AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅವಾಂತರ: 8 ವಲಯಗಳ ಅಧಿಕಾರಿಗಳ ಜೊತೆ ಬಿಬಿಎಂಪಿ ಕಮಿಷನರ್ ಸಭೆ, ಕಟ್ಟುನಿಟ್ಟಿನ ಸೂಚನೆ

ರಾಜಧಾನಿಯಲ್ಲಿ ಸುರಿದ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯಿಂದ ಮರಗಳು ಬಿದ್ದು ಹಾನಿಯಾದರೆ, ಒಂದಷ್ಟು ಕಡೆ ಮಳೆ ನೀರು ಮನೆಯೊಳೆಗೆ ನುಗ್ಗಿ ಜನರು ಹೈರಾಣಾಗಿದ್ದಾರೆ. ಹೀಗಾಗಿ ಬಿಬಿಎಂ ಸೋಮವಾರ ಸಭೆ ನಡೆಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಸಭೆ ನಡೆಸಿ, ಸಿದ್ಧತೆಗಳ ಬಗ್ಗೆ ಚರ್ಚಿಸಿದ್ದಾರೆ.

ಮಳೆ ಅವಾಂತರ: 8 ವಲಯಗಳ ಅಧಿಕಾರಿಗಳ ಜೊತೆ ಬಿಬಿಎಂಪಿ ಕಮಿಷನರ್ ಸಭೆ, ಕಟ್ಟುನಿಟ್ಟಿನ ಸೂಚನೆ
ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್​ ಸಭೆ
ಶಾಂತಮೂರ್ತಿ
| Edited By: |

Updated on:May 14, 2024 | 7:56 AM

Share

ಬೆಂಗಳೂರು, ಮೇ 14: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಳೆದ 3-4 ದಿನಗಳಿಂದ ಮಳೆ (Rain) ಸುರಿದು ಹಲವು ಅವಾಂತರಗಳು ಸೃಷ್ಟಿಯಾಗಿವೆ. ಮಳೆಗೆ ಮರಗಳು ಬಿದ್ದು ಸಮಸ್ಯೆಯಾದರೆ, ಅಂಡರ್ ಪಾಸ್, ರಸ್ತೆಗಳಲ್ಲಿ ನೀರು ನಿಂತು ಜನರು ಸಂಕಷ್ಟ ಅನುಭವಿಸಿದರು. ಮಳೆಯಿಂದಾದ ಅವಾಂತರಗಳ ಬಗ್ಗೆ ಟಿವಿ9 ನಿರಂತರ ವರದಿ ಮಾಡಿದ ಬೆನ್ನಲ್ಲೇ ಅಲರ್ಟ್ ಆದ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಸೋಮವಾರ (ಮೇ.13) ರಂಧು ಸಭೆ ನಡೆಸಿದೆ. ಮಳೆ ನೀರಿನ ನಿರ್ವಹಣೆ, ಮಳೆಗಾಲದ ಸಿದ್ಧತೆಗಳ ಬಗ್ಗೆ 8 ವಲಯಗಳ ಅಧಿಕಾರಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಭೆ ನಡೆಸಿ, ಮಳೆಗಾಲದ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.

ಸದ್ಯ ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಹೆಚ್ಚು ಮಳೆಯಾಗಿದ್ದು, ಇದುವರೆಗೆ ಸುಮಾರು 150 ಕಡೆ ನೀರು ನಿಂತು ಸಮಸ್ಯೆಯಾಗಿದೆ. ಅಲ್ಲದೆ 325 ಕಡೆ ಮರಗಳು ಧರೆಗುರುಳಿದ್ದು, ಪಾಲಿಕೆ ವತಿಯಿಂದ 320 ಮರಗಳನ್ನು ತೆರವು ಮಾಡಲಾಗಿದೆ ಅಂತ ಮಾಹಿತಿ ನೀಡಿದ ತುಷಾರ್ ಗಿರಿನಾಥ್, ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಪ್ರತಿ ವಾರ್ಡ್​ಗೆ 30 ಲಕ್ಷ ಮೀಸಲಿಟ್ಟಿದ್ದೇವೆ. ಅಲ್ಲದೆ ಬ್ರ್ಯಾಂಡ್​ ಬೆಂಗಳೂರಿನ ಅಡಿಯಲ್ಲಿ 10 ಕೋಟಿ ಮೀಸಲಿಟ್ಟಿದ್ದೇವೆ. ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಿದ್ದೇವೆ. ಅಲ್ಲದೆ ಶಿಥಿಲಾವಸ್ಥೆ ತಲುಪಿರುವ ಕಟ್ಟಡಗಳ ತೆರವಿಗೂ ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಇದನ್ನೂ ಓದಿ: ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳೇನು? ಇಲ್ಲಿದೆ ರಿಪೋರ್ಟ್

ಇನ್ನು ರಾಜಕಾಲುವೆಗಳ ನೀರಿನ ಮಟ್ಟ ತಿಳಿಯಲು ಸೆನ್ಸಾರ್ ಅಳವಡಿಸಿರುವುದು ಹೇಗೆ ಕಾರ್ಯ ನಿರ್ವಹಿಸುತ್ತೆ ಅನ್ನೋ ಬಗ್ಗೆ ಬಿಬಿಎಂಪಿಯ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ವಿವರಿಸಿದರು. ನೀರಿನ ಮಟ್ಟ ತಿಳಿದು ಅಪಾಯ ಇರುವ ಸ್ಥಳಗಳಲ್ಲಿ ಅಲರ್ಟ್ ಆಗಲು ಈ ಟೆಕ್ನಾಲಜಿ ಸಹಕಾರಿಯಾಗಿದ ಎಂದ ಪ್ರಹ್ಲಾದ್, ಕಂಟ್ರೋಲ್ ರೂಂನ ಕಾರ್ಯನಿರ್ವಹಣೆ ಬಗ್ಗೆ ವಿವರಿಸಿದರು.

ಒಟ್ಟಿನಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮೇಲೆ ಬಾವಿ ತೋಡಿದರು ಮಾತಿನ ಹಾಗೆ ಸಿಟಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಪಾಲಿಕೆ ಇದೀಗ ಅಲರ್ಟ್ ಆಗಿದೆ. ಅಂಡರ್ ಪಾಸ್, ರಸ್ತೆಗುಂಡಿ, ಪ್ರವಾಹಸ್ಥಿತಿ ಎದುರಿಸಲು ಸಜ್ಜಾಗಿದ್ದೇವೆ ಅಂತಿರೋ ಪಾಲಿಕೆ, ಈ ಬಾರಿಯ ಮಳೆಗಾಲವನ್ನ ಹೇಗೆ ನಿಭಾಯಿಸುತ್ತೆ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:55 am, Tue, 14 May 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್