AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅವಾಂತರ: 8 ವಲಯಗಳ ಅಧಿಕಾರಿಗಳ ಜೊತೆ ಬಿಬಿಎಂಪಿ ಕಮಿಷನರ್ ಸಭೆ, ಕಟ್ಟುನಿಟ್ಟಿನ ಸೂಚನೆ

ರಾಜಧಾನಿಯಲ್ಲಿ ಸುರಿದ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯಿಂದ ಮರಗಳು ಬಿದ್ದು ಹಾನಿಯಾದರೆ, ಒಂದಷ್ಟು ಕಡೆ ಮಳೆ ನೀರು ಮನೆಯೊಳೆಗೆ ನುಗ್ಗಿ ಜನರು ಹೈರಾಣಾಗಿದ್ದಾರೆ. ಹೀಗಾಗಿ ಬಿಬಿಎಂ ಸೋಮವಾರ ಸಭೆ ನಡೆಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಸಭೆ ನಡೆಸಿ, ಸಿದ್ಧತೆಗಳ ಬಗ್ಗೆ ಚರ್ಚಿಸಿದ್ದಾರೆ.

ಮಳೆ ಅವಾಂತರ: 8 ವಲಯಗಳ ಅಧಿಕಾರಿಗಳ ಜೊತೆ ಬಿಬಿಎಂಪಿ ಕಮಿಷನರ್ ಸಭೆ, ಕಟ್ಟುನಿಟ್ಟಿನ ಸೂಚನೆ
ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್​ ಸಭೆ
ಶಾಂತಮೂರ್ತಿ
| Edited By: |

Updated on:May 14, 2024 | 7:56 AM

Share

ಬೆಂಗಳೂರು, ಮೇ 14: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಳೆದ 3-4 ದಿನಗಳಿಂದ ಮಳೆ (Rain) ಸುರಿದು ಹಲವು ಅವಾಂತರಗಳು ಸೃಷ್ಟಿಯಾಗಿವೆ. ಮಳೆಗೆ ಮರಗಳು ಬಿದ್ದು ಸಮಸ್ಯೆಯಾದರೆ, ಅಂಡರ್ ಪಾಸ್, ರಸ್ತೆಗಳಲ್ಲಿ ನೀರು ನಿಂತು ಜನರು ಸಂಕಷ್ಟ ಅನುಭವಿಸಿದರು. ಮಳೆಯಿಂದಾದ ಅವಾಂತರಗಳ ಬಗ್ಗೆ ಟಿವಿ9 ನಿರಂತರ ವರದಿ ಮಾಡಿದ ಬೆನ್ನಲ್ಲೇ ಅಲರ್ಟ್ ಆದ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಸೋಮವಾರ (ಮೇ.13) ರಂಧು ಸಭೆ ನಡೆಸಿದೆ. ಮಳೆ ನೀರಿನ ನಿರ್ವಹಣೆ, ಮಳೆಗಾಲದ ಸಿದ್ಧತೆಗಳ ಬಗ್ಗೆ 8 ವಲಯಗಳ ಅಧಿಕಾರಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಭೆ ನಡೆಸಿ, ಮಳೆಗಾಲದ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.

ಸದ್ಯ ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಹೆಚ್ಚು ಮಳೆಯಾಗಿದ್ದು, ಇದುವರೆಗೆ ಸುಮಾರು 150 ಕಡೆ ನೀರು ನಿಂತು ಸಮಸ್ಯೆಯಾಗಿದೆ. ಅಲ್ಲದೆ 325 ಕಡೆ ಮರಗಳು ಧರೆಗುರುಳಿದ್ದು, ಪಾಲಿಕೆ ವತಿಯಿಂದ 320 ಮರಗಳನ್ನು ತೆರವು ಮಾಡಲಾಗಿದೆ ಅಂತ ಮಾಹಿತಿ ನೀಡಿದ ತುಷಾರ್ ಗಿರಿನಾಥ್, ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಪ್ರತಿ ವಾರ್ಡ್​ಗೆ 30 ಲಕ್ಷ ಮೀಸಲಿಟ್ಟಿದ್ದೇವೆ. ಅಲ್ಲದೆ ಬ್ರ್ಯಾಂಡ್​ ಬೆಂಗಳೂರಿನ ಅಡಿಯಲ್ಲಿ 10 ಕೋಟಿ ಮೀಸಲಿಟ್ಟಿದ್ದೇವೆ. ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಿದ್ದೇವೆ. ಅಲ್ಲದೆ ಶಿಥಿಲಾವಸ್ಥೆ ತಲುಪಿರುವ ಕಟ್ಟಡಗಳ ತೆರವಿಗೂ ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಇದನ್ನೂ ಓದಿ: ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳೇನು? ಇಲ್ಲಿದೆ ರಿಪೋರ್ಟ್

ಇನ್ನು ರಾಜಕಾಲುವೆಗಳ ನೀರಿನ ಮಟ್ಟ ತಿಳಿಯಲು ಸೆನ್ಸಾರ್ ಅಳವಡಿಸಿರುವುದು ಹೇಗೆ ಕಾರ್ಯ ನಿರ್ವಹಿಸುತ್ತೆ ಅನ್ನೋ ಬಗ್ಗೆ ಬಿಬಿಎಂಪಿಯ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ವಿವರಿಸಿದರು. ನೀರಿನ ಮಟ್ಟ ತಿಳಿದು ಅಪಾಯ ಇರುವ ಸ್ಥಳಗಳಲ್ಲಿ ಅಲರ್ಟ್ ಆಗಲು ಈ ಟೆಕ್ನಾಲಜಿ ಸಹಕಾರಿಯಾಗಿದ ಎಂದ ಪ್ರಹ್ಲಾದ್, ಕಂಟ್ರೋಲ್ ರೂಂನ ಕಾರ್ಯನಿರ್ವಹಣೆ ಬಗ್ಗೆ ವಿವರಿಸಿದರು.

ಒಟ್ಟಿನಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮೇಲೆ ಬಾವಿ ತೋಡಿದರು ಮಾತಿನ ಹಾಗೆ ಸಿಟಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಪಾಲಿಕೆ ಇದೀಗ ಅಲರ್ಟ್ ಆಗಿದೆ. ಅಂಡರ್ ಪಾಸ್, ರಸ್ತೆಗುಂಡಿ, ಪ್ರವಾಹಸ್ಥಿತಿ ಎದುರಿಸಲು ಸಜ್ಜಾಗಿದ್ದೇವೆ ಅಂತಿರೋ ಪಾಲಿಕೆ, ಈ ಬಾರಿಯ ಮಳೆಗಾಲವನ್ನ ಹೇಗೆ ನಿಭಾಯಿಸುತ್ತೆ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:55 am, Tue, 14 May 24

Follow Us
Shanthamurthy
Shanthamurthy
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ