯಾವಾಗ ಬೇಕೋ ಆಗ ಹಣ ಪಡೆದುಕೊಳ್ಳಲು ಇರು ಆಟೋಮಿಟಿಕ್ ಟೆಲ್ಲರ್ ಮಿಷನ್. ಇಂತ ಮಿಷನ್ ಇರುವ ಜಾಗಗಳು ಅದೆಷ್ಟು ಸುರಕ್ಷಿತವಾಗಿದ್ದರೂ ಸಾಕಾಗುವುದಿಲ್ಲ. ಅದರಲ್ಲೂ ಹಣ ವಿತ್ ಡ್ರಾ ಮಾಡುವವರು ತಮ್ಮ ಎಚ್ಚರಿಕೆಯಲ್ಲಿ ತಾವಿಲ್ಲ ಎಂದರೆ ಖತರ್ನಾಕ್ ಕದೀಮರ ಬುಟ್ಟಿಗೆ ಬೀಳಬೇಕಾಗುತ್ತದೆ. ಸದ್ಯ ಬೆಂಗಳೂರಿನಲ್ಲೂ ಇಂತಹದ್ದೇ ಘಟನೆ ನಡೆದಿದೆ.

ಉತ್ತರ ಭಾರತ ಮೂಲದ ಮೂವರು ಯುವಕರು ಎಟಿಎಂಗಳಿಗೆ ಬರುತ್ತಿದ್ದ ಅಮಾಯಕರ ವೃದ್ಧರನ್ನು ಯಾಮಾರಿಸುತ್ತಿದ್ದರು. ರಜೀಬ್, ಸುಭಾಂಸು ಮತ್ತು ನಯಾಜ್ ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದರು. ಮೈ ಬಗ್ಗಿಸಿ ದುಡಿಯುವುದನ್ನು ಮರೆತಿದ್ದ ಈ ಮೂವರು ಫ್ರೆಜರ್ ಟೌನ್, ಶಿವಾಜಿನಗರ ಸುತ್ತಮುತ್ತಲ ನಿರ್ಜನ ಎಟಿಎಂಗಳ ಬಳಿಯೇ ಸುತ್ತಾಡುತ್ತಿದ್ದರು. ಬಳಿಕ ಅಲ್ಲಿಗೆ ಬರುತ್ತಿದ್ದ ವೃದ್ಧರನ್ನೇ ವಂಚಿಸುತ್ತಿದ್ದರು.

ವೃದ್ಧರನ್ನು ಯುವಕರು ವಂಚಿಸುತ್ತಿದ್ದುದು ಹೇಗೆ?

  • ಎಟಿಎಂಗಳಿಗೆ ಬರುವ ವೃದ್ಧರಿಗೆ ಸಹಾಯ ಮಾಡುವ ನೆಪದಲ್ಲಿ ಹತ್ತಿರ ಹೋಗುತ್ತಿದ್ದರು.
  • ಹಣ ವಿತ್​ಡ್ರಾ ಮಾಡಿಕೊಡುತ್ತೇವೆ ಎಂದು ಅಸಲಿ ಎಟಿಎಂ ಕಾರ್ಡ್ ಪಡೆದುಕೊಳ್ಳುತ್ತಿದ್ದರು.
  • ಆದರೆ ತಮ್ಮ ಬಳಿ ಇದ್ದ ನಕಲಿ ಕಾರ್ಡ್ ಹಾಕಿ ಕಾರ್ಡ್ ಸರಿ ಇಲ್ಲ ಎನ್ನುತ್ತಿದ್ದರು.
  • ವೃದ್ಧರು ಹೋದ ಬಳಿಕ ಎಟಿಎಂ ಪಿನ್ ಬಳಸಿ ಹಣ ಡ್ರಾ ಮಾಡುತ್ತಿದ್ದರು.
  • ಅದೇ ರೀತಿ ಎಟಿಎಂನಲ್ಲಿ ಹಣ ಹೊರಬರುವ ಜಾಗವನ್ನು ಬ್ಲಾಕ್ ಮಾಡಿ ಹೊಂಚುಹಾಕುತ್ತಿದ್ದರು.
  • ಹಣ ಡ್ರಾ ಮಾಡಿದವರಿಗೆ ಹಣ ಸಿಗದೆ ಅವರು ಅಲ್ಲಿಂದ ಹೋದ ಬಳಿಕ ಅ ಹಣ ಪಡೆಯುತ್ತಿದ್ದರು.

ಇದನ್ನೂ ಓದಿ: ನನ್ನ ಹೆಂಡತಿಯನ್ನ ಯಾಕೆ ಆಸ್ಪತ್ರೆಗೆ ದಾಖಲಿಸಿದೆ: ಪತ್ನಿ ಸ್ನೇಹಿತೆ ಮೇಲೆ ಹಲ್ಲೆ ಮಾಡಿದ ಗಂಡ

ಸಿನಿಮೀಯವಾಗಿ ಎಟಿಎಂ ಹಣ ಹಾಗೂ ಎಟಿಎಂಗೆ ಬರುವ ವೃದ್ಧರಿಂದ ಹಣ ಕಸಿಯುತ್ತಿದ್ದ ಈ ಆಸಾಮಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ವಂಚನೆಗೆ ಒಳಗಾದ ವೃದ್ದರೊಬ್ಬರು ಪುಲಕೇಶಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಆರೋಪಿಗಳ‌ ಗುರುತು ಪತ್ತೆ ಹಚ್ಚಿದ ಪೊಲೀಸರು, ಮೂವರನ್ನೂ ಹೆಡೆಮುರಿ ಕಟ್ಟಿದ್ದಾರೆ. ಏನೇ ಇರಲಿ, ಒಟ್ಟಿನಲ್ಲಿ ಎಟಿಎಂಗಳಲ್ಲಿ ಹಣ ಡ್ರಾ ಮಾಡುವ ಮುನ್ನ ಆದಷ್ಟು ಎಚ್ಚರಿಕೆ ವಹಿಸುವುದು ಒಳ್ಳೆಯದು.

ವರದಿ: ಪ್ರದೀಪ್ ಚಿಕ್ಕಾಟಿ ‘ಟಿವಿ9’

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Sat, 22 February 25