AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ 1 ಕೋಟಿ ರೂ. ಮೌಲ್ಯದ ಗಾಂಜಾ ಸರಬರಾಜು: ಆರೋಪಿಗಳು ಅರೆಸ್ಟ್​

ಬೆಂಗಳೂರು ರೈಲ್ವೆ ಪೊಲೀಸರು 1 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳು ರೈಲು ಮೂಲಕ ಆಂಧ್ರಪ್ರದೇಶ, ತಮಿಳುನಾಡು ಮತ್ತು ಓಡಿಶಾಗಳಿಗೆ ಗಾಂಜಾ ಸಾಗಾಟ ಮಾಡುತ್ತಿದ್ದರು. ಹೊಸ ವರ್ಷದ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ ಮತ್ತು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಅಪಾಯಕಾರಿ ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ.

ರೈಲಿನಲ್ಲಿ 1 ಕೋಟಿ ರೂ. ಮೌಲ್ಯದ ಗಾಂಜಾ ಸರಬರಾಜು: ಆರೋಪಿಗಳು ಅರೆಸ್ಟ್​
ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 27, 2024 | 2:32 PM

Share

ಬೆಂಗಳೂರು, ಡಿಸೆಂಬರ್​ 27: ರೈಲಿನಲ್ಲಿ (Train) ಕೆಜಿಗಟ್ಟಲೇ ಗಾಂಜಾ (Ganja) ಸರಬರಾಜು ಮಾಡುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರೆ. ಆರೋಪಿಗಳ ಬಳಿ ಇದ್ದ, ಬರೊಬ್ಬರಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಅಲರ್ಟ್​ ಆಗಿದ್ದು, ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳ ಚೆಕ್​​ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಹೀಗಾಗಿ, ಪೆಡ್ಲರ್​ಗಳು ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ಪೊಲೀಸ್ ಶ್ವಾನಕ್ಕೂ ವಾಸನೆ ಬಾರದ ರೀತಿ ರೈಲಿನಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದಾರೆ. ಪ್ರಶಾಂತಿ ಮತ್ತು ಹಟಿಯಾ ಎಕ್ಸ್​​​ಪ್ರೆಸ್ ರೈಲಿನಲ್ಲಿ ಆಂದ್ರಪ್ರದೇಶ, ತಮಿಳುನಾಡು, ಓಡಿಶಾಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪೆಡದ ಬೆಂಗಳೂರು ರೈಲ್ವೆ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿ ಇದ್ದ ಟ್ರ್ಯಾಲಿ ಬ್ಯಾಗ್​ಗಳಲ್ಲಿ ಗಾಂಜಾ ಪತ್ತೆಯಾಗಿದೆ. ಕೂಡಲೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ಗಾಂಜಾವನ್ನು ಸೀಜ್​ ಮಾಡಿದ್ದಾರೆ.

ರೌಡಿಶೀಟರ್​ಗಳ ಮನೆಗಳ ಮೇಲೆ ಸಿಸಿಬಿ ರೇಡ್​

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಿಸಿಬಿ ಅಧಿಕಾರಿಗಳು ಬೆಂಗಳೂರಿನಲ್ಲಿ ರೌಡಿಶೀಟರ್​ಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಯಲಹಂಕ ಠಾಣಾ ವ್ಯಾಪ್ತಿಯ ವಿಲ್ಸನ್​​ಗಾರ್ಡನ್​​ ನಾಗ, ಡಬಲ್​ ಮೀಟರ್​ ಮೋಹನ್ ಸಹಚರ, ರೌಡಿಶೀಟರ್​ ಪುನೀತ್ ಸೇರಿದಂತೆ 20ಕ್ಕೂ ಅಧಿಕ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ದಾಳಿಯಲ್ಲಿ ರೌಡಿಶೀಟರ್​ ಪುನೀತ್ ಮನೆಯಲ್ಲಿ ಲಾಂಗ್​, ಡ್ಯಾಗರ್​ ಪತ್ತೆಯಾಗಿದೆ. ಸಿಸಿಬಿ ಪೊಲೀಸರು ಹತ್ತಕ್ಕೂ ಅಧಿಕ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ರೌಡಿಶೀಟರ್​​ ಪುನೀತ್​ನನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದೆ.

3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ

ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಡ್ರಗ್​ ಪೆಡ್ಲರ್​ಗಳನ್ನು ಬಂಧಿಸಿದ್ದರು. ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಹೊಸ ವರ್ಷಾಚರಣೆಗೆಂದು ಆರೋಪಿಗಳು ಸೋಲದೇವನಹಳ್ಳಿ ಬಳಿ ಡ್ರಗ್ಸ್ ಸಂಗ್ರಹಿಸಿದ್ದರು.

ಈ ವಿಚಾರ ತಿಳಿಸಿದ ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ ಮಾಡಿದರು. ದಾಳಿ ವೇಳೆ, 1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಪತ್ತೆಯಾಗಿವೆ. ಕೂಡಲೆ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ಮಾದಕ ವಸ್ತು ಜಪ್ತಿ ಮಾಡಿದ್ದರು.

ಆರೋಪಿಗಳು ಹೊಸ ವರ್ಷಾಚರಣೆ ದಿನದಂದು ಬೆಂಗಳೂರಿನಲ್ಲಿ ಮಾರಲು ಸಜ್ಜಾಗಿದ್ದರು. ಇನ್ನು, ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್​ ತರಿಸುತ್ತಿದ್ದರು. ಈ ವಿದೇಶಿ ಡ್ರಗ್​ ಪೆಡ್ಲರ್​ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದಾರೆ ಎಂದು ತನಿಖೆ ವೇಳೆ ತಿಳಿದು ಬಂದಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ